ಸುರೇಶ್ ರೈನಾ ಕುಟುಂಬಸ್ಥರ ಮೇಲಿನ ದಾಳಿ ಕೇಸ್‌: ಮೂವರ ಬಂಧನ

Suvarna News   | Asianet News
Published : Sep 17, 2020, 11:02 AM IST
ಸುರೇಶ್ ರೈನಾ ಕುಟುಂಬಸ್ಥರ ಮೇಲಿನ ದಾಳಿ ಕೇಸ್‌: ಮೂವರ ಬಂಧನ

ಸಾರಾಂಶ

ಇಡೀ ಪಂಜಾಬನ್ನೇ ಬೆಚ್ಚಿ ಬೀಳಿಸಿದ್ದ ಸುರೇಶ್ ರೈನಾ ಸಂಬಂಧಿಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಮಂದಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ನವದೆಹಲಿ: ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಆಟಗಾರ ಸುರೇಶ್‌ ರೈನಾ ಕುಟುಂಬಸ್ಥರ ಮೇಲಿನ ದಾಳಿ ಪ್ರಕರಣವನ್ನು ಬೇಧಿಸುವಲ್ಲಿ ಪಂಜಾಬ್‌ ಪೊಲೀಸರು ಯಶಸ್ವಿಯಾಗಿದ್ದಾರೆ. 

ಕೊಲೆ ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದೆ ಎಂದು ಪಂಜಾಬ್‌ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಬುಧವಾರ ಮಾಹಿತಿ ನೀಡಿದ್ದಾರೆ. ಅಂತಾರಾಜ್ಯ ದರೋಡೆಕೋರರ ತಂಡ ಈ ಕೃತ್ಯ ಎಸಗಿರುವುದು ತನಿಖೆಯಲ್ಲಿ ಖಚಿತವಾಗಿದೆ. 3 ಆರೋಪಿಗಳ ಬಂಧನವಾಗಿದ್ದು, ಇನ್ನು 11 ಆರೋಪಿಗಳನ್ನು ವಶಕ್ಕೆ ಪಡೆಯಲಾಗುವುದು ಎಂದಿದ್ದಾರೆ.

ಆ.19ರಂದು ಪಠಾಣಕೋಟ್‌ ಜಿಲ್ಲೆಯ ತರಾರ‍ಯಲ್‌ ಗ್ರಾಮದ ಮನೆಯ ಮಹಡಿ ಮೇಲೆ ಮಲಗಿದ್ದ ಕುಟುಂಬಸ್ಥರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಈ ಘಟನೆಯಲ್ಲಿ ರೈನಾ ಅವರ ಮಾವ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ತೀವ್ರ ಗಾಯಗೊಂಡಿದ್ದ ಕೌಶಲ್‌ ಕುಮಾರ್‌ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಅವರ ಪತ್ನಿ ಆಶಾರಾಣಿ ಆರೋಗ್ಯ ಈಗಲೂ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರಿಯುತ್ತಿದೆ. ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾಗಿರುವ ಪಂಜಾಬ್‌ ಪೊಲೀಸರು ಹಾಗೂ ಮುಖ್ಯಮಂತ್ರಿಗಳಿಗೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಧನ್ಯವಾದ ಹೇಳಿದ್ದಾರೆ.

IPL 2020: ಸುರೇಶ್ ರೈನಾ ಸ್ಥಾನವನ್ನು ಈ ಆಟಗಾರ ತುಂಬಲಿದ್ದಾರೆ ಎಂದು ಶೇನ್ ವಾಟ್ಸನ್..!

ಹತ್ತಿರ ಸಂಬಂಧಿಕರ ಹತ್ಯೆಯಿಂದ ಆಘಾತಕ್ಕೊಳಗಾಗಿದ್ದ ಸುರೇಶ್ ರೈನಾ ದುಬೈನಿಂದ ಆಗಸ್ಟ್ 29ರಂದು ದಿಢೀರನೇ ಭಾರತಕ್ಕೆ ವಾಪಾಸಾಗಿದ್ದರು. ಇದಕ್ಕೂ ಮೊದಲು 13ನೇ ಆವೃತ್ತಿಯ ಐಪಿಎಲ್‌ನಲ್ಲಿ ಪಾಲ್ಗೊಳ್ಳಲು ಸುರೇಶ್ ರೈನಾ ಚೆನ್ನೈ ಸೂಪರ್‌ ಕಿಂಗ್ಸ್ ತಂಡದೊಂದಿಗೆ ದುಬೈಗೆ ತೆರಳಿದ್ದರು.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಕಷ್ಟ ನಿವಾರಣೆಗೆ ಸಿಂಹಾಚಲಂ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ವಿರಾಟ್ ಕೊಹ್ಲಿ
ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷ, ಚುನಾವಣಾ ಫಲಿತಾಂಶ ಪ್ರಕಟ