ಹೃದಯಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ನಟ ಬಿಜಯ್ ಚೇತರಿಕೆ!

Suvarna News   | Asianet News
Published : May 29, 2020, 12:16 PM IST
ಹೃದಯಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ನಟ ಬಿಜಯ್ ಚೇತರಿಕೆ!

ಸಾರಾಂಶ

ಸೋಷಿಯಲ್ ಮೀಡಿಯಾದಲ್ಲಿ ವದಂತಿ ಬೇಡ. ಓಡಿಯಾ ನಟ ಬಿಜಯ್ ಮೊಹಂತಾ ಆರೋಗ್ಯದಲ್ಲಿ ಚೇತರಿಕೆ. ಪತ್ನಿಯಿಂದ ಸ್ಪಷ್ಟನೆ...

ಒಡಿಯಾ ಭಾಷಾ ನಟ ಬಿಜಯ್ ಮೊಹಂತಿ ಹೈದರಾಬಾದ್‌ನ ಮಗಳ ಮನೆಯಲ್ಲಿ ಲಾಕ್‌ಡೌನ್‌‌ ಕಾರಣದಿಂದ ಲಾಕ್ ಆಗಿ, ಸಮಯ ಕಳೆಯುತ್ತಿದ್ದರು. ಆದರೆ ಮೇ.25ರಂದು ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಈ ಬಗ್ಗೆ ಎಲ್ಲಿಯೂ ಬಹಿರಂಗ ಮಾಡಬಾರದು ಎಂದು ಕುಟುಂಬಸ್ಥರು ಈ ವಿಚಾರವಾಗಿ ಮೌನವಾಗಿದ್ದರು. ಆದರೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಈ ವದಂತಿಗೆ ಪತ್ನಿ ಬಿಜಯ್ ಅನಾರೋಗ್ಯದ ಬಗ್ಗೆ ಮಾತನಾಡಿ, ಸ್ಪಷ್ಟನೆ ನೀಡಿದ್ದಾರೆ.

ಹಿರಿಯ ನಟಿ ವಾಣಿಶ್ರೀಗೆ ಪುತ್ರಶೋಕ, ಮಗ ವೆಂಕಟೇಶ್ ನಿಧನ

ಒಡಿಯಾ ಸಿನಿ ಆರ್ಟಿಸ್ಟ್‌ ಅಸೋಸಿಯೇಷನ್‌ ಪ್ರಧಾನ ಕಾರ್ಯದರ್ಶಿ ಶ್ರೀತಮ್‌ ದಾಸ್‌ ಆರೋಗ್ಯ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. 'ಈ ಹಿಂದೆಯೇ ಮೊಹಂತಿಗೆ  ಆರೋಗ್ಯ ಸರಿ ಇರಲಿಲ್ಲ. ಅದರ ಸಲುವಾಗಿ ಟೆಸ್ಟ್‌ ಮಾಡಿಸಿಕೊಳ್ಳಲು ಹೋಗಿದ್ದರು. ಕಾಂಪ್ಲಿಕೇಟೆಡ್‌ ಅಪೆಂಡೊಕ್ಟಮಿ ಇದ್ದ ಕಾರಣ ಕೊಂಚ ಡಿಪ್ರೆಸ್‌ ಆಗಿದ್ದರು. ಅದರ ಟ್ರೀಟ್ಮೆಂಟ್‌ ಪಡೆದು ಮನೆಗೆ ಹಿಂದಿರುಗುವಾಗ ಹೃದಯಾಘಾತವಾಗಿದೆ. ತಕ್ಷಣವೇ ICUಗೆ ದಾಖಲು ಮಾಡಲಾಗಿತ್ತು. ವೆಂಟಿಲೇಟರ್‌ ಅಳವಡಿಸಲಾಗಿದೆ.  ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ,' ಎಂದು ತಿಳಿಸಿದ್ದಾರೆ.

ಹಾರ್ಟ್ ಅಟ್ಯಾಕ್‌ಗೂ ಮುನ್ನ ದೇಹ ಕೊಡುತ್ತೆ ಈ ಸೂಚನೆ 

ಬಿಜಯ್ ಮೊಹಂತಿಗೆ ವೆಂಟಿಲೇಟರ್ಸ್‌ ಹಾಕಿರುವ ಕಾರಣ ಅವರ ಆರೋಗ್ಯದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ವದಂತಿಗಳು ಹರಿದಾಡುತ್ತಿದ್ದವು. ಅದರಲ್ಲಿಯೂ ಕೊರೋನಾ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಎಲ್ಲರೂ ಕೋವೀಡ್ ಎಂದೇ ತಪ್ಪು ತಿಳಿಯಲು ಆರಂಭಿಸಿದ್ದರು. 'ಅವರು ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ದಯವಿಟ್ಟು ಯಾರೂ ತಪ್ಪು ಸುದ್ದಿ ಹರಡಿಸಬೇಡಿ' ಎಂದು ಮನವಿ ಮಾಡಿಕೊಂಡಿದ್ದಾರೆ.

1977ರಲ್ಲಿ ಚಿಲಿಕಾ ಟೀರೆ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು. ಅನೇಕ ಹಿಟ್‌ ಸಿನಿಮಾಗಳನ್ನು ನೀಡಿರುವ ಹೆಗ್ಗಳಕೆ ಇವರದ್ದು. ಅಷ್ಟೇ ಅಲ್ಲದೇ ರಾಜಕೀಯದಲ್ಲಿಯೂ ಈ ನಟ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಮಾಧುರಿಗೆ 'ನಿನ್ನನ್ನು ತಾಯಿಯಾಗಿ ನೋಡುತ್ತೇನೆ' ಎಂದಿದ್ದ ಎಂಎಫ್ ಹುಸೇನ್; ಆದ್ರೆ ಮುಂದೆ ಆಗಿದ್ದೇನು?
ಮದುವೆ ಮುರಿದುಬಿದ್ದ ಬಳಿಕ ಸ್ಮೃತಿ ಮಂಧಾನ-ಪಲಾಶ್ ಲೈಫ್‌ ಸ್ಟೈಲ್‌ನಲ್ಲಿ ಏನೆಲ್ಲಾ ಆಗೋಯ್ತು ನೋಡಿ...!