ಬಾಕ್ಸಿಂಗ್ ಡೇ ಟೆಸ್ಟ್‌: ಕ್ರಿಕೆಟ್‌ ಪಂಡಿತರ ಮನಗೆದ್ದ ರಹಾನೆ ನಾಯಕತ್ವ

Suvarna News   | Asianet News
Published : Dec 26, 2020, 04:58 PM IST
ಬಾಕ್ಸಿಂಗ್ ಡೇ ಟೆಸ್ಟ್‌: ಕ್ರಿಕೆಟ್‌ ಪಂಡಿತರ ಮನಗೆದ್ದ ರಹಾನೆ ನಾಯಕತ್ವ

ಸಾರಾಂಶ

ಬಾಕ್ಸಿಂಗ್‌ ಡೇ ಟೆಸ್ಟ್‌ ಪಂದ್ಯದಲ್ಲಿ ಅಜಿಂಕ್ಯ ರಹಾನೆ ನಿಭಾಯಿಸಿದ ಕ್ಯಾಪ್ಟನ್ಸಿ ರೀತಿಗೆ ಕ್ರಿಕೆಟ್‌ ಪಂಡಿತರು ಫಿದಾ ಆಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಮೆಲ್ಬರ್ನ್‌(ಡಿ.26): ಭಾರತ-ಆಸ್ಟ್ರೇಲಿಯಾ ನಡುವಿನ ಬಾಕ್ಸಿಂಗ್ ಡೇ ಟೆಸ್ಟ್‌ ಪಂದ್ಯ ಆರಂಭವಾಗಿದ್ದು, ಮೊದಲ ದಿನವೇ ಹಂಗಾಮಿ ನಾಯಕ ಅಜಿಂಕ್ಯ ರಹಾನೆ ನಾಯಕನಾಗಿ ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸುವ ಮೂಲಕ ಕ್ರಿಕೆಟ್‌ ಪಂಡಿತರ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.

ಹೌದು, ಪಿಂಕ್ ಬಾಲ್ ಟೆಸ್ಟ್‌ ಪಂದ್ಯದ ಬಳಿಕ ವಿರಾಟ್ ಕೊಹ್ಲಿ ತವರಿಗೆ ಮರಳಿದ್ದು, ಕೊಹ್ಲಿ ಅನುಪಸ್ಥಿತಿಯಲ್ಲಿ ಅಜಿಂಕ್ಯ ರಹಾನೆ ಭಾರತ ತಂಡವನ್ನು ಮುನ್ನಡೆಸುತ್ತಿದ್ದಾರೆ. ಅದರಲ್ಲೂ ಅಡಿಲೇಡ್‌ನಲ್ಲಿ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ಆಘಾತಕಾರಿ ಸೋಲು ಕಂಡಿತ್ತು. ಹೀಗಾಗಿ ರಹಾನೆ ಮೇಲೆ ಸಾಕಷ್ಟು ಒತ್ತಡವಿತ್ತು. ಇದೆಲ್ಲದರ ಹೊರತಾಗಿಯೂ ಆಯಕಟ್ಟಿನ ಸ್ಥಳಗಳಲ್ಲಿ ಕ್ಷೇತ್ರರಕ್ಷಕರನ್ನು ನಿಲ್ಲಿಸಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಕೇವಲ 195 ರನ್‌ಗಳಿಗೆ ಕಟ್ಟಿಹಾಕುವಲ್ಲಿ ರಹಾನೆ ಪಡೆ ಯಶಸ್ವಿಯಾಗಿದೆ. ರಹಾನೆ ನಾಯಕತ್ವದ ತಂತ್ರಗಾರಿಕೆಗೆ ಕ್ರಿಕೆಟ್ ದಿಗ್ಗಜರು ಫಿದಾ ಆಗಿದ್ದಾರೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ತಂಡಕ್ಕೆ ಭಾರತೀಯ ಬೌಲರ್‌ಗಳು ಕರಾರುವಕ್ಕಾದ ದಾಳಿ ನಡೆಸುವ ಮೂಲಕ ಕಂಗಾಲು ಮಾಡಿದರು. ಅದರಲ್ಲೂ ನಾಯಕ ರಹಾನೆ ಬುಮ್ರಾ ಹಾಗೂ ಅಶ್ವಿನ್‌ ಅವರಿಗೆ ಆಕ್ರಮಣಕಾರಿ ದಾಳಿ ನಡೆಸಲು ಅವಕಾಶ ಮಾಡಿಕೊಟ್ಟಿದ್ದು, ಕಾಂಗರೂ ಪಡೆಯ ಬ್ಯಾಟ್ಸ್‌ಮನ್‌ಗಳು ನೆಲಕಚ್ಚಿ ಆಡಲು ಅವಕಾಶ ಮಾಡಿಕೊಡಲಿಲ್ಲ. ಸೂಕ್ತ ಸಂದರ್ಭದಲ್ಲಿ ಬುಮ್ರಾ ಅವರಿಗೆ ಬೌಲಿಂಗ್‌ ಮಾಡಲು ಇಳಿಸಿದ್ದು ಕೂಡಾ ತಂಡದ ಪಾಲಿಗೆ ವರದಾನವಾಗಿ ಪರಿಣಮಿಸಿತು.  

ಬಾಕ್ಸಿಂಗ್ ಡೇ ಟೆಸ್ಟ್‌: ಟೀಂ ಇಂಡಿಯಾಗೆ ಮೊದಲ ದಿನದ ಗೌರವ

ರಹಾನೆ ನಾಯಕತ್ವದ ತಂತ್ರಗಾರಿಕೆಗೆ ಗ್ಲೆನ್‌ ಮೆಗ್ರಾತ್, ಅಜಯ್ ಜಡೇಜಾ, ಪಾರ್ಥಿವ್ ಪಟೇಲ್ ಸೇರಿದಂತೆ ಹಲವು ಕ್ರಿಕೆಟಿಗರು ಫುಲ್‌ ಮಾರ್ಕ್ಸ್‌ ನೀಡಿದ್ದಾರೆ. 
ರಹಾನೆ ಒಳ್ಳೆಯ ನಾಯಕತ್ವ ನಿಭಾಯಿಸಿದ್ದಾರೆ ಎಂದೆನಿಸುತ್ತಿದೆ, ಸ್ಲಿಪ್‌ನಲ್ಲಿ ನಾಲ್ವರು ಹಾಗೂ ಗಲ್ಲಿ ಪಾಯಿಂಟ್‌ನಲ್ಲಿ ಓರ್ವ ಫೀಲ್ಡರ್ ನಿಲ್ಲಿಸುವ ಮೂಲಕ ಆಕ್ರಮಣಕಾರಿ ಫೀಲ್ಡ್ ಸೆಟ್ ಮಾಡಿದರು. ಸ್ಮಿತ್ ವಿಕೆಟ್‌ ಪತನದ ಬಳಿಕ ಬುಮ್ರಾ ಅವರನ್ನು ದಾಳಿಗಿಳಿಸುವ ಮೂಲಕ ಉತ್ತಮ ನಾಯಕತ್ವ ನಿಭಾಯಿಸಿದರು ಎಂದು ಮೆಗ್ರಾತ್ ಹೇಳಿದ್ದಾರೆ.

ಇದೇ ರೀತಿ ಆರಂಭದಲ್ಲೇ ರವಿಚಂದ್ರನ್ ಅಶ್ವಿನ್‌ ಅವರನ್ನು ಬೌಲಿಂಗ್ ದಾಳಿಗಿಳಿಸಿದ್ದು ಸಹ ಪಾರ್ಥಿವ್ ಪಟೇಲ್, ಅಜೇಯ್ ಜಡೇಜಾ ಮೆಚ್ಚುಗೆಗೆ ಪಾತ್ರವಾಗಿದೆ. 
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸೌತ್ ಆಫ್ರಿಕಾ ವಿರುದ್ದ 3ನೇ ಟಿ20 ಗೆದ್ದ ಟೀಂ ಇಂಡಿಯಾ, ಸರಣಿಯಲ್ಲಿ 2-1 ಮುನ್ನಡೆ
U19 ಏಷ್ಯಾಕಪ್, 150 ರನ್‌ಗೆ ಪಾಕಿಸ್ತಾನ ಆಲೌಟ್ ಮಾಡಿದ ಟೀಂ ಇಂಡಿಯಾಗೆ 90 ರನ್ ಗೆಲುವು