ಮನೆಯೊಡೆದ ಸೊಸೆ; ಮಾವನ ಆರೋಪಕ್ಕೆ ಖಡಕ್ ತಿರುಗೇಟು ಕೊಟ್ಟ ಜಡೇಜಾ ಪತ್ನಿ ರಿವಾಬ

Published : Feb 12, 2024, 05:01 PM IST
ಮನೆಯೊಡೆದ ಸೊಸೆ; ಮಾವನ ಆರೋಪಕ್ಕೆ ಖಡಕ್ ತಿರುಗೇಟು ಕೊಟ್ಟ ಜಡೇಜಾ ಪತ್ನಿ ರಿವಾಬ

ಸಾರಾಂಶ

ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಬಿಜೆಪಿ ಶಾಸಕಿ ಹಾಗೂ ರವೀಂದ್ರ ಜಡೇಜಾ ಪತ್ನಿ ರಿವಾಬ ಅವರನ್ನು ಈ ಕುರಿತಂತೆ ಮಾತಿಗೆಳೆಯಲಾಯಿತು. "ನಾವಿಲ್ಲಿ ಯಾಕೆ ಬಂದಿದ್ದೇವೆ ಹೇಳಿ?. ನೀವು ಏನನ್ನು ಕೇಳಬೇಕು ಅಂದುಕೊಂಡಿದ್ದೀರೋ ಅದನ್ನು ನೇರವಾಗಿ ನನ್ನ ಬಳಿಯೇ ಕೇಳಿ ಎಂದು ಖಡಕ್ ಆಗಿಯೇ ಉತ್ತರಿಸಿದ್ದಾರೆ.

ಸೌರಾಷ್ಟ್ರ(ಫೆ.12): ಭಾರತ ಕ್ರಿಕೆಟ್‌ ತಂಡದ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಕೌಟುಂಬಿಕ ಕಲಹ ಬೀದಿಗೆ ಬಿದ್ದಿದೆ. ಮಾಧ್ಯಮವೊಂದರಲ್ಲಿ ರವೀಂದ್ರ ಜಡೇಜಾ ಅವರ ತಂದೆ ನೀಡಿದ ಸಂದರ್ಶನದಲ್ಲಿ ಸೊಸೆ ರಿವಾಬ ಮೇಲೆ ಗಂಭೀರ ಆರೋಪ ಮಾಡಿದ್ದರು. ಈ ಸಂದರ್ಶನದ ತುಣುಕು ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದೆ. ಇನ್ನು ಇದೀಗ ತಮ್ಮ ಮಾವ ಮಾಡಿರುವ ಗಂಭೀರ ಆರೋಪದ ಕುರಿತಂತೆ ಕೇಳಲಾದ ಪ್ರಶ್ನೆಗೆ ರವೀಂದ್ರ ಜಡೇಜಾ ಪತ್ನಿ ಹಾಗೂ ಬಿಜೆಪಿ ಶಾಸಕಿ ಖಡಕ್ ತಿರುಗೇಟು ಕೊಟ್ಟಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಬಿಜೆಪಿ ಶಾಸಕಿ ಹಾಗೂ ರವೀಂದ್ರ ಜಡೇಜಾ ಪತ್ನಿ ರಿವಾಬ ಅವರನ್ನು ಈ ಕುರಿತಂತೆ ಮಾತಿಗೆಳೆಯಲಾಯಿತು. "ನಾವಿಲ್ಲಿ ಯಾಕೆ ಬಂದಿದ್ದೇವೆ ಹೇಳಿ?. ನೀವು ಏನನ್ನು ಕೇಳಬೇಕು ಅಂದುಕೊಂಡಿದ್ದೀರೋ ಅದನ್ನು ನೇರವಾಗಿ ನನ್ನ ಬಳಿಯೇ ಕೇಳಿ ಎಂದು ಖಡಕ್ ಆಗಿಯೇ ಉತ್ತರಿಸಿದ್ದಾರೆ.

ರವೀಂದ್ರ ಜಡೇಜಾ ಬಾಳಲ್ಲಿ ಬೆಂಕಿ ಬಿರುಗಾಳಿ..! ತಂದೆಯಿಂದ ಮಗನನ್ನ ದೂರ ಮಾಡಿದ್ರಾ ಸೊಸೆ..?

ಜಡೇಜಾ ತಂದೆ ಆರೋಪವೇನು?

ಸದ್ಯ ನಮಗೂ ಮತ್ತು ಜಡೇಜಾಗೂ ಯಾವುದೇ ಮಾತುಕತೆ ಇಲ್ಲ. ನಾವು ಅವರಿಗೆ ಫೋನ್ ಮಾಡಲ್ಲ. ಅವ್ರು ನಮಗೆ ಪೋನ್ ಮಾಡಲ್ಲ. ಜಡೇಜಾ ಪತ್ನಿ ಜೊತೆ ಜಾಮ್‌ನಗರದಲ್ಲಿರೋ ಬಂಗಲೆಯಲ್ಲಿ ವಾಸವಿದ್ದಾರೆ. ನಾವು ಬೇರೆ ಕಡೆ ಇದ್ದೇವೆ. ಜಡೇಜಾ ಮದುವೆಯಾದ ಎರಡ್ಮೂರು ತಿಂಗಳಿಗೇನೆ ನಮ್ಮ ಕುಟುಂಬದಲ್ಲಿ ಒಡಕು ಮೂಡಿತ್ತು. ರಿವಾಬಾ ಎಲ್ಲಾ ಆಸ್ತಿಯನ್ನ ತನ್ನೆಸರಿಗೆ ಮಾಡಬೇಕು ಅಂತ ಜಡೇಜಾಗೆ ಹೇಳಿದ್ಳು. ರಿವಾಬಾ, ಜಡೇಜಾಗೆ ಅದೇನು ಮ್ಯಾಜಿಕ್ ಮಾಡಿದ್ದಾಳೋ ಗೊತ್ತಿಲ್ಲ. ಜಡೇಜಾ ಕ್ರಿಕೆಟರ್ ಆಗದೇ ಇದ್ರೆ ಚೆನ್ನಾಗಿರ್ತಿತ್ತು, ನಮಗೆ ಈ ಪರಿಸ್ಥಿತಿ ಬರ್ತಿರಲಿಲ್ಲ ಅಂತ ರವೀಂದ್ರ ಜಡೇಜಾ ತಂದೆ ಅನಿರುದ್ಧ್ ಸಿಂಗ್ ಹೇಳಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು. 

ರಾಜ್‌ಕೋಟ್‌ ಟೆಸ್ಟ್‌ನಲ್ಲಿ 500 ವಿಕೆಟ್ ಕ್ಲಬ್ ಸೇರಲು ರವಿಚಂದ್ರನ್ ಅಶ್ವಿನ್ ರೆಡಿ

ಇನ್ನು ತನ್ನ ಹೆಂಡತಿ ವಿರುದ್ಧ ತಂದೆ ಮಾಡಿರೋ ಆರೋಪಗಳಿಗೆ ಜಡೇಜಾ ಪ್ರತಿಕ್ರಿಯಿಸಿದ್ದಾರೆ. ನನ್ನ ತಂದೆಯ ಇಂಟರ್‌ವ್ಯೂವ್‌ ಸ್ಕ್ರಿಪ್ಟೆಡ್ ಅಂತ ಟ್ವಿಟರ್ನಲ್ಲಿ ಪೋಸ್ಟ್‌ ಮಾಡಿರೋ ಜಡೇಜಾ, ಇಂಟರ್ವ್ಯೂವ್ನಲ್ಲಿ ಹೇಳಿರೋದೆಲ್ಲಾ ಶುದ್ಧ ಸುಳ್ಳು, ಆ ಮಾತುಗಳಿಗೆ ಯಾವುದೇ ಅರ್ಥ ಇಲ್ಲ. ನನ್ನ ಪತ್ನಿಯ ಘನತೆಯನ್ನ ಹಾಳು ಮಾಡೋ ಹುನ್ನಾರ ಇದರ ಹಿಂದೆ ಅಡಗಿದೆ. ಇದು ಒಳ್ಳಯೆದಲ್ಲ, ನಾನು ಅದನ್ನ ತೀವ್ರವಾಗಿ ಖಂಡಿಸುತ್ತೇನೆ. ನಾನು ಹಲವು ವಿಷಯಗಳನ್ನ ಹೇಳಬಹುದು. ಆದ್ರೆ, ಹೇಳದೇ ಇದ್ರೇನೆ ಒಳ್ಳೆಯದು ಅಂತ ಸುಮ್ಮನಿದ್ದೇನೆ ಅಂತ ಜಡೇಜಾ ಟ್ವೀಟ್ ಮಾಡಿದ್ದರು.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಒನ್‌8 ಬ್ರ್ಯಾಂಡ್‌ ಸೇಲ್‌: ತನ್ನ ಆಪ್ತ ಗೆಳೆಯನ ಈ ಸಂಸ್ಥೆಯಲ್ಲಿ ಕೊಹ್ಲಿ 40 ಕೋಟಿ ಹೂಡಿಕೆ!
IPL 2026 ಮಿನಿ ಹರಾಜು: 2 ಕೋಟಿ ಮೂಲ ಬೆಲೆ ಹೊಂದಿದ 5 ಸ್ಟಾರ್ ಆಟಗಾರರಿವರು!