
ಕೊಲಂಬೊ,(ಜು.28): ಎರಡನೇ ಟಿ20 ಪಂದ್ಯದಲ್ಲಿ ಭಾರತ ವಿರುದ್ಧ ಶ್ರೀಲಂಕಾ 4 ವಿಕೆಟ್ಗಳಿಂದ ರೋಚಕ ಗೆಲುವು ದಾಖಲಿಸಿದೆ. ಈ ಮೂಲಕ 3 ಪಂದ್ಯಗಳ ಟಿ20 ಸರಣಿಯಲ್ಲಿ ಉಭಯ ತಂಡಗಳು 1-1ರಂತೆ ಸಮಬಲ ಸಾಧಿಸಿವೆ.
ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಕೊರೋನಾ ಕಾರಣದಿಂದ ಘಟಾನುಘಟಿ ಆಟಗಾರರ ಅನುಪಸ್ಥಿತಿಯಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್ನಲ್ಲಿ 5 ವಿಕೆಟ್ ನಷ್ಟಕ್ಕೆ 132 ರನ್ ಗಳಿಸಲಷ್ಟೇ ಶಕ್ತವಾಯ್ತು.
ಟಾಸ್ ಗೆದ್ದ ಲಂಕಾ ಬೌಲಿಂಗ್ ಆಯ್ಕೆ.. ಪಡಿಕ್ಕಲ್-ಗಾಯಕ್ವಾಡ್ಗೆ ಅವಕಾಶ
ಭಾರತ ಪರ ಇನಿಂಗ್ಸ್ ಆರಂಭಿಸಿದ ಶಿಖರ್ ಧವನ್-ರುತುರಾಜ್ ಗಾಯಕ್ವಾಡ್ ಭಾರತಕ್ಕೆ ಉತ್ತಮ ಭಾರತ ಒದಗಿಸಿದರು. ಈ ಜೋಡಿ ಮೊದಲ ವಿಕೆಟ್ಗೆ 49 ರನ್ ಕಲೆಹಾಕಿತು. ಇದರೊಂದಿಗೆ ಭಾರತ 133 ರನ್ ಗುರಿ ನೀಡಿತು.
ಈ ಸಾಧಾರಣ ಮೊತ್ತವನ್ನು ಬೆನ್ನಟ್ಟಿದ ಶ್ರೀಲಂಕಾ 6 ವಿಕೆಟ್ ಕಳೆದುಕೊಂಡು 19.4 ಕೊನೆಯ ಓವರ್ನಲ್ಲಿ ತಿಣುಕಾಡಿ ಗೆಲುವಿನ ಗುರಿ ಮುಟ್ಟಿತು. ಈ ಪಂದ್ಯವನ್ನು ಗೆಲ್ಲುವ ಮೂಲಕ ಲಂಕಾ ಸರಣಿಯಲ್ಲಿ ಸಮಬಲ ಸಾಧಿಸಿದ್ದು, ಕಪ್ ಆಸೆ ಜೀವಂತ ಉಳಿಸಿಕೊಂಡಿದೆ.
ಸೋಂಕಿತನ ಸಂಪರ್ಕಕ್ಕೆ ಬಂದಿದ್ದ 8 ಆಟಗಾರರು ಕೂಡ ಐಸೋಲೇಷನ್ಗೆ ಒಳಗಾಗಿದ್ದು, ತಂಡದಲ್ಲಿ 4 ಬದಲಾವಣೆ ಮಾಡಲಾಗಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.