
ಮುಂಬೈ(ಜ.21): ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡ ಟೀಂ ಇಂಡಿಯಾ ಇತಿಹಾಸ ರಚಿಸಿದೆ. ಅದರಲ್ಲೂ ನಾಯಕ ವಿರಾಟ್ ಕೊಹ್ಲಿ, ವೇಗಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಸೇರಿದಂತೆ ಪ್ರಮುಖ ಆಟಗಾರರ ಅನುಪಸ್ಥಿತಿಯಲ್ಲೂ ತಂಡ ಮುನ್ನಡೆಸಿದ ಅಜಿಂಕ್ಯ ರಹಾನೆ, ಭಾರತಕ್ಕೆ ಐತಿಹಾಸಿಕ ಗೆಲುವು ತಂದುಕೊಟ್ಟಿದ್ದಾರೆ. ಗೆಲುವಿನ ಬಳಿಕ ತವರಿಗೆ ಆಗಮಿಸಿದ ರಹಾನೆಗೆ ಅದ್ದೂರಿ ಸ್ವಾಗತ ನೀಡಲಾಗಿದೆ.
ಕಾಂಗರೂ ಬೇಟೆಯಾಡಿದ ರಹಾನೆ ಪಡೆಗೆ ಅದ್ಧೂರಿ ಸ್ವಾಗತ..!..
ಮುಂಬೈ ಆಗಮಿಸಿದ ಅಜಿಂಕ್ಯ ರಹಾನೆಗೆ ಅದ್ಧೂರಿ ಸ್ವಾಗತ ನೀಡಲಾಗಿದೆ. ರಹಾನೆಗೆ ಪುಷ್ಪಗಳಿಂದ ಸ್ವಾಗತ ನೀಡಲಾಗಿತ್ತು. ವಾದ್ಯ ಘೋಷಗಳ ಮೂಲಕ ರೆಡ್ ಕಾರ್ಪೆಟ್ ವೆಲ್ಕಮ್ ನೀಡಲಾಗಿತ್ತು. ಬಳಿಕ ಸಣ್ಣ ಕಾರ್ಯಕ್ರವನ್ನು ಆಯೋಜಿಸಲಾಗಿತ್ತು. ರಹಾನೆಗೆ ಹೂಗುಚ್ಚ ನೀಡಿ ಕೇಕ್ ಕತ್ತರಿಸಲು ಆಯೋಜಕರು ಮನವಿ ಮಾಡಿದ್ದಾರೆ. ಆದರೆ ರಹಾನೆ ಕೇಕ್ ಕತ್ತರಿಸಲು ನಿರಾಕರಿಸಿದ್ದಾರೆ.
ಕಾಂಗರೂ ನಾಡಿನಲ್ಲಿ ಆಸ್ಟ್ರೇಲಿಯಾವನ್ನು ಮಣಿಸಿದ ಕಾರಣ, ಆಸೀಸ್ ರಾಷ್ಟ್ರೀಯ ಪ್ರಾಣಿ ಕಾಂಗರೂ ಆಕೃತಿ ಇಡಲಾಗಿತ್ತು. ಎದುರಾಳಿ ಯಾರೇ ಆಗಿರಲಿ ಅವರನ್ನು ಗೌರವಿಸುವ ಅಜಿಂಕ್ಯ ರಹಾನೆ ಇಲ್ಲೂ ಕೂಡ ಕ್ರೀಡಾಸ್ಪೂರ್ತಿ ಮೆರೆದಿದ್ದಾರೆ. ಕಾಂಗರೂ ಕೇಕ್ ಕತ್ತರಿಸುವುದಿಲ್ಲ ಎಂದು ರಹಾನೆ ಹೇಳಿದ್ದಾರೆ. ಬಳಿಕ ಆಯೋಜಕರು ಬೇರೆ ಕೇಕ್ ನೀಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.