
ನವದೆಹಲಿ (ಫೆ.12): ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಅಮೆರಿಕ ವಿರುದ್ಧದ ಮೊದಲ ಪಂದ್ಯದ ವೇಳೆ ಅನಾರೋಗ್ಯಕ್ಕೆ ಒಳಗಾದ ಭಾರತದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಪ್ರಸ್ತುತ ಚೇತರಿಕೆಯ ಹಾದಿಯಲ್ಲಿದ್ದಾರೆ. 25 ವರ್ಷದ ಮೊದಲ ಪಂದ್ಯದಲ್ಲಿ ನೀರಸ ಪ್ರದರ್ಶನ ನೀಡಿದ್ದರು. ಭಾರೀ ನಿರೀಕ್ಷೆಯೊಂದಿಗೆ ಬ್ಯಾಟಿಂಗ್ಗೆ ಇಳಿದಿದ್ದ ಅಭಿಷೇಕ್ ಶರ್ಮ ಗೋಲ್ಡನ್ ಡಕ್ಗೆ ಔಟಾದರು. ಔಟ್ ಆದ ಬೆನ್ನಲ್ಲಿಯೇ ಅವರು ಮೈದಾನದಲ್ಲಿ ಎಲ್ಲಿಯೂ ಕಾಣಿಸಿಕೊಳ್ಳಲಿಲ್ಲ. ಅವರು ಬದಲು ಸಂಜು ಸ್ಯಾಮ್ಸನ್ ಫೀಲ್ಡರ್ ಆಗಿ ಮೈದಾನಕ್ಕೆ ಇಳಿದಿದ್ದರು. ಪಂದ್ಯದ ನಂತರದ ಸಾಂಪ್ರದಾಯಿಕ ಹ್ಯಾಂಡ್ಶೇಕ್ಗಳಿಗೂ ಅಭಿಷೇಕ್ ಹೊರಬರಲಿಲ್ಲ, ಇದು ಅವರ ಆರೋಗ್ಯದ ಬಗ್ಗೆ ಕಳವಳವನ್ನುಂಟುಮಾಡಿತು.
ಪಂದ್ಯದ ಒಂದು ದಿನದ ನಂತರ, ಅಭಿಷೇಕ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿತ್ತು.ನಂತರ ಸಹಾಯಕ ಕೋಚ್ ರಯಾನ್ ಟೆನ್ ಡೋಸ್ಚೇಟ್ ಈ ವಿಚಾರವನ್ನು ದೃಢಪಡಿಸಿದರು. ಆರಂಭಿಕ ಆಟಗಾರ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಹೇಳಿದರು. ಆರಂಭದಲ್ಲಿ ಎಡಗೈ ಆಟಗಾರ ನಮೀಬಿಯಾ ವಿರುದ್ಧದ ಮುಂಬರುವ ಪಂದ್ಯವನ್ನು ತಪ್ಪಿಸಿಕೊಳ್ಳುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆ ಬಳಿಕ ತಿಲಕ್ ವರ್ಮ ಅಭಿಷೇಕ್ ಅವರು ಉತ್ತಮವಾಗಿ ಚೇತರಿಕೆ ಕಾಣುತ್ತಿದ್ದಾರೆ ಎಂದು ಹೇಳಿದರೂ, ನಮೀಬಿಯಾ ವಿರುದ್ಧದ ಪಂದ್ಯದ ಟಾಸ್ ವೇಳೆ ನಾಯಕ ಸೂರ್ಯಕುಮಾರ್ ಯಾದವ್, ಅಭಿಷೇಕ್ ಶರ್ಮ ಸಂಪೂರ್ಣವಾಗಿ ಫಿಟ್ ಆಗಿಲ್ಲ ಮತ್ತು ಅವರು ಚೇತರಿಸಿಕೊಳ್ಳುತ್ತಿರುವಾಗ ಒಂದು ಅಥವಾ ಎರಡು ಪಂದ್ಯಗಳನ್ನು ತಪ್ಪಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.
ನಮೀಬಿಯಾ ಬಳಿಕ ಭಾರತ ತನ್ನ ಮುಂದಿನ ಟಿ20 ವಿಶ್ವಕಪ್ ಪಂದ್ಯದಲ್ಲಿ ಪಾಕಿಸ್ತಾನವನ್ನು ಎದುರಿಸಲಿದೆ ಮತ್ತು ಕೊಲಂಬೊದಲ್ಲಿ ನಡೆಯಲಿರುವ ಹೈ-ವೋಲ್ಟೇಜ್ ಪಂದ್ಯದಲ್ಲಿ ಅಭಿಷೇಕ್ ಖಂಡಿತವಾಗಿಯೂ ಮೆನ್ ಇನ್ ಬ್ಲೂ ಪರ ನಿರ್ಣಾಯಕ ಪಾತ್ರ ವಹಿಸುತ್ತಾರೆ. ಆದರೆ, ಸೂರ್ಯಕುಮಾರ್ ಯಾದವ್ ಅವರ ಈ ಹೇಳಿಕೆ ಅಭಿಷೇಕ್ ಶರ್ಮ ಪಂದ್ಯಕ್ಕೆ ಲಭ್ಯರಾಗುವ ಬಗ್ಗೆ ಅನುಮಾನ ಮೂಡಿಸಿದೆ.
"ಬ್ಯಾಟ್ಸ್ಮನ್ಗಳು ಆಟಕ್ಕೆ ಇಳಿಯುತ್ತಾರೆ, ಆನಂದಿಸುತ್ತಾರೆ ಎಂದು ನಾನು ಭಾವಿಸುತ್ತೇನೆ. ಅಭಿಷೇಕ್ ಇನ್ನೂ ಫಿಟ್ ಆಗಿಲ್ಲ. ಅವರು ಒಂದು ಅಥವಾ ಎರಡು ಪಂದ್ಯಗಳನ್ನು ತಪ್ಪಿಸಿಕೊಳ್ಳುತ್ತಾರೆ. ಸಂಜು ಕೂಡ ಇದೇ ರೀತಿಯ ಬ್ಯಾಟ್ಸ್ಮನ್, ಸ್ಫೋಟಕ ಆಟಗಾರ. ಸಿರಾಜ್ ಬದಲಿಗೆ ಬುಮ್ರಾ ಆಡುತ್ತಾರೆ" ಎಂದು ಟಾಸ್ ಸಮಯದಲ್ಲಿ ಸೂರ್ಯಕುಮಾರ್ ಯಾದವ್ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.