
ಮುಂಬೈ(ಮಾ.02): ಕೊರೊನಾ ವೈರಸ್ ಭೀತಿ ಕ್ರಿಕೆಟ್ಗೂ ಆವರಿಸಿದೆ. ಏಷ್ಯಾಕಪ್ ಟೂರ್ನಿ ಆಯೋಜನೆ ಈಗಾಗಲೇ ಕಗ್ಗಂಟಾಗಿದೆ. ಭದ್ರತೆ ದೃಷ್ಟಿಯಿಂದ ಆತಿಥ್ಯವಹಿಸಿರುವ ಪಾಕಿಸ್ತಾನಕ್ಕೆ ತೆರಳಲು ಭಾರತ ನಿರಾಕರಿಸಿತ್ತು. ಹೀಗಾಗಿ ಆಯೋಜನೆ ಕುರಿತು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಸಭೆ ಕರೆದಿತ್ತು. ಇದೀಗ ಕೊರೊನಾ ವೈರಸ್ನಿಂದ ಸಭೆ ಮುಂದೂಡಲಾಗಿದೆ.
ಇದನ್ನೂ ಓದಿ: ಇಂಡೋ-ಪಾಕ್ ಪಂದ್ಯ ಖಚಿತ ಪಡಿಸಿದ ಗಂಗೂಲಿ!.
ದುಬೈನಲ್ಲಿ ನಡೆಯಬೇಕಿದ್ದ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಸಭೆ ಮುಂದೂಡಲಾಗಿದೆ. ಪ್ರಮುಖವಾಗಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ದುಬೈನಲ್ಲಿ ಆಯೋಜಿಸಿದ್ದ ಸಭೆಗೆ ಹಾಜರಾಗಲು ಹಿಂದೇಟು ಹಾಕಿದ್ದಾರೆ. ಹೀಗಾಗಿ ಎಸಿಸಿ ಸಭೆ ಮುಂದೂಡಲಾಗಿದೆ.
ಇದನ್ನೂ ಓದಿ: ಏಷ್ಯಾಕಪ್ ಆತಿಥ್ಯ ಹಕ್ಕು ಬಿಟ್ಟುಕೊಡಲು ಪಾಕ್ ರೆಡಿ?
ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮುಖ್ಯಸ್ಥ ಎಹಸಾನ್ ಮಾನಿ ಸಭೆಗಾಗಿ ದುಬೈ ತಲಪಿದ್ದರು. ಪಾಕ್ ಕ್ರಿಕೆಟ್ ಸಿಇಎ ತೆರಳಲು ಸಜ್ಜಾಗಿದ್ದರು. ಅಷ್ಟರಲ್ಲಿ ಸೌರವ್ ಗಂಗೂಲಿ ಅಂಡ್ ಟೀಂ ಶಾಕಿಂಗ್ ನ್ಯೂಸ್ ರವಾನಿಸಿದ್ದಾರೆ. ಕೊರೊನಾ ವೈರಸ್ ಕಾರಣ, ಗಂಗೂಲಿ ಹಾಗೂ ಕಾರ್ಯದರ್ಶಿ ಜಯ್ ಶಾ ದುಬೈಗೆ ಸದ್ಯ ತೆರಳುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಏಷ್ಯಾಕಪ್ ಆಯೋಜನೆ ಕುರಿತು ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ಮಂಡಳಿ ತದ್ವಿರುದ್ದ ಹೇಳಿಕೆ ನೀಡಿತ್ತು. ಪಾಕಿಸ್ತಾನಕ್ಕೆ ಭಾರತ ಆಗಮಿಸುವುದಿಲ್ಲ ಎಂದು ಖಚಿತವಾಗುತ್ತಿದ್ದಂತೆ ಆತಿಥ್ಯ ಬಿಟ್ಟುಕೊಡಲು ಪಾಕ್ ಮುಂದಾಗಿತ್ತು. ಇದರ ಬೆನ್ನಲ್ಲೇ ಗಂಗೂಲಿ, ದುಬೈನಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಏಷ್ಯಾಕಪ್ ಪಂದ್ಯ ನಡೆಯಲಿದೆ ಎಂದಿದ್ದರು.
ಗಂಗೂಲಿ ಹೇಳಿಕೆಗೆ ಮುನ್ನ ಪಾಕಿಸ್ತಾನದ ಕ್ರಿಕೆಟ್ ಮಂಡಳಿ, ಏಷ್ಯಾಕಪ್ ಆಯೋಜನೆ ಇನ್ನು ಖಚಿತವಾಗಿಲ್ಲ ಎಂದು ಹೇಳಿತ್ತು.
"
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.