Asian Kabaddi Championship 2023: ಇರಾನ್ ಬಗ್ಗುಬಡಿದು 8ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಭಾರತ ಕಬಡ್ಡಿ ತಂಡ

Published : Jun 30, 2023, 04:57 PM IST
Asian Kabaddi Championship 2023: ಇರಾನ್ ಬಗ್ಗುಬಡಿದು 8ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಭಾರತ ಕಬಡ್ಡಿ ತಂಡ

ಸಾರಾಂಶ

ಮತ್ತೊಮ್ಮೆ ಏಷ್ಯನ್ ಕಬಡ್ಡಿ ಚಾಂಪಿಯನ್‌ಶಿಪ್ ಗೆದ್ದ ಭಾರತ ಇರಾನ್ ಮಣಿಸಿ 8ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ಟೀಂ ಇಂಡಿಯಾ ಇರಾನ್ ಎದುರು 10 ಅಂಕಗಳ ಅಂತರದ ಗೆಲುವು ಸಾಧಿಸಿದ ಇಂಡಿಯಾ

ಬೂಸಾನ್‌(ಜೂ.30): ಆತಿಥೇಯ ಕೊರಿಯಾ ತಂಡದ ಎದುರು ಅಮೋಘ ಪ್ರದರ್ಶನ ತೋರಿದ ಪವನ್ ಶೆರಾವತ್ ನೇತೃತ್ವದ ಕಬಡ್ಡಿ ತಂಡವು ಏಷ್ಯನ್ ಕಬಡ್ಡಿ ಚಾಂಪಿಯನ್‌ಶಿಪ್ ಟೂರ್ನಿಯಲ್ಲಿ ದಾಖಲೆಯ 8ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಕಳೆದ ಮೂರು ದಿನಗಳ ಕಾಲ ನಡೆದ ಏಷ್ಯನ್ ಕಬಡ್ಡಿ ಚಾಂಪಿಯನ್‌ಶಿಪ್‌ನಲ್ಲಿ ಭಾರತ ತಂಡವು 42-32 ಅಂತರದಲ್ಲಿ ಕೊರಿಯಾ ತಂಡವನ್ನು ಮಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. 

ಏಷ್ಯನ್ ಕಬಡ್ಡಿ ಚಾಂಪಿಯನ್‌ಶಿಪ್‌ ಕೊರಿಯಾದ ಬೂಸಾನ್‌ನಲ್ಲಿ ಜೂನ್ 27ರಂದು ಆರಂಭವಾಗಿತ್ತು. 6 ತಂಡಗಳು ಪಾಲ್ಗೊಂಡಿದ್ದ ಟೂರ್ನಿಯಲ್ಲಿ ಭಾರತ ಕಬಡ್ಡಿ ತಂಡವು ಅಜೇಯವಾಗಿಯೇ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಯಶಸ್ವಿಯಾಗಿದೆ. 1980ರಲ್ಲಿ ಏಷ್ಯನ್ ಕಬಡ್ಡಿ ಚಾಂಪಿಯನ್‌ಶಿಪ್‌ ಆರಂಭಗೊಂಡಿತ್ತು. ಈ ಆವೃತ್ತಿಯೂ ಸೇರಿದಂತೆ 9 ಬಾರಿ ಈ ಟೂರ್ನಿ ಆಯೋಜನೆಗೊಂಡಿದ್ದು, ಭಾರತ 8 ಬಾರಿ ಚಾಂಪಿಯನ್ ಆಗುವ ಮೂಲಕ ಕಬಡ್ಡಿ ಸಾಮ್ರಾಟನಾಗಿ ಹೊರಹೊಮ್ಮಿದೆ.

ಗುರುವಾರ ನಡೆದ ಬಲಿಷ್ಠ ಇರಾನ್‌ ವಿರುದ್ಧದ ಸೆಮಿಫೈನಲ್‌ ಪಂದ್ಯದಲ್ಲಿ 33-28 ಅಂಕಗಳ ರೋಚಕ ಗೆಲುವು ಸಾಧಿಸಿದ ಭಾರತ, ಸತತ 4ನೇ ಪಂದ್ಯದಲ್ಲೂ ಯಶಸ್ಸು ಕಂಡು ಫೈನಲ್‌ಗೆ ಲಗ್ಗೆಯಿಟ್ಟಿತ್ತು. ಬರೋಬ್ಬರಿ 6 ವರ್ಷಗಳ ಬಳಿಕ ನಡೆದ ಏಷ್ಯನ್‌ ಕಬಡ್ಡಿ ಚಾಂಪಿಯನ್‌ಶಿಪ್‌ನಲ್ಲಿ ಹಾಲಿ ಚಾಂಪಿಯನ್ ಭಾರತ ತಂಡವು ಮೊದಲಾರ್ಧದಲ್ಲೇ ಆಕ್ರಮಣಕಾರಿ ಆಟವಾಡುವ ಮೂಲಕ ಫೈನಲ್‌ ಪಂದ್ಯದಲ್ಲಿ ಹಿಡಿತ ಸಾಧಿಸಿತ್ತು. ಆದರೆ ದ್ವಿತಿಯಾರ್ಧದಲ್ಲಿ ಭಾರತಕ್ಕೆ ಇರಾನ್ ತಂಡವು ತಿರುಗೇಟು ನೀಡುವತ್ತ ದಿಟ್ಟ ಹೋರಾಟ ನಡೆಸಿತು. ಹೀಗಿದ್ದೂ ಭಾರತ ತಂಡವು 10 ಅಂಕಗಳ ಅಂತರದ ಗೆಲುವು ದಾಖಲಿಸುವ ಚಾಂಪಿಯನ್ ಪಟ್ಟ ಅಲಂಕರಿಸಿದೆ. 

ವಿದೇಶದಲ್ಲಿ ಭಜರಂಗ್‌, ವಿನೇಶ್‌ ಅಭ್ಯಾಸಕ್ಕೆ ಕ್ರೀಡಾ ಸಚಿವಾಲಯದಿಂದ ಓಕೆ

ಚಾಂಪಿಯನ್ ಪಟ್ಟ ಅಲಂಕರಿಸಿದ ಭಾರತ ಕಬಡ್ಡಿ ತಂಡವು ಚಿನ್ನದ ಪದಕಕ್ಕೆ ಕೊರಳೊಡ್ಡಿದರೆ, ರನ್ನರ್ ಅಪ್‌ ಇರಾನ್ ತಂಡವು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿತು. ಇನ್ನು 5 ಪಂದ್ಯಗಳ ಪೈಕಿ 3 ಪಂದ್ಯಗಳನ್ನು ಜಯಿಸುವ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದ ಚೈನೀಸ್ ತೈಪೆ ತಂಡವು ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿತು. 

ಇನ್ನು  ಭಾರತ ಕಬಡ್ಡಿ ತಂಡವು ಚಾಂಪಿಯನ್ ಆಗುತ್ತಿದ್ದಂತೆಯೇ ಕೇಂದ್ರ ಕ್ರೀಡಾಸಚಿವ ಅನುರಾಗ್ ಠಾಕೂರ್ ಟ್ವೀಟ್ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. 

ಭಾರತದ ಚಾಂಪಿಯನ್ ಕಬಡ್ಡಿ ತಂಡ ಹೀಗಿದೆ:

ಪವನ್‌ ಶೆರಾವತ್‌, ಅರ್ಜುನ್‌ ದೇಶ್ವಾಲ್‌, ನವೀನ್‌ ಕುಮಾರ್‌, ಸಚಿನ್‌, ಅಸ್ಲಾಂ ಇನಾಂದಾರ್‌, ಮೋಹಿತ್‌ ಗೋಯತ್‌, ಸುನಿಲ್‌ ಕುಮಾರ್‌, ಪರ್ವೇಶ್‌ ಬೈನ್ಸ್‌ವಾಲ್‌, ನಿತಿನ್‌ ರಾವಲ್‌, ನಿತೀಶ್‌ ಕುಮಾರ್‌, ಸುರ್ಜೀತ್‌ ಸಿಂಗ್‌, ವಿಶಾಲ್‌ ಭಾರದ್ವಾಜ್‌. 

ಮೀಸಲು ಆಟಗಾರರು: ವಿಜಯ್‌ ಮಲಿಕ್‌, ಶುಭಂ ಶಿಂಧೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?