
ರಾಜ್ಕೋಟ್(ನ.05): ಧೂಳಿನ ನಡುವೆಯೇ ಮೊದಲ ಟಿ20ಯಲ್ಲಿ ಸೆಣಸಿದ್ದ ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವೆ ಗುರುವಾರ ಇಲ್ಲಿ ನಡೆಯಬೇಕಿರುವ 2ನೇ ಟಿ20 ಪಂದ್ಯ ರದ್ದಾಗುವ ಸಾಧ್ಯತೆ ಇದೆ.
ರಾಜಧಾನಿಯಲ್ಲಿ ನಡೆಯಲಿಲ್ಲ ಆಟ; ಬಾಂಗ್ಲಾದೇಶ ವಿರುದ್ದ ಸೋಲು ಕಂಡ ಭಾರತ!
ಮಹಾ ಚಂಡಮಾರುತ ದಿಯುನಿಂದ 580 ಕಿ.ಮೀ ಹಾಗೂ ವೆರಾವಲ್ನಿಂದ 550 ಕಿ.ಮೀ ದೂರದಲ್ಲಿದ್ದು, ಬುಧವಾರ ರಾತ್ರಿ ಇಲ್ಲವೇ ಗುರುವಾರ ಮುಂಜಾನೆ ದಿಯು ಹಾಗೂ ದ್ವರಕಾದ ನಡುವೆ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದಾಗಿ ಸೌರಾಷ್ಟ್ರ ಹಾಗೂ ದಕ್ಷಿಣ ಗುಜರಾತ್ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ರನ್ ಮಷೀನ್ ವಿರಾಟ್ ಕೊಹ್ಲಿ ಬರ್ತ್ ಡೇ @31
ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಮಳೆಯಾದರೆ ಟಿ20 ಪಂದ್ಯ ರದ್ದಾಗುವುದು ಖಚಿತ. ಭಾನುವಾರ ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಸೋಲುಂಡ ಭಾರತ ತಂಡ, ಸೋಮವಾರ ರಾಜ್ಕೋಟ್ಗೆ ಬಂದಿಳಿಯಿತು. ತಂಡದ ಅಭ್ಯಾಸಕ್ಕೂ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ.
ಸರಣಿಯಲ್ಲಿ ಬಾಂಗ್ಲಾದೇಶ 1-0 ಮುನ್ನಡೆಯಲ್ಲಿದ್ದು, ಒಂದೊಮ್ಮೆ 2ನೇ ಪಂದ್ಯ ಮಳೆಗೆ ಬಲಿಯಾದರೆ ಭಾರತಕ್ಕೆ ಸರಣಿ ಗೆಲ್ಲುವ ಅವಕಾಶ ಕೈತಪ್ಪಲಿದೆ. ಭಾನುವಾರ 3ನೇ ಹಾಗೂ ಅಂತಿಮ ಟಿ20 ಪಂದ್ಯ ನಾಗ್ಪುರದಲ್ಲಿ ನಡೆಯಲಿದೆ. ಟಿ20 ಸರಣಿ ಬಳಿಕ ಭಾರತ ಹಾಗೂ ಬಾಂಗ್ಲಾದೇಶ ತಂಡಗಳು 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮುಖಾಮುಖಿಯಾಗಲಿವೆ. ಸರಣಿಯ 2ನೇ ಪಂದ್ಯ ಕೋಲ್ಕತಾದಲ್ಲಿ ನಡೆಯಲಿದ್ದು, ಹಗಲು-ರಾತ್ರಿ ಟೆಸ್ಟ್ ಆಗಿರಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.