ನಿರಾಸೆ ಬೇಡ; ಟಿ20 ವಿಶ್ವಕಪ್ ತಂಡದಲ್ಲಿ ಧೋನಿಗೆ ಇನ್ನೂ ಇದೆ ಚಾನ್ಸ್!

Suvarna News   | Asianet News
Published : Jan 16, 2020, 09:52 PM IST
ನಿರಾಸೆ ಬೇಡ; ಟಿ20 ವಿಶ್ವಕಪ್ ತಂಡದಲ್ಲಿ ಧೋನಿಗೆ ಇನ್ನೂ ಇದೆ ಚಾನ್ಸ್!

ಸಾರಾಂಶ

ಬಿಸಿಸಿಐ ವಾರ್ಷಿಕ ಗುತ್ತಿಗೆಯಿಂದ ಧೋನಿ ಹೆಸರು ಕೈಬಿಟ್ಟಿರುವುದು ಇದೀಗ ಭಾರತದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಧೋನಿ ಕರಿಯರ್ ಅಂತ್ಯವಾಯಿತು ಅನ್ನೋ ಮಾತುಗಳು ಬಲವಾಗಿ ಕೇಳಿಬರುತ್ತಿದೆ. ಅಭಿಮಾನಿಗಳು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಆದರೆ ನಿರಾಸೆಗೊಳ್ಳುವ ಅಗತ್ಯವಿಲ್ಲ. 2020ರ ವಿಶ್ವಕಪ್ ತಂಡದಲ್ಲಿ ಧೋನಿಗೆ ಇದೆ ಚಾನ್ಸ್? ಹೇಗೆ ಅನ್ನೋದು ಇಲ್ಲಿದೆ.

ಮುಂಬೈ(ಜ.16): ಬಿಸಿಸಿಐ ವಾರ್ಷಿಕ ಗುತ್ತಿಗೆ ಪ್ರಕಟವಾದ ಅಭಿಮಾನಿಗಳಿಗೆ ಆಘಾತ ಎದುರಾಗಿತ್ತು. ಕಳೆದ ಸಾಲಿನಲ್ಲಿ ಎ ಕಾಂಟ್ರಾಕ್ಟ್‌ನಲ್ಲಿ  ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿಯ ಹೆಸರೇ ಇರಲಿಲ್ಲ. ಗುತ್ತಿಯಿಂದ ಧೋನಿ ಹೆಸರು ಕೈಬಿಡೋ ಮೂಲಕ ಪರೋಕ್ಷ ಸೂಚನೆಯನ್ನು ಬಿಸಿಸಿಐ ರವಾನಿಸಿತ್ತು. ಇದು ಅಭಿಮಾನಿಗಳಿಗೆ ನುಂಗಲಾರದ ತುತ್ತಾಗಿ ಪರಿಣಿಮಿಸಿತ್ತು. ಧೋನಿ ಮತ್ತೆ ಟೀಂ ಇಂಡಿಯಾ ಪರ ಆಡುವುದಿಲ್ಲ ಅನ್ನೋ ಬೇಸರ ಅಭಿಮಾನಿಗಳಲ್ಲಿ ಮನೆ ಮಾಡಿದೆ. ಆದರೆ ಬೇಸರ ಪಡುವ ಅಗತ್ಯವಿಲ್ಲ.

ಇದನ್ನೂ ಓದಿ: ಬಿಸಿಸಿಐ ವಾರ್ಷಿಕ ಗುತ್ತಿಗೆ ಪ್ರಕಟ: ಧೋನಿಗಿಲ್ಲ ಸ್ಥಾನ..!

ಒಂದು ಟೂರ್ನಿ ಎಲ್ಲವನ್ನು ಬದಲಿಸಲಿದೆ. ಧೋನಿ ಸದ್ಯ 2020ರ ಐಪಿಎಲ್ ಟೂರ್ನಿಗೆ ಸಜ್ಜಾಗುತ್ತಿದ್ದಾರೆ. ಈಗಾಗಲೇ ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರಿ, ಧೋನಿ ಭವಿಷ್ಯ ಐಪಿಎಲ್ ಟೂರ್ನಿ ಬಳಿಕ ಸ್ಪ,ಷ್ಟವಾಗಲಿದೆ ಎಂದಿದ್ದಾರೆ. ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಧೋನಿ ಅದ್ಬುತ ಪ್ರದರ್ಶನ ನೀಡಿದರೆ, 2020ರ ಟಿ20 ವಿಶ್ವಕಪ್ ಟೂರ್ನಿ ತಂಡದಲ್ಲಿ ಸ್ಥಾನ ಪಡೆಯುವ ಎಲ್ಲಾ ಸಾಧ್ಯತೆಗಳಿವೆ.

ಇದನ್ನೂ ಓದಿ: ಟಿ20 ವಿಶ್ವಕಪ್ ತಂಡದಲ್ಲಿ ಧೋನಿ ಯಾಕಿರಬೇಕು? ಇಲ್ಲಿದೆ 3 ಕಾರಣ!

ಈ ಕುರಿತು ಖ್ಯಾತ ವೀಕ್ಷಕ ವಿವರಣೆಗಾರ ಹರ್ಷಾ ಬೋಗ್ಲೆ ಹೇಳಿದ್ದಾರೆ. ವಾರ್ಷಿಕ ಗುತ್ತಿಗೆಯಿಂದ ಧೋನಿ ಹೆಸರು ಕೈಬಿಟ್ಟ ಕೂಡಲೇ, ಧೋನಿ ವಿದಾಯಕ್ಕೆ ಸಜ್ಜಾಗಿದ್ದಾರೆ ಅನ್ನೋ ಆತಂಕ ಬೇಡ. ಅತ್ಯುತ್ತಮ ಐಪಿಎಲ್ ಟೂರ್ನಿ ಧೋನಿಯದ್ದಾಗಲಿ. ಐಪಿಎಲ್‌ನಲ್ಲಿ ಅಬ್ಬರಿಸಿದರೆ ಮುಂದೆ ಏನೂ ಬೇಕಾದರೂ ಆಗಬಹುದು ಎಂದು ಹರ್ಷಾ ಬೋಗ್ಲೆ ಟ್ವೀಟ್ ಮಾಡಿದ್ದಾರೆ.

ಟ್ವೀಟ್ ಮೂಲಕ ಹರ್ಷಾ ಬೋಗ್ಲೆ, ಧೋನಿಗೆ ಮತ್ತೆ ಟೀಂ ಇಂಡಿಯಾ ಪರ ಆಡುವ ಎಲ್ಲಾ ಅವಕಾಶವಿದೆ. ಅಭಿಮಾನಿಗಳು ಬೇಸರ ಪಡುವ ಅಗತ್ಯವಿಲ್ಲ ಎಂದಿದ್ದಾರೆ. ಆದರೆ 2019ರ ವಿಶ್ವಕಪ್ ಟೂರ್ನಿ ಬಳಿಕ ಧೋನಿ ಕ್ರಿಕೆಟ್ ಆಡಿಲ್ಲ. ಕೇವಲ ಐಪಿಎಲ್ ಟೂರ್ನಿ ಪ್ರದರ್ಶನ ಆಧರಿಸಿ ಟಿ20 ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡುತ್ತಾರಾ ಅನ್ನೋದೇ ಸದ್ಯಕ್ಕಿರುವ ಪ್ರಶ್ನೆ.  

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

U19 ಏಷ್ಯಾಕಪ್, 150 ರನ್‌ಗೆ ಪಾಕಿಸ್ತಾನ ಆಲೌಟ್ ಮಾಡಿದ ಟೀಂ ಇಂಡಿಯಾಗೆ 90 ರನ್ ಗೆಲುವು
ಬೊಂಡಿ ಬೀಚ್ ಗುಂಡಿನ ದಾಳಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಕ್ರಿಕೆಟಿಗ ವಾನ್, ಭಯಾನಕ ಘಟನೆ