2011ರ ವಿಶ್ವಕಪ್ ಫೈನಲ್ ಫಿಕ್ಸಿಂಗ್ ಆರೋಪ; ಸತತ 10 ಗಂಟೆ ವಿಚಾರಣೆ ಎದುರಿಸಿದ ಸಂಗಕ್ಕಾರ !

Published : Jul 03, 2020, 07:57 PM IST
2011ರ ವಿಶ್ವಕಪ್ ಫೈನಲ್ ಫಿಕ್ಸಿಂಗ್ ಆರೋಪ; ಸತತ 10 ಗಂಟೆ ವಿಚಾರಣೆ ಎದುರಿಸಿದ ಸಂಗಕ್ಕಾರ !

ಸಾರಾಂಶ

ಕೊರೋನಾ ವೈರಸ್ ನಡುವೆ 2011ರ ವಿಶ್ವಕಪ್ ಫೈನಲ್ ಪಂದ್ಯ ಫಿಕ್ಸ್ ಆರೋಪ ಜೋರಾಗಿ ಕೇಳಿ ಬರುತ್ತಿದೆ. ಶ್ರೀಲಂಕಾ ಮಾಜಿ ಕ್ರೀಡಾ ಸಚಿವ ಮಾಡಿದ ಆರೋಪ ಇದೀಗ ಕೋಲಾಹಲ ಎಬ್ಬಿಸಿದೆ. 2011ರ ವಿಶ್ವಕಪ್ ತಂಡ ಮುನ್ನಡೆಸಿದ ಕುಮಾರ ಸಂಗಕ್ಕಾರ ಇದೀಗ ಸತತ 10 ಗಂಟೆ ವಿಚಾರಣೆ ಎದುರಿಸಿದ್ದಾರೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.

ಕೊಲೊಂಬೊ(ಜು.03): ಭಾರತ ಹಾಗೂ ಶ್ರೀಲಂಕಾ ನಡುವಿನ 2011ರ ವಿಶ್ವಕಪ್ ಫೈನಲ್ ಪಂದ್ಯ ಪ್ರತಿಯೊಬ್ಬ ಭಾರತೀಯನ ಮನದಲ್ಲಿ ಹಚ್ಚ ಹಸುರಾಗಿದೆ. ಆದರೆ ಶ್ರೀಲಂಕಾದಲ್ಲಿ ಕಳದೆ ಹಲವು ವರ್ಷಗಳಿಂದ 2011ರ ವಿಶ್ವಕಪ್ ಫೈನಲ್ ಪಂದ್ಯ ಫಿಕ್ಸ್ ಅನ್ನೋ ಆರೋಪ ಕೇಳಿ ಬರುತ್ತಲೇ ಇದೆ. ಇತ್ತೀಚೆಗೆ ಮಾಜಿ ಕ್ರೀಡಾ ಮಂತ್ರಿ, 2011ರ ವಿಶ್ವಕಪ್ ಟೂರ್ನಿ ವೇಳೆ ಸಚಿವರಾಗಿ ಕಾರ್ಯನಿರ್ವಹಿಸಿದ ಮಹಿಂದಾನಂದ ಅಲ್ತುಗಮೆಗೆ ಮಾಡಿ ಆರೋಪ ಗಂಭೀರ ಸ್ವರೂಪ ಪಡೆದುಕೊಂಡಿದೆ.

ವಿಶ್ವ​ಕಪ್‌ನಲ್ಲಿ ಫಿಕ್ಸಿಂಗ್‌: 6 ಗಂಟೆಗಳ ಕಾಲ ಡಿ ಸಿಲ್ವಾ, ತರಂಗಾ ವಿಚಾರಣೆ

ವಿಶೇಷ ತನಿಖಾ ತಂಡ ಇದೀಗ 2011ರ ವಿಶ್ವಕಪ್ ಟೂರ್ನಿ ಫೈನಲ್ ಪಂದ್ಯದ  ತನಿಖೆ ನಡೆಸುತ್ತಿದೆ. 2011ರ ವಿಶ್ವಕಪ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಉಪುಲ್ ತರಂಗ ವಿಚಾರಣೆ ನಡೆಸಿದ ತನಿಖಾ ತಂಡ ಇದೀಗ ಮಾಜಿ ನಾಯಕ ಕುಮಾರ ಸಂಗಕ್ಕಾರ ವಿಚಾರಣೆ ನಡೆಸಿದೆ. 2011ರ ವಿಶ್ವಕಪ್ ಟೂರ್ನಿಯಲ್ಲಿ ಲಂಕಾ ತಂಡವನ್ನು ಮುನ್ನಡೆಸಿದ ಸಂಗಕ್ಕಾರ ಬಳಿಕ ಇದೀಗ ತನಿಖಾ ತಂಡ ಮಾಜಿ ಕ್ರಿಕೆಟಿಗ ಮಹೇಲಾ ಜಯವರ್ದನೆಯನ್ನೂ ವಿಚಾರಣೆ ನಡೆಸಲಿದೆ.

2011ರ ವಿಶ್ವ​ಕಪ್‌ ಫೈನಲ್‌ನ​ಲ್ಲಿ ಫಿಕ್ಸಿಂಗ್‌; ತನಿಖೆ ಆರಂಭ

ನನ್ನ ಹೇಳಿಕೆಯನ್ನು ನೀಡಲು ವಿಚಾರಣೆಗೆ ಹಾಜರಾಗಿದ್ದೇನೆ. ಕ್ರಿಕೆಟ್‌ನ್ನು ಗೌರವಿಸುತ್ತೇನೆ. ಹೀಗಾಗಿ ವಿಚಾರಣೆ ಹಾಜರಾಗುವುದು ನನ್ನ ಕರ್ತವ್ಯವಾಗಿದೆ ಎಂದು ಕುಮಾರ ಸಂಗಕ್ಕಾರ ಸತತ 10 ಗಂಟೆಗಳ ವಿಚಾರಣೆ ಬಳಿಕ ಹೇಳಿದ್ದಾರೆ. ಮಾಜಿ ಕ್ರೀಡಾ ಮಂತ್ರಿ ಮಾಡಿದ ಆರೋಪಕ್ಕೆ ಈ ವಿಚಾರಣೆಯಿಂದ ಉತ್ತರ ಸಿಗಲಿದೆ ಅನ್ನೋ ವಿಶ್ವಾಸವಿದೆ ಎಂದು ಸಂಗಕ್ಕಾರ ಹೇಳಿದ್ದಾರೆ. 

ಮಹಿಂದಾನಂದ ಅಲ್ತುಗಮೆ 2011ರ ವಿಶ್ವಕಪ್ ಫೈನಲ್ ಕುರಿತು ಗಂಭೀರ ಆರೋಪ ಮಾಡಿದ್ದರು. ಶ್ರೀಲಂಕಾ ಗೆಲುವಿಗೆ ಎಲ್ಲಾ ಸಾಧ್ಯತೆಗಳಿತ್ತು. ಆದರೆ ಕಳಪೆ ಬೌಲಿಂಗ್, ಕಳಪೆ ಫೀಲ್ಡಿಂಗ್‌ನಿಂದ ಲಂಕಾ ಸೋಲಿಗೆ ಶರಣಾಯಿತು. ಪಂದ್ಯದ ಟಾಸ್ ಕೂಡ ಎರಡು ಬಾರಿ ನಡೆಸಲಾಯಿತು. ಮೊದಲ ಟಾಸ್ ಪ್ರಕ್ರಿಯೆಯಲ್ಲಿ ಲಂಕಾ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿತ್ತು. ಭಾರತ ಪರವಾಗಲು ಎರಡನೇ ಬಾರಿ ಟಾಸ್ ಪ್ರಕ್ರಿಯೆ ನಡೆಸಿತು. ಚೇಸಿಂಗ್‌ನಲ್ಲಿ ಬಲಿಷ್ಠವಾದ ಶ್ರೀಲಂಕಾ ಮೊದಲು ಬ್ಯಾಟಿಂಗ್ ಮಾಡಬೇಕಾಯಿತು. ಈ ರೀತಿ ಹಲವು ಘಟನೆಗಳು 2011ರ ವಿಶ್ವಕಪ್ ಫೈನಲ್ ಪಂದ್ಯದಲ್ಲಿದೆ ಎಂದು ಅಲ್ತುಗಮೆಗೆ ಆರೋಪ ಮಾಡಿದ್ದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?