ದಕ್ಷಿಣ ಆಫ್ರಿಕಾ ಕ್ರಿಕೆಟಿಗನಿಗೆ ವಕ್ಕರಿಸಿದ ಕೊರೋನಾ ಸೋಂಕು; ಮೂವರು ಈಗ ಐಸೋಲೇಷನ್..!

Suvarna News   | Asianet News
Published : Nov 20, 2020, 10:38 AM IST
ದಕ್ಷಿಣ ಆಫ್ರಿಕಾ ಕ್ರಿಕೆಟಿಗನಿಗೆ ವಕ್ಕರಿಸಿದ ಕೊರೋನಾ ಸೋಂಕು; ಮೂವರು ಈಗ ಐಸೋಲೇಷನ್..!

ಸಾರಾಂಶ

ದಕ್ಷಿಣ ಆಫ್ರಿಕಾ ಕ್ರಿಕೆಟ್ ಆಟಗಾರರೊಬ್ಬರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಅವರ ಸಂಪರ್ಕದಲ್ಲಿದ್ದ ಇಬ್ಬರು ಸೇರಿದಂತೆ ಮೂರು ಮಂದಿಗೆ ಐಸೋಲೇಷನ್‌ಗೆ ಒಳಗಾಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಕೇಪ್‌ಟೌನ್(ನ.20) ನವೆಂಬರ್ 27 ರಿಂದ ಇಂಗ್ಲೆಂಡ್‌ ವಿರುದ್ಧದ ಸೀಮಿತ ಓವರ್‌ಗಳ ಸರಣಿಗಾಗಿ ಪೂರ್ವಭ್ಯಾಸಕ್ಕೆ ಸಜ್ಜಾಗಿದ್ದ ದಕ್ಷಿಣ ಆಫ್ರಿಕಾ ತಂಡಕ್ಕೆ ಆಘಾತ ಎದುರಾಗಿದೆ. 

ದಕ್ಷಿಣ ಆಫ್ರಿಕಾ ತಂಡದ ಒಬ್ಬ ಆಟಗಾರನಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಸೋಂಕಿತ ಆಟಗಾರನ ಸಂಪರ್ಕದಲ್ಲಿದ್ದ ಇಬ್ಬರು ಆಟಗಾರರು ಸೇರಿದಂತೆ ಒಟ್ಟು ಮೂವರನ್ನು ಐಸೋಲೇಷನ್‌ನಲ್ಲಿ ಇರಿಸಲಾಗಿದೆ ಎಂದು ಕ್ರಿಕೆಟ್‌ ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ ಖಚಿತಪಡಿಸಿದೆ.

ಮೂವರು ಆಟಗಾರರಿಗೆ ಯಾವುದೇ ಕೊರೋನಾ ಲಕ್ಷಣಗಳಿಲ್ಲ. ಆದರೂ ವೈದ್ಯಕೀಯ ಸಿಬ್ಬಂದಿಗಳು ಈ ಮೂವರು ಆಟಗಾರರ ಮೇಲೆ ನಿಗಾಯಿಟ್ಟಿದ್ದಾರೆ ಎಂದು ಆಫ್ರಿಕಾ ಕ್ರಿಕೆಟ್ ಮಂಡಳಿ ತಮ್ಮ ಪತ್ರಿಕ ಪ್ರಕಟಣೆಯಲ್ಲಿ ತಿಳಿಸಿದೆ.

ಕ್ವಾರಂಟೈನ್‌ನಲ್ಲಿರುವ ವಿರಾಟ್ ಕೊಹ್ಲಿ ಸಿಕ್ಕಾಪಟ್ಟೆ ಬ್ಯುಸಿಯಂತೆ..!

ಇಂಗ್ಲೆಂಡ್‌ ವಿರುದ್ಧದ ಸೀಮಿತ ಓವರ್‌ಗಳ ಸರಣಿಗೆ ಬಯೋ ಬಬಲ್ ಪ್ರವೇಶಿಸುವ ಮುನ್ನ ದಕ್ಷಿಣ ಆಫ್ರಿಕಾ ತಂಡದ ಆಟಗಾರರು ಹಾಗೂ ಸಿಬ್ಬಂದಿಗಳಿಗೆ 50ಕ್ಕೂ ಹೆಚ್ಚು ಕೋವಿಡ್ ಪರೀಕ್ಷೆ ನಡೆಸಲಾಗಿತ್ತು ಎಂದು ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ ತಿಳಿಸಿದೆ. ನವೆಂಬರ್ 27ರಿಂದ 3 ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಆ ಬಳಿಕ 3 ಪಂದ್ಯಗಳ ಏಕದಿನ ಸರಣಿ ಜರುಗಲಿದೆ. 

ಬೆಂಗಾಲ್‌ ನಾಯಕ ಅಭಿಮನ್ಯುಗೆ ಕೊರೋನಾ ಸೋಂಕು

ಕೋಲ್ಕತಾ: ಬೆಂಗಾಲ್‌ ರಣಜಿ ತಂಡದ ನಾಯಕ ಅಭಿಮನ್ಯು ಈಶ್ವರನ್‌ಗೆ ಕೊರೋನಾ ಸೋಂಕು ದೃಢಪಟ್ಟಿದೆ. ಮುಂದಿನ 2 ವಾರಗಳ ಕಾಲ ಅಭಿಮನ್ಯು ಕ್ವಾರಂಟೈನ್‌ಗೆ ಒಳಗಾಗಲಿದ್ದಾರೆ. ನ.24 ರಿಂದ ಆರಂಭವಾಗಲಿರುವ ಉದ್ಘಾಟನಾ ಬೆಂಗಾಲ್‌ ಟಿ20 ಚಾಲೆಂಜ್‌ನಲ್ಲಿ ಅಭಿಮನ್ಯು ಆಡುವುದು ಅನುಮಾನ ಮೂಡಿಸಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಕಷ್ಟ ನಿವಾರಣೆಗೆ ಸಿಂಹಾಚಲಂ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ವಿರಾಟ್ ಕೊಹ್ಲಿ
ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷ, ಚುನಾವಣಾ ಫಲಿತಾಂಶ ಪ್ರಕಟ