Actor Krishna Death: ಟಾಲಿವುಡ್‌ ಸೂಪರ್‌ಸ್ಟಾರ್‌ ಮಹೇಶ್‌ ಬಾಬು ತಂದೆ ಇನ್ನಿಲ್ಲ

By BK AshwinFirst Published Nov 15, 2022, 7:15 AM IST
Highlights

ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟ ಕೃಷ್ಣ ಮಂಗಳವಾರ ಬೆಳಗ್ಗಿನ ಜಾವ 4 ಗಂಟೆ ವೇಳೆಗೆ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೃಷ್ಣ ಅವರಿಗೆ 80 ವರ್ಷ ವಯಸ್ಸಾಗಿತ್ತು.

ಟಾಲಿವುಡ್‌ (Tollywood) ಸೂಪರ್‌ ಸ್ಟಾರ್‌, ಖ್ಯಾತ ನಟ ಮಹೇಶ್‌ ಬಾಬು (Mahesh Babu) ತಂದೆ ಹಾಗೂ ಹಿರಿಯ ನಟ ಕೃಷ್ಣ (Krishna) ಮಂಗಳವಾರ ಬೆಳಗ್ಗಿನ ಜಾವ 4 ಗಂಟೆ ವೇಳೆಗೆ ನಿಧನರಾಗಿದ್ದಾರೆ (Death). ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹೈದರಾಬಾದ್‌ನ (Hyderabad) ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸೋಮವಾರ ನಸುಕಿನ ಜಾವ ಹಿರಿಯ ನಟ ಕೃಷ್ಣ ಅವರಿಗೆ ತೀವ್ರ ಹೃದಯಾಘಾತವಾಗಿತ್ತು. ನಿನ್ನೆಯಿಂದ ಅವರ ಆರೋಗ್ಯ (Health) ತೀವ್ರ ಹದಗೆಟ್ಟಿತ್ತು. ಕೃಷ್ಣ ಅವರಿಗೆ 80 ವರ್ಷ ವಯಸ್ಸಾಗಿತ್ತು. ಸೋಮವಾರ ನಸುಕಿನ ಜಾವ ಹೈದರಾಬಾದ್‌ನಲ್ಲಿ ಹಿರಿಯ ನಟ ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಸಿಪಿಆರ್‌ ನಡೆಸಿ ಅವರನ್ನು ಐಸಿಯುಗೆ ಶಿಫ್ಟ್‌ ಮಾಡಲಾಗಿತ್ತು. ನಂತರ ಅವರನ್ನು ವೆಂಟಿಲೇಟರ್‌ಗೆ ಶಿಫ್ಟ್‌ ಮಾಡಲಾಗಿತ್ತು.

ಇದನ್ನು ಓದಿ: Actor Krishna Health Update; ಸ್ಥಿತಿ ಗಂಭೀರ, ಮಹೇಶ್ ಬಾಬು ಕುಟುಂಬದಲ್ಲಿ ಹೆಚ್ಚಿದ ಆತಂಕ

ಹಿರಿಯ ನಟ ಹಾಗೂ ಮಹೇಶ್‌ ಬಾಬು ತಂದೆ ಕೃಷ್ಣ ಅವರ ನಿಧನಕ್ಕೆ ನಟ ಸಾಯ ಧರಮ್ ತೇಜ್‌ ಸಹ ಟ್ವೀಟ್‌ ಮಾಡಿದ್ದು, ಸಂತಾಪ ಸೂಚಿಸಿದ್ದಾರೆ. 

Extremely saddened at the loss of garu.
can't imagine how tough this could be.
Wishing all the strength to anna and the family.
May your soul RIP & you'll always be alive in our hearts sir.
om shanti 🙏 pic.twitter.com/QoaBdFrSSI

— Sai Dharam Tej (@IamSaiDharamTej)

ನಿನ್ನೆ ಮಧ್ಯಾಹ್ನ ಆಸ್ಪತ್ರೆಯಿಂದ ಬುಲೆಟಿನ್ ಬಿಡುಗಡೆಯಾಗಿದ್ದು, ಇದರಲ್ಲಿ ಹಿರಿಯ ನಟ ಕೃಷ್ಣ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಐಸಿಯುಗೆ ಶಿಫ್ಟ್ ಮಾಡಲಾಗಿದೆ ಎನ್ನುವ ಮಾಹಿತಿ ಬಹಿರಂಗವಾಗಿದೆ. ಈ ಹಿನ್ನೆಲೆ ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿರುವ ಕೃಷ್ಣ ಅವರ ಆರೋಗ್ಯ ಸ್ಥಿತಿ ಮಹೇಶ್ ಬಾಬು ಕುಟುಂಬಕ್ಕೆ ಆತಂಕ ಮೂಡಿಸಿತ್ತು. 


.
ಕೃಷ್ಣ, ಮೂಲ ಹೆಸರು ಘಟ್ಟಮನೇನಿ ಶಿವ ರಾಮ ಕೃಷ್ಣ ಮೂರ್ತಿ, ಅವರು 350 ಚಿತ್ರಗಳಲ್ಲಿ ನಟಿಸಿದ್ದಾರೆ ಮತ್ತು ಆ ಕಾಲದ ಅಗ್ರ ನಟರಲ್ಲಿ ಒಬ್ಬರು. ಅವರು ಯಶಸ್ವಿ ನಿರ್ದೇಶಕ ಮತ್ತು ನಿರ್ಮಾಪಕರೂ ಆಗಿದ್ದರು. ಅವರಿಗೆ 2009 ರಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇದನ್ನೂ ಓದಿ: ತೀವ್ರ ಅನಾರೋಗ್ಯ; ಮಹೇಶ್ ಬಾಬು ತಂದೆ ಕೃಷ್ಣ ಆಸ್ಪತ್ರೆಗೆ ದಾಖಲು

ಹಿರಿಯ ನಟ ಕೃಷ್ಣ ಅವರು 6 ದಶಕಗಳಿಂದ ತೆಲುಗು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. ಅವರು 'ಕುಲ ಗೋತ್ರಲು' , 'ಪರವು ಪ್ರತಿಷ್ಠಾ' ಮತ್ತು 'ಪದಂಡಿ ಮುಂದುಕು' ಚಿತ್ರಗಳಲ್ಲಿ ಸಣ್ಣ ಪಾತ್ರಗಳನ್ನು ಮಾಡುವ ಮೂಲಕ  ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. 

ಶ್ರೀ ಕೃಷ್ಣ ಅವರು ನಟ ಮಹೇಶ್ ಬಾಬು ಅವರ ತಂದೆ ಮತ್ತು ಟಿಡಿಪಿ ನಾಯಕ ಜಯ್ ಗಲ್ಲಾ ಅವರ ಮಾವ. ಅವರ ಪತ್ನಿ ಮತ್ತು ಮಹೇಶ್ ಬಾಬು ಅವರ ತಾಯಿ ಇಂದಿರಾ ದೇವಿ ಈ ವರ್ಷದ ಸೆಪ್ಟೆಂಬರ್‌ನಲ್ಲಿ ನಿಧನರಾದರು. ಅವರ ಹಿರಿಯ ಮಗ ರಮೇಶ್ ಬಾಬು ಜನವರಿಯಲ್ಲಿ ಮೃತಪಟ್ಟಿದ್ದರು. ಅವರ ಎರಡನೇ ಪತ್ನಿಯಾಗಿದ್ದ ನಟಿ ವಿಜಯ ನಿರ್ಮಲಾ ಅವರು ಸಹ 2019 ರಲ್ಲಿ ಕೊನೆಯುಸಿರೆಳೆದಿದ್ದರು. ಒಟ್ಟಾರೆ ಈ ವರ್ಷ ಮಹೇಶ್ ಬಾಬು ಕುಟುಂಬಕ್ಕೆ ತುಂಬಾ ಕಷ್ಟದ ಸಮಯವಾಗಿದೆ. 

ಇದನ್ನೂ ಓದಿ: Mahesh Babu Mother Death; ಅಜ್ಜಿ ಮೃತದೇಹದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಸಿತಾರಾ; ಮಗಳನ್ನು ಸಂತೈಸಿ ಕಣ್ಣೀರಿಟ್ಟ ನಟ

ಸಾಮಾಜಿಕ ಜಾಲತಾಣದಲ್ಲಿ ಚಿತ್ರ ರಸಿಕರು, ಮಹೇಶ್ ಬಾಬು ಅಭಿಮಾನಿಗಳು ಹಾಗೂ ಹಲವರು ನಟ ಕೃಷ್ಣ ನಿಧನಕ್ಕೆ ಸಾಮತಾಪ ಸೂಚಿಸುತ್ತಿದ್ದಾರೆ. 

click me!