ಪಿಎಸ್‌ಎಲ್‌ ಆಯೋಜಿಸಲು ಒಪ್ಪಿದ ಅಬುಧಾಬಿ ಸರ್ಕಾರ, ಆದರೆ ಒಂದು ಕಂಡೀಷನ್‌..!

Suvarna News   | Asianet News
Published : May 19, 2021, 04:41 PM IST
ಪಿಎಸ್‌ಎಲ್‌ ಆಯೋಜಿಸಲು ಒಪ್ಪಿದ ಅಬುಧಾಬಿ ಸರ್ಕಾರ, ಆದರೆ ಒಂದು ಕಂಡೀಷನ್‌..!

ಸಾರಾಂಶ

* ಪಿಎಸ್‌ಎಲ್‌ ಟೂರ್ನಿ ಆಯೋಜಿಸಲು ಯುಎಇ ಗ್ರೀನ್ ಸಿಗ್ನಲ್‌ * ಒಂದು ಷರತ್ತಿನ ಮೇರೆಗೆ ಟೂರ್ನಿ ಆಯೋಜಿಸಲು ಅಬುಧಾಬಿ ಸರ್ಕಾರ ಅನುಮತಿ * ಪಿಎಸ್ಎಲ್ 2021 ಟೂರ್ನಿಯಲ್ಲಿ ಇನ್ನೂ 20 ಪಂದ್ಯಗಳು ನಡೆಯಬೇಕಿವೆ.

ಅಬುಧಾಬಿ(ಮೇ.19): ಪಾಕಿಸ್ತಾನ ಕ್ರಿಕೆಟ್‌ ಮಂಡಳಿಗೆ ಪಿಎಸ್‌ಎಲ್‌ 2021 ಟೂರ್ನಿಯ ಇನ್ನುಳಿದ ಪಂದ್ಯಗಳನ್ನು ಆಯೋಜಿಸಲು ಷರತ್ತಿನ ಮೇರೆಗೆ ಅಬುಧಾಬಿ ಸರ್ಕಾರ ಅನುಮತಿ ನೀಡಿದೆ ಎಂದು ವರದಿಯಾಗಿದೆ. 

ಬಯೋ ಬಬಲ್‌ನೊಳಗೆ ಕೋವಿಡ್‌ ನಿಯಮಾವಳಿಗಳು ಉಲ್ಲಂಘನೆಯಾದ ಬೆನ್ನಲ್ಲೇ ಪಿಎಸ್‌ಎಲ್ ಟೂರ್ನಿಯನ್ನು ಪಿಸಿಬಿ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿತ್ತು. 2021ನೇ ಸಾಲಿನ ಪಾಕಿಸ್ತಾನ ಸೂಪರ್ ಲೀಗ್ ಟೂರ್ನಿಯಲ್ಲಿ ಇನ್ನೂ 20 ಪಂದ್ಯಗಳು ನಡೆಯಬೇಕಿದೆ. ಇದೀಗ ಎಮಿರೇಟ್ಸ್‌ ಕ್ರಿಕೆಟ್ ಬೋರ್ಡ್‌(ಇಸಿಬಿ) ಯುಎಇನಲ್ಲಿ ಪಿಎಸ್‌ಎಲ್ ಟೂರ್ನಿಯನ್ನು ಆಯೋಜಿಸಲು ಹಸಿರು ನಿಶಾನೆ ತೋರಿದೆ ಎಂದು ವರದಿಯಾಗಿದೆ.

ಪಾಕಿಸ್ತಾನ ಸೂಪರ್‌ ಲೀಗ್ ಟೂರ್ನಿಯಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರು ಕೋವಿಡ್ 19 ಲಸಿಕೆ ಹಾಕಿಸಿಕೊಂಡಿರಬೇಕು ಎಂದು ಯುಎಇ ಸರ್ಕಾರವು ಷರತ್ತುಬದ್ಧ ಅನುಮತಿ ನೀಡಿದೆ. 

ಕೋವಿಡ್ ಕಾಟದಿಂದ ಮುಂದೂಡಲ್ಪಟ್ಟ 2021ನೇ ಸಾಲಿನ ಪಾಕಿಸ್ತಾನ ಸೂಪರ್ ಲೀಗ್‌ ಟೂರ್ನಿಯು ಜೂನ್‌ 01ರಿಂದ 20ರವರೆಗೆ ಪಾಕಿಸ್ತಾನದ ಕರಾಚಿಯಲ್ಲಿ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಪಾಕಿಸ್ತಾನದಲ್ಲಿ ಕೋವಿಡ್ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಫ್ರಾಂಚೈಸಿಗಳು ಪಿಎಸ್‌ಎಲ್ ಟೂರ್ನಿಯನ್ನು ಯುಎಇಗೆ ಸ್ಥಳಾಂತರಿಸಲು ಪಿಸಿಬಿ ಬಳಿ ಮನವಿ ಮಾಡಿಕೊಂಡಿದ್ದರು.

7 ಮಂದಿಗೆ ಕೊರೋನಾ: ಪಾಕಿಸ್ತಾನ ಸೂಪರ್ ಲೀಗ್ ದಿಢೀರ್ ಸ್ಥಗಿತ..!

ಇದೀಗ ಪಿಎಸ್‌ಎಲ್‌ ಟೂರ್ನಿಯ ಎಲ್ಲಾ ಪಂದ್ಯಗಳು ಅಬುಧಾಬಿಯ ಶೇಕ್ ಜಾಯೆದ್‌ ಮೈದಾನದಲ್ಲಿ ನಡೆಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಕಟ್ಟುನಿಟ್ಟಿನ ಬಯೋ ಬಬಲ್‌ನೊಳಗೆ ಟೂರ್ನಿ ಆಯೋಜಿಸಲು ಚಿಂತನೆ ನಡೆಸಲಾಗಿದೆ.ಇದರ ಜತೆಗೆ ಯುಎಇನಲ್ಲಿ ಆಟಗಾರರಿಗೆ ಹಾಗೂ ಅಧಿಕಾರಿಗಳಿಗೆ, ಸಹಾಯಕ ಸಿಬ್ಬಂದಿಗಳಿಗೆ 10 ದಿನಗಳ ಕಡ್ಡಾಯ ಕ್ವಾರಂಟೈನ್‌ನಲ್ಲಿರಲು ಸೂಚಿಸಲಾಗಿದೆ ಎಂದು ವರದಿಯಾಗಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

14 ವರ್ಷದ ವೈಭವ್ ಸೂರ್ಯವಂಶಿ 95 ಎಸೆತಕ್ಕೆ 171; ಯುವ ಭಾರತಕ್ಕೆ 234 ರನ್ ಜಯ!
ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!