
trouble for Vijay devarakonda: ವಿಜಯ್ ದೇವರಕೊಂಡ ವಿರುದ್ಧ ದೂರು: ಬುಡಕಟ್ಟು ಸಮುದಾಯದ ಭಾವನೆಗಳಿಗೆ ನೋವುಂಟು ಮಾಡುವ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಮೇಲೆ ನಟ ವಿಜಯ್ ದೇವರಕೊಂಡ ವಿರುದ್ಧ ದೂರು ದಾಖಲಾಗಿದೆ. ಅವರ ವಿರುದ್ಧ ಎಸ್ಸಿ/ಎಸ್ಟಿ ಕಾಯ್ದೆಯಡಿ ದೂರು ದಾಖಲಿಸಲಾಗಿರುವುದರಿಂದ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಬುಡಕಟ್ಟು ಸಮುದಾಯದ ಜಂಟಿ ಕ್ರಿಯಾ ಸಮಿತಿಯ ಅಧ್ಯಕ್ಷ ನೆನವತ್ ಅಶೋಕ್ ಕುಮಾರ್ ಈ ದೂರು ದಾಖಲಿಸಿದ್ದಾರೆ. 'ರೆಟ್ರೋ' ಚಿತ್ರದ ಬಿಡುಗಡೆ ಪೂರ್ವ ಕಾರ್ಯಕ್ರಮದಲ್ಲಿ ದೇವರಕೊಂಡ ಅವರ ಹೇಳಿಕೆಗಳು ಆಕ್ಷೇಪಾರ್ಹವಾಗಿವೆ. ಇವು ಬುಡಕಟ್ಟು ಸಮುದಾಯವನ್ನು ಅವಮಾನಿಸಿವೆ ಎಂದು ಅವರು ಆರೋಪಿಸಿದ್ದಾರೆ. ಸೈಬರಾಬಾದ್ನ ರಾಯದುರ್ಗಂ ಪೊಲೀಸ್ ಠಾಣೆಯಲ್ಲಿ ದೇವರಕೊಂಡ ವಿರುದ್ಧ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಅಷ್ಟಕ್ಕೂ ವಿಜಯ್ ದೇವರಕೊಂಡ ಹೇಳಿದ್ದೇನು?
ಹೈದರಾಬಾದ್ನಲ್ಲಿ 'ರೆಟ್ರೋ' ಚಿತ್ರದ ಪ್ರಚಾರಕ್ಕಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ವಿಜಯ್ ದೇವರಕೊಂಡ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು. ಆ ಸಮಯದಲ್ಲಿ, ಕಾಶ್ಮೀರದ ಪಹಲ್ಗಾಮ್ನಲ್ಲಿ ದಾಳಿ ನಡೆದಿತ್ತು. ಇದರ ನಂತರ, ಭಾರತ ಮತ್ತು ಪಾಕಿಸ್ತಾನದ ನಡುವೆ ವಿವಾದ ಉಂಟಾಗುತ್ತಿತ್ತು. ಅಂತಹ ಪರಿಸ್ಥಿತಿಯಲ್ಲಿ, ವಿಜಯ್ ಪಾಕಿಸ್ತಾನದ ವಿರುದ್ಧ ಮಾತನಾಡುತ್ತಿದ್ದರು. ಮಾತನಾಡುವವ ವೇಳೆ ಭಾರತ-ಪಾಕಿಸ್ತಾನ ಯುದ್ಧವನ್ನು ಬುಡಕಟ್ಟು ಸಮುದಾಯಗಳಿಗೆ ಹೋಲಿಸಿ ಮಾತನಾಡಿದ್ದರು ಎನ್ನಲಾಗಿದೆ. 'ಹಿಂದೆ ಬುಡಕಟ್ಟು ಕುಲಗಳು ಜಗಳವಾಡುತ್ತಿದ್ದಂತೆಯೇ, ಭಾರತ ಮತ್ತು ಪಾಕಿಸ್ತಾನ ಈಗ ಜಗಳವಾಡುತ್ತಿವೆ' ಎಂದು ಹೇಳಿದರು. ಈ ಹೇಳಿಕೆ ಆಕ್ಷೇಪ ವ್ಯಕ್ತಪಡಿಸಿರುವ ಸಮುದಾಯ ದೂರು ನೀಡಿದೆ.
ವಿಜಯ್ ದೇವರಕೊಂಡ ವಿರುದ್ಧ ಬುಡುಕಟ್ಟು ಸಂಘಟನೆಗಳು ಆಕ್ರೋಶ:
ವಿಜಯ್ ಅವರ ಹೇಳಿಕೆಯನ್ನು ಟೀಕಿಸಿರುವ ಸಂಘಟನೆ, ಇದು ಬುಡಕಟ್ಟು ಜನಾಂಗಕ್ಕೆ ಮಾಡಿದ ಅವಮಾನ ಎಂದು ಕರೆದಿದೆ. ಬುಡಕಟ್ಟು ಸಮುದಾಯವು ಸಾವಿರಾರು ವರ್ಷಗಳ ಶ್ರೀಮಂತ ಇತಿಹಾಸವನ್ನು ಹೊಂದಿದೆ. ಪರಿಸರ ಸಂರಕ್ಷಣೆಯಲ್ಲಿ ಅವರಿಗೆ ವಿಶೇಷ ಪಾತ್ರವಿದೆ. ನಟ ಮಾತನಾಡುವಾಗ ಯೋಚಿಸಬೇಕು, ಸತ್ಯಗಳನ್ನು ನುಡಿಯಬೇಕು ಎಂದ ಸಂಘಟನೆ, ವಿಜಯ್ ದೇವರಕೊಂಡ ಅವರ ಹೇಳಿಕೆ ವಿರುದ್ಧ ಬುಡಕಟ್ಟು ಮತ್ತು ಬುಡಕಟ್ಟು ಗುಂಪುಗಳು ರಾಜ್ಯಾದ್ಯಂತ ಆಕ್ರೋಶ ವ್ಯಕ್ತಪಡಿಸಿವೆ. ಪೊಲೀಸರಿಗೆ ಹಲವು ಸ್ಥಳಗಳಲ್ಲಿ ದೂರುಗಳು ಬಂದಿವೆ. ಈಗ ರಾಯದುರ್ಗಂ ಪೊಲೀಸರು ವಿಜಯ್ ದೇವರಕೊಂಡ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.