ಸಾವು ಬದುಕಿನ ನಡುವೆ ಹೋರಾಡುತ್ತಿರುವ ಅಫ್ಘಾನ್ ಕ್ರಿಕೆಟಿಗ, ದೆಹಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ

Published : Apr 20, 2026, 08:29 PM IST
Afghan Cricketer Shapoor Zadran

ಸಾರಾಂಶ

ಸಾವು ಬದುಕಿನ ನಡುವೆ ಹೋರಾಡುತ್ತಿರುವ ಅಫ್ಘಾನ್ ಕ್ರಿಕೆಟಿಗ, ದೆಹಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ, ಐಸಿಯು ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪರೂಪದ ಆರೋಗ್ಯ ಸಮಸ್ಯೆಯೊಂದು ಕ್ರಿಕೆಟಿಗನ ಕಾಡುತ್ತಿದೆ.

ದೆಹಲಿ (ಏ.20) ಐಪಿಎಲ್ ಟೂರ್ನಿ ಕ್ರಿಕೆಚಿಗ ಪ್ರೇಮಿಗಳ ಉತ್ಸಾಹ ಇಮ್ಮಡಿಗೊಳಿಸಿದೆ. ಇದರ ನಡುವೆ ಕ್ರಿಕೆಟ್ ಅಭಿಮಾನಿಗಳಿಗೆ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಆಫ್ಘಾನಿಸ್ತಾನದ ಕ್ರಿಕೆಟಿಗ ಇದೀಗ ದೆಹಲಿಯ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಆಫ್ಘಾನಿಸ್ತಾನದ ಮಾಜಿ ವೇಗಿ ಶಾಪೂರ್ ಝದ್ರಾನ್, ನ್ಯೂ ಡೆಲ್ಲಿ ಆಸ್ಪತ್ರೆಯ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪರೂದ ಖಾಯಿಲೆಯೊಂದು ಆಫ್ಘಾನಿಸ್ತಾನದ ಕ್ರಿಕೆಟಿಗನ ಬಾಳನ್ನು ಕಸಿದುಕೊಳ್ಳುತ್ತಿದೆ.

ಐಸಿಯು ಘಟಕದಲ್ಲಿರುವ ಕ್ರಿಕೆಟಿಗನ ಸ್ಥಿತಿ ಗಂಭೀರ

ಶಾಪೂರ್ ಝದ್ರಾನ್ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ. 'ಹೆಮೋಫಾಗೋಸೈಟಿಕ್ ಲಿಂಫೋಹಿಸ್ಟಿಯೊಸೈಟೋಸಿಸ್' (HLH) ಅತ್ಯಂತ ಅಪರೂದ ರೋಗದಿಂದ ಬಳಲುತ್ತಿದ್ದಾರೆ. ಈ ಆರೋಗ್ಯ ಸಮಸ್ಯೆ ಆರಂಭದಲ್ಲೇ ಪತ್ತೆ ಹಚ್ಚಿದರೇ ಗುಣಪಡಿಸುವ ಅಥವಾ ಸುಧಾರಿಸಿಕೊಳ್ಳುವ ಸಾಧ್ಯತೆ ಇದೆ. ಆದರೆ ಸದ್ಯ ಶಾಪೂರ್ ಖಾಯಿಲೆ 4ನೇ ಸ್ಟೇಜ್ ದಾಟಿದೆ. ಹೀಗಾಗಿ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ.

ಜನವರಿ ತಿಂಗಳಿನಿಂದ ಶಾಪೂರ್ ಸ್ಥಿತಿ ಗಂಭೀರ

ಜನವರಿ ತಿಂಗಳಲ್ಲಿ ದೆಹಲಿ ಆಸ್ಪತ್ರೆಗೆ ದಾಖಲಾಗಿರುವ ಶಾಪೂರ್ ಸತತ ಚಿಕಿತ್ಸೆ ಪಡೆಯುತ್ತಿದ್ದಾರೆ. ಜನವರಿ 18 ರಿಂದ ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರಂಭಿಕ ಹಂತದಲ್ಲಿ ಶಾಪೂರ್ ನಿಧಾನವಾಗಿ ಚೇತರಿಕೆ ಕಂಡಿದ್ದರು. ಫೆಬ್ರವರಿ ತಿಂಗಳಲ್ಲಿ ಆರೋಗ್ಯ ಸುಧಾರಿಸಿತ್ತು. ಆದರೆ ಸೋಂಕು ಉಲ್ಬಣಿಸಿದ ಕಾರಣ ಶಾಪೂರ್ ಆರೋಗ್ಯ ಮತ್ತೆ ಹದಗೆಟ್ಟಿದೆ. ಈ ಸೋಂಕು ಮೆದುಳಿಗೆ ಹರಡಿದೆ. ಹೀಗಾಗಿ ಶಾಪೂರ್ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಆಫ್ಘಾನ್ ನೆರವಿಗೆ ಸ್ಪಂದಿಸಿದ ಬಿಸಿಸಿಐ

2025ರ ಅಕ್ಟೋಬರ್ ತಿಂಗಳಿನಿಂದ ಶಾಪೂರ್ ಆರೋಗ್ಯ ಸಮಸ್ಯೆ ತೀವ್ರಗೊಂಡಿತ್ತು. ಆಫ್ಘಾನಿಸ್ತಾನದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಾಪೂರ್ ಆಕ್ಟೋಬರ್‌ನಲ್ಲಿ ಆಸ್ಪತ್ರೆ ದಾಖಲಾಗಿದ್ದರು. ಸತತ ಚಿಕಿತ್ಸೆ ಬಳಿಕ ಶಾಪೂರ್ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಇರಲಿಲ್ಲ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಗೆ ಶಿಫ್ಟ್ ಮಾಡಲು ಕುಟುಂಬಸ್ಥರು ಆಗ್ರಹಿಸಿದ್ದರು. ಇದಕ್ಕೆ ಆಫ್ಘಾನಿಸ್ತಾನ ಕ್ರಿಕೆಟಿಗ ರಶೀದ್ ಖಾನ್ ಕೂಡ ಬೆಂಬಲ ಸೂಚಿಸಿದ್ದರು. ಇತ್ತ ಆಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ ಹಾಗೂ ರಶೀದ್ ಖಾನ್, ಐಸಿಸಿ ಮುಖ್ಯಸ್ಥ ಜಯ್ ಶಾಗೆ ಮನವಿ ಮಾಡಿತ್ತು. ಇತ್ತ ರಶೀದ್ ಖಾನ್ ತಮ್ಮ ಐಪಿಎಲ್ ಫ್ರಾಂಚೈಸಿಗೆ ಮನವಿ ಮಾಡಿದ್ದರು. ಹೀಗಾಗಿ ಶಾಪೂರ್‌ಗೆ ಚಿಕಿತ್ಸೆಗಾಗಿ ತಕ್ಷಣವೇ ಭಾರತದಿಂದ ವೀಸಾ ಹಾಗೂ ಇತರ ಸೌಲಭ್ಯ ನೀಡಲಾಗಿತ್ತು.

ಸದ್ಯ ಮಾತನಾಡಲು ಅಶಕ್ತರಾಗಿರುವ ಶಾಪೂರ್‌ಗೆ ಚಿಕಿತ್ಸೆ ನೀಡಲಾಗುತ್ತಿದೆ. ಶಾಪೂರ್ ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಕುಟುಂಬಸ್ಥರು ಪ್ರಾರ್ಥಿಸುತ್ತಿದ್ದಾರೆ. ಇತ್ತ ಹಲವು ಕ್ರಿಕೆಟಿಗರು ಶಾಪೂರ್ ಚೇತರಿಕೆಗೆ ಪ್ರಾರ್ಥಿಸಿದ್ದಾರೆ.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

2011ರಲ್ಲಿ ಐಪಿಎಲ್ ತಂಡದ ಮಾಲೀಕರೇ ಬ್ಲಾಕ್ ಮ್ಯಾಜಿಕ್ ಮಾಡಿದ್ರು, ಅದು ಯಾರೆಂದು ಬಿಚ್ಚಿಡ್ತೇನೆ: ಹೊಸ ಬಾಂಬ್ ಸಿಡಿಸಿದ ಲಲಿತ್ ಮೋದಿ
ಏನಪ್ಪಾ ಶುಭ್‌ಮನ್ ಗಿಲ್, ನೀನು ಮಾಡಿದ ಕೆಲಸಕ್ಕೆ ನಮ್ಮನೇಲಿ ಅಮ್ಮಂದಿರು ಬೈಯೋದು ಗ್ಯಾರಂಟಿ!