ವಿದೇಶಿ ಕ್ರಿಕೆಟಿಗರು ಗೈರಾದ್ರೂ ಐಪಿಎಲ್‌ ನಡೆಯುತ್ತೆ: ರಾಜೀವ್ ಶುಕ್ಲಾ

Suvarna News   | Asianet News
Published : Jun 01, 2021, 11:42 AM IST
ವಿದೇಶಿ ಕ್ರಿಕೆಟಿಗರು ಗೈರಾದ್ರೂ ಐಪಿಎಲ್‌ ನಡೆಯುತ್ತೆ: ರಾಜೀವ್ ಶುಕ್ಲಾ

ಸಾರಾಂಶ

* ಐಪಿಎಲ್‌ 2021 ಭಾಗ-2 ಆಯೋಜನೆಗೆ ಸಿದ್ದವಾಗುತ್ತಿದೆ ಬಿಸಿಸಿಐ * ಯುಎಇನಲ್ಲಿ ಉಳಿದ ಪಂದ್ಯಗಳನ್ನು ನಡೆಸಲು ತೀರ್ಮಾನಿಸಿರುವ ಬಿಸಿಸಿಐ * ವಿದೇಶಿ ಆಟಗಾರರ ಅನುಪಸ್ಥಿತಿಯಲ್ಲೂ ಟೂರ್ನಿ ನಡೆಯಲಿದೆ ಎಂದು ರಾಜೀವ್ ಶುಕ್ಲಾ

ದುಬೈ(ಜೂ.01): ಸೆಪ್ಟೆಂಬರ್‌-ಅಕ್ಟೋಬರ್‌ನಲ್ಲಿ ಬಹುತೇಕ ತಂಡಗಳಿಗೆ ದ್ವಿಪಕ್ಷೀಯ ಸರಣಿಗಳು ಇರುವ ಕಾರಣ, ವಿದೇಶಿ ತಾರಾ ಆಟಗಾರರು ಐಪಿಎಲ್‌ಗೆ ಅಲಭ್ಯರಾಗುವ ಸಾಧ್ಯತೆ ಇದೆ ಎಂದು ಹಲವು ವರದಿಗಳು ಪ್ರಕಟಗೊಂಡ ಬೆನ್ನಲ್ಲೇ ಬಿಸಿಸಿಐ ಉಪಾಧ್ಯಕ್ಷ ರಾಜೀವ್‌ ಶುಕ್ಲಾ ಪ್ರತಿಕ್ರಿಯಿಸಿದ್ದಾರೆ. 

ಯುಎಇ ಅಧಿಕಾರಿಗಳೊಂದಿಗೆ ಸಭೆ ನಡೆಸಲು ದುಬೈ ತಲುಪಿರುವ ರಾಜೀವ್ ಶುಕ್ಲಾ, ಅಲ್ಲಿನ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ‘ವಿದೇಶಿ ತಾರೆಯರು ಬರದಿದ್ದರೂ ಐಪಿಎಲ್‌ ನಡೆಯಲಿದೆ. ಭಾರತೀಯ ಆಟಗಾರರು ಲಭ್ಯರಿರಲಿದ್ದಾರೆ. ಕೆಲವರನ್ನು ಹೊರತುಪಡಿಸಿ ಉಳಿದ ವಿದೇಶಿ ಆಟಗಾರರು ಸಹ ಆಗಮಿಸಲಿದ್ದಾರೆ. ಇರುವವರನ್ನು ಬಳಸಿಕೊಳ್ಳಲು ಫ್ರಾಂಚೈಸಿಗಳಿಗೆ ತಿಳಿಸುತ್ತೇವೆ. ಟೂರ್ನಿ ನಡೆಸುವುದಷ್ಟೇ ನಮ್ಮ ಆದ್ಯತೆ’ ಎಂದಿದ್ದಾರೆ.

ಈಗಾಗಲೇ ಇಂಗ್ಲೆಂಡ್ ಕ್ರಿಕೆಟ್‌ ಮಂಡಳಿ ಹಾಗೂ ಕ್ರಿಕೆಟ್ ಅಸ್ಟ್ರೇಲಿಯಾ ಮಂಡಳಿಗಳು ತಮ್ಮ ಆಟಗಾರರನ್ನು ಐಪಿಎಲ್ ಭಾಗ-2ಕ್ಕೆ ಕಳಿಸಿಕೊಡುವ ಕುರಿತಂತೆ ಯಾವುದೇ ಸಕಾರಾತ್ಮಕ ಮಾತುಗಳನ್ನು ಆಡಿಲ್ಲ. ಇನ್ನು ಬಾಂಗ್ಲಾ ಕ್ರಿಕೆಟ್‌ ಮಂಡಳಿ ಸಹಾ ಶಕೀಬ್ ಅಲ್‌ ಹಸನ್‌ಗೆ ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ನಿರಪೇಕ್ಷಣ ಪತ್ರ ನೀಡದಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಗುಡ್ ನ್ಯೂಸ್‌: ಐಪಿಎಲ್‌ 2021 ಭಾಗ-2 ಆತಿಥ್ಯ ಎಲ್ಲಿ? ಗೊಂದಲಗಳಿಗೆ ಬಿಸಿಸಿಐ ತೆರೆ

ನಾವು ಈಗಿನಿಂದಲೇ ಎಲ್ಲಾ ಕ್ರಿಕೆಟ್‌ ಮಂಡಳಿ ಹಾಗೂ ಸಂಬಂಧಪಟ್ಟವರ ಜತೆ ಟೂರ್ನಿ ಆಯೋಜನೆಯ ಕುರಿತಂತೆ ಮಾತುಕತೆ ನಡೆಸುತ್ತಿದ್ದೇವೆ. ಕಳೆದ ವರ್ಷ ಹೇಗೆ ಸರಾಗವಾಗಿ ಟೂರ್ನಿ ನಡೆದಿತ್ತೋ ಅದೇ ರೀತಿ ಟೂರ್ನಿ ನಡೆಸಲು ವೇಳಾಪಟ್ಟಿ ಸಿದ್ದಮಾಡಲಿದ್ದೇವೆ. ವಿದೇಶಿ ಆಟಗಾರರು ಟೂರ್ನಿಯಲ್ಲಿ ಪಾಲ್ಗೊಂಡರೆ ತುಂಬಾ ಚೆನ್ನಾಗಿರುತ್ತದೆ. ಹಾಗಂತ ವಿದೇಶಿ ಆಟಗಾರರು ಬಂದಿಲ್ಲ ಎಂದು ಟೂರ್ನಿಯನ್ನು ಅರ್ಧದಲ್ಲೇ ಕೈಬಿಡಲು ಸಾಧ್ಯವಿಲ್ಲ. ಲಭ್ಯವಿರುವ ಆಟಗಾರರನ್ನೇ ಬಳಸಿಕೊಂಡು ಟೂರ್ನಿಯಲ್ಲಿ ಪಾಲ್ಗೊಳ್ಳಲು ಫ್ರಾಂಚೈಸಿಗಳಿಗೆ ತಿಳಿಸಲಾಗಿದೆ ಎಂದು ರಾಜೀವ್ ಶುಕ್ಲಾ ತಿಳಿಸಿದ್ದಾರೆ.

ಐಪಿಎಲ್ ಭಾಗ-2 ಮುಂಬರುವ ಸೆಪ್ಟೆಂಬರ್ ಮೂರನೇ ವಾರದಿಂದ ಅಕ್ಟೋಬರ್ 10ರ ವರೆಗೆ ನಡೆಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಸದ್ಯ ಬಿಸಿಸಿಐ ಈ ಕುರಿತಂತೆ ಯಾವುದೇ ಅಧಿಕೃತ ವೇಳಾಪಟ್ಟಿಯನ್ನು ಪ್ರಕಟಿಸಿಲ್ಲ.

ಭಾರತದಲ್ಲಿ ಆಯೋಜನೆಗೊಂಡಿದ್ದ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಮೇಲೆ ಕೊರೋನಾ ವಕ್ರದೃಷ್ಟಿ ಬೀರಿತ್ತು. ಬಯೋ ಬಬಲ್‌ನೊಳಗೆ ಆಟಗಾರರಿಗೆ ಹಾಗೂ ಸಹಾಯಕ ಸಿಬ್ಬಂದಿಗಳಿಗೆ ಕೋವಿಡ್ 19 ದೃಢಪಟ್ಟ ಬೆನ್ನಲ್ಲೇ ಬಿಸಿಸಿಐ ಟೂರ್ನಿಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿತ್ತು. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚೇರ್ ಮೇಲೆ ಕೂತು ಹೋಮ ಹವನ ಮಾಡಿದ ಶ್ರೇಯಸ್ ಅಯ್ಯರ್, ಸನಾತನಿಯೋ, ಅಲ್ವೋ ಚರ್ಚೆ!
ಐಸಿಸಿ ಟಿ20 ವಿಶ್ವಕಪ್‌ಗೂ ಮುನ್ನ ಆಸೀಸ್‌, ಆಫ್ಘನ್‌ಗೆ ಟಿ20 ಪಂದ್ಯಗಳೇ ಇಲ್ಲ! ಯಾಕೆ?