ಕೊರೋನಾ ಹಾವಳಿ ಹೆಚ್ಚಾಗಿರುವುದರಿಂದ ಏಪ್ರಿಲ್ 14ರ ವರೆಗೆ ಲಾಕ್ಡೌನ್ ಹೇರಲಾಗಿದೆ. ಇದರ ನಡುವೆ ಕರ್ನಾಟಕದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ್ ರಾಮ್ ಜಯಂತಿ ಆಚರಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಆದ್ರೆ, ಶರತ್ತುಗಳನ್ನು ವಿಧಿಸಿದೆ
ಬೆಂಗಳೂರು, (ಏ.01): ಕೊರೋನಾ ಆತಂಕದ ನಡುವೆಯೂ ಡಾ.ಬಾಬು ಜಗಜೀವನ್ ರಾಮ್ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ ಆಚರಿಸಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ.
ಇದೇ ಏಪ್ರಿಲ್ 5ರಂದು ಜಗಜೀವನ್ ರಾಮ್ ಮತ್ತು ಏ.14 ಅಂಬೇಡ್ಕರ್ ದಿನಾಚರಣೆಯನ್ನು ಸರಳವಾಗಿ ಆಚರಿಸಲು ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯಕ್ ಆದೇಶ ಹೊರಡಿಸಿದ್ದಾರೆ.
ಆದ್ರೆ, ಸರಳವಾಗಿ ಗುಂಪು-ಗುಂಪಾಗಿ ಕೂಡಿಕೊಂಡು ಆಚರಣೆ ಬೇಡ ಎಂದು ಶರತ್ತು ವಿಧಿಸಲಾಗಿದೆ. ಹಿಂದುಳಿದ ವರ್ಗಗಳ ಪ್ರಮುಖ ನಾಯಕರ ಹುಟ್ಟ ಹಬ್ಬ ಆಚರಣೆ ವೇಳೆ ಜನ ಸಂದಣಿ ಇಲ್ಲದಂತೆ ನೋಡಿಕೊಳ್ಳಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.