ಮೊದಲು ಆಡುವ ಹನ್ನೊಂದರ ಬಳಗವನ್ನು ಖಚಿತ ಮಾಡಿಕೊಳ್ಳಿ: ಟೀಂ ಇಂಡಿಯಾ ಆಯ್ಕೆ ಸಮಿತಿ ಟೀಕಿಸಿದ ಅಖ್ತರ್..!

Published : Sep 06, 2022, 05:46 PM IST
ಮೊದಲು ಆಡುವ ಹನ್ನೊಂದರ ಬಳಗವನ್ನು ಖಚಿತ ಮಾಡಿಕೊಳ್ಳಿ: ಟೀಂ ಇಂಡಿಯಾ ಆಯ್ಕೆ ಸಮಿತಿ ಟೀಕಿಸಿದ ಅಖ್ತರ್..!

ಸಾರಾಂಶ

* ಏಷ್ಯಾಕಪ್ ಟೂರ್ನಿಯಲ್ಲಿ ಪಾಕಿಸ್ತಾನ ಎದುರು ಮುಗ್ಗರಿಸಿದ್ದ ಟೀಂ ಇಂಡಿಯಾ * ಸೂಪರ್ 4 ಹಂತದಲ್ಲಿ ಪಾಕ್ ಎದುರು ಮುಗ್ಗರಿಸಿದ್ದ ರೋಹಿತ್ ಶರ್ಮಾ ಪಡೆ * ಟೀಂ ಇಂಡಿಯಾ ಆಯ್ಕೆ ಸಮಿತಿಯ ಬಗ್ಗೆ ಟೀಕೆ ವ್ಯಕ್ತಪಡಿಸಿದ ಶೋಯೆಬ್‌ ಅಖ್ತರ್

ದುಬೈ(ಸೆ.06): ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯ ಸೂಪರ್ 4 ಹಂತದ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಪಾಕಿಸ್ತಾನ ಎದುರು ಆಘಾತಕಾರಿ ಸೋಲು ಅನುಭವಿಸಿದೆ. ದುಬೈನಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಇನ್ನೂ ಒಂದು ಎಸೆತ ಬಾಕಿ ಇರುವಂತೆಯೇ ಪಾಕಿಸ್ತಾನ ತಂಡವು 5 ವಿಕೆಟ್‌ಗಳ ಅಂತರ ರೋಚಕ ಜಯ ಸಾಧಿಸಿದೆ. ಕೆಲ ಬದಲಾವಣೆಗಳೊಂದಿಗೆ ಕಣಕ್ಕಿಳಿದಿದ್ದ ಟೀಂ ಇಂಡಿಯಾದ ಆಯ್ಕೆ ಬಗ್ಗೆ ಪಾಕಿಸ್ತಾನ ಮಾಜಿ ನಾಯಕ ಶೋಯೆಬ್ ಅಖ್ತರ್ ಟೀಕೆ ವ್ಯಕ್ತಪಡಿಸಿದ್ದಾರೆ.

ಏಷ್ಯಾಕಪ್ ಟೂರ್ನಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ಎದುರು ಸ್ಟಾರ್ ವಿಕೆಟ್‌ ಕೀಪರ್ ರಿಷಭ್‌ ಪಂತ್‌ ಅವರಿಗೆ ಅವಕಾಶ ನೀಡಿರಲಿಲ್ಲ. ಆದರೆ ಹಾಂಕಾಂಗ್‌ ಎದುರು ಪಂತ್‌ಗೆ ಅವಕಾಶ ಸಿಕ್ಕಿತ್ತಾದರೂ ಬ್ಯಾಟಿಂಗ್ ಮಾಡುವ ಅವಕಾಶ ಸಿಕ್ಕಿರಲಿಲ್ಲ. ಆದರೆ ಪಾಕ್‌ ವಿರುದ್ದ ಆಲ್ರೌಂಡ್ ಪ್ರದರ್ಶನ ತೋರಿದ್ದ ಹಾರ್ದಿಕ್ ಪಾಂಡ್ಯ ಅವರಿಗೆ ಹಾಂಕಾಂಗ್ ಎದುರಿನ ಪಂದ್ಯದ ವೇಳೆ ವಿಶ್ರಾಂತಿ ನೀಡಲಾಗಿತ್ತು. ಹೀಗಾಗಿ ಹಲವು ಬದಲಾವಣೆಗಳನ್ನು ಟೀಂ ಇಂಡಿಯಾ ಮಾಡಿತ್ತು. 

ಇನ್ನು ಈ ಕುರಿತಂತೆ ತಮ್ಮದೇ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಶೋಯೆಬ್ ಅಖ್ತರ್, ಟೀಂ ಇಂಡಿಯಾ ಮುಂಬರುವ ಟೂರ್ನಿಯಲ್ಲಿ ಆಡುವ ಹನ್ನೊಂದರ ಬಳಗ ಹೇಗಿರಬೇಕು ಎಂದು ಮೊದಲೇ ತೀರ್ಮಾನಿಸಬೇಕು. ತಂಡದೊಳಗೆ ರಿಷಭ್‌ ಪಂತ್, ದಿನೇಶ್ ಕಾರ್ತಿಕ್‌, ದೀಪಕ್ ಹೂಡಾ ಅಥವಾ ರವಿ ಬಿಷ್ಣೋಯಿ  ಇವರನ್ನು ಆಡುವ ಹನ್ನೊಂದರ ಬಳಗದಲ್ಲಿ ಯಾರು ಕಣಕ್ಕಿಳಿಯಬೇಕು ಎನ್ನುವುದನ್ನು ಮೊದಲು ತೀರ್ಮಾನಿಸಬೇಕು. ಆದರೆ ಭಾರತ ತಂಡವು ಯಾಕಿಷ್ಟು ಗೊಂದಲದಲ್ಲಿದೆ ಎಂದು ನನಗಂತು ತಿಳಿಯುತ್ತಿಲ್ಲ ಎಂದು ಅಖ್ತರ್‌ ಅಭಿಪ್ರಾಯಪಟ್ಟಿದ್ದಾರೆ.  

Asia Cup 2022: ಲಂಕಾ ಎದುರಿನ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ: ಸ್ಟಾರ್ ಆಟಗಾರನ ಕೈಬಿಡುತ್ತಾ ಟೀಂ ಇಂಡಿಯಾ?

ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಇಂದು ಏಷ್ಯಾಕಪ್ ಟೂರ್ನಿಯ ಸೂಪರ್ 4 ಹಂತದ ಪಂದ್ಯದಲ್ಲಿಂದು ಶ್ರೀಲಂಕಾ ತಂಡವನ್ನು ಎದುರಿಸಲಿದೆ. ಭಾರತ ತಂಡವು ಏಷ್ಯಾಕಪ್‌ ಫೈನಲ್‌ ಪ್ರವೇಶಿಸಬೇಕಿದ್ದರೇ ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಇದಾದ ಬಳಿಕ ಆಫ್ಘಾನಿಸ್ತಾನ ವಿರುದ್ದ ಗೆದ್ದರಷ್ಟೇ ಟೀಂ ಇಂಡಿಯಾ ಏಷ್ಯಾಕಪ್ ಫೈನಲ್‌ ಪ್ರವೇಶಿಸಲಿದೆ.

ಭಾರತ ಕ್ರಿಕೆಟ್‌ ತಂಡವು ಏಷ್ಯಾಕಪ್ ಟೂರ್ನಿಯ ಗ್ರೂಪ್‌ ಹಂತದ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ಹಾಂಕಾಂಗ್ ಎದುರು ಗೆಲುವು ಸಾಧಿಸಿತ್ತು. ಆದರೆ ಸೂಪರ್ 4 ಹಂತದಲ್ಲಿ ಪಾಕಿಸ್ತಾನ ಎದುರು ಸೋಲು ಅನುಭವಿಸುವ ಮೂಲಕ ಕೊಂಚ ಒತ್ತಡಕ್ಕೆ ಸಿಲುಕಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಒನ್‌8 ಬ್ರ್ಯಾಂಡ್‌ ಸೇಲ್‌: ತನ್ನ ಆಪ್ತ ಗೆಳೆಯನ ಈ ಸಂಸ್ಥೆಯಲ್ಲಿ ಕೊಹ್ಲಿ 40 ಕೋಟಿ ಹೂಡಿಕೆ!
IPL 2026 ಮಿನಿ ಹರಾಜು: 2 ಕೋಟಿ ಮೂಲ ಬೆಲೆ ಹೊಂದಿದ 5 ಸ್ಟಾರ್ ಆಟಗಾರರಿವರು!