ಬೆಂಗಳೂರು, (ಏ.01): ಕೊರೋನಾ ಆತಂಕದ ನಡುವೆಯೂ ಡಾ.ಬಾಬು ಜಗಜೀವನ್ ರಾಮ್ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ ಆಚರಿಸಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ.
ಇದೇ ಏಪ್ರಿಲ್ 5ರಂದು ಜಗಜೀವನ್ ರಾಮ್ ಮತ್ತು ಏ.14 ಅಂಬೇಡ್ಕರ್ ದಿನಾಚರಣೆಯನ್ನು ಸರಳವಾಗಿ ಆಚರಿಸಲು ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯಕ್ ಆದೇಶ ಹೊರಡಿಸಿದ್ದಾರೆ.
1ರಿಂದ 8ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಪಾಸ್: ಕೊರೋನಾದಿಂದ ಸಿಕ್ತು ಗ್ರೇಸ್
ಆದ್ರೆ, ಸರಳವಾಗಿ ಗುಂಪು-ಗುಂಪಾಗಿ ಕೂಡಿಕೊಂಡು ಆಚರಣೆ ಬೇಡ ಎಂದು ಶರತ್ತು ವಿಧಿಸಲಾಗಿದೆ. ಹಿಂದುಳಿದ ವರ್ಗಗಳ ಪ್ರಮುಖ ನಾಯಕರ ಹುಟ್ಟ ಹಬ್ಬ ಆಚರಣೆ ವೇಳೆ ಜನ ಸಂದಣಿ ಇಲ್ಲದಂತೆ ನೋಡಿಕೊಳ್ಳಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.