ಕೊನೆಯ ಪಂದ್ಯ ಸೋತರೂ ಟಿ20 ಸರಣಿ ಗೆದ್ದ ಭಾರತ

Published : Dec 08, 2020, 05:30 PM IST
ಕೊನೆಯ ಪಂದ್ಯ ಸೋತರೂ ಟಿ20 ಸರಣಿ ಗೆದ್ದ ಭಾರತ

ಸಾರಾಂಶ

ಮೂರನೇ ಟಿ20 ಪಂದ್ಯದಲ್ಲಿ ಭಾರತ ವಿರುದ್ಧ ಆಸ್ಟ್ರೇಲಿಯಾ 12 ರನ್‌ಗಳ ರೋಚಕ ಜಯ ಸಾಧಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಸಿಡ್ನಿ(ಡಿ.08): ನಾಯಕ ವಿರಾಟ್ ಕೊಹ್ಲಿ(85) ಕೆಚ್ಚೆದೆಯ ಅರ್ಧಶತಕದ ಹೊರತಾಗಿಯೂ ಆಸ್ಟ್ರೇಲಿಯಾ ಆಲ್ರೌಂಡ್ ಪ್ರದರ್ಶನಕ್ಕೆ ಟೀಂ ಇಂಡಿಯಾ ಶರಣಾಗಿದ್ದು, 12 ರನ್‌ಗಳ ರೋಚಕ ಸೋಲು ಕಂಡಿದೆ. ಈ ಸೋಲಿನ ಹೊರತಾಗಿಯೂ ಟೀಂ ಇಂಡಿಯಾ 2-1 ಅಂತರದಲ್ಲಿ ಟಿ20 ಸರಣಿಯನ್ನು ಕೈವಶ ಮಾಡಿಕೊಂಡಿದೆ.

ಆಸ್ಟ್ರೇಲಿಯಾ ನೀಡಿದ್ದ 187 ರನ್‌ಗಳ ಸವಾಲಿನ ಗುರಿ ಬೆನ್ನತ್ತಿದ ಟೀಂ ಇಂಡಿಯಾ ಮೊದಲ ಓವರ್‌ನಲ್ಲಿ ಕನ್ನಡಿಗ ಕೆ.ಎಲ್. ರಾಹುಲ್ ವಿಕೆಟ್‌ ಕಳೆದುಕೊಂಡಿತು. ಇನ್ನು ಎರಡನೇ ವಿಕೆಟ್‌ಗೆ ಜತೆಯಾದ ನಾಯಕ ವಿರಾಟ್ ಕೊಹ್ಲಿ ಹಾಗೂ ಶಿಖರ್ ಧವನ್ ಜೋಡಿ 74 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಧವನ್ 21 ಎಸೆತಗಳಲ್ಲಿ 28 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇದಾದ ಬಳಿಕ ಮೂರನೇ ವಿಕೆಟ್‌ಗೆ ಸಂಜು ಸ್ಯಾಮ್ಸನ್‌-ಕೊಹ್ಲಿ 23 ರನ್‌ಗಳ ಜತೆಯಾಟವಾಡಿದರು.

ಬ್ಯಾಟಿಂಗ್ ಬೆನ್ನೆಲುಬು ಮುರಿದ ಸ್ವೆಪ್ಸನ್: ಒಂದು ಹಂತದಲ್ಲಿ ಗೆಲುವಿನತ್ತ ದಾಪುಗಾಲಿಡುತ್ತಿದ್ದ ಭಾರತ ತಂಡಕ್ಕೆ ಸ್ಪಿನ್ನರ್ ಮಿಚೆಲ್ ಸ್ವೆಪ್ಸನ್‌ ಆಘಾತ ನೀಡಿದರು. ಮೊದಲಿಗೆ ಧವನ್ ವಿಕೆಟ್‌ ಕಬಳಿಸಿದ್ದ ಸ್ವೆಪ್ಸನ್, ಆ ಬಳಿಕ ಕೊನೆಯ ಓವರ್‌ನಲ್ಲಿ ಸಂಜು ಸ್ಯಾಮ್ಸನ್ ಹಾಗೂ ಶ್ರೇಯಸ್‌ ಅಯ್ಯರ್‌ ಅವರನ್ನು ಪೆವಿಲಿಯನ್ನಿಗಟ್ಟುವ ಮೂಲಕ ಭಾರತಕ್ಕೆ ಶಾಕ್ ನೀಡಿದರು.'

ಏಕಾಂಗಿ ಹೋರಾಟ ನಡೆಸಿದ ವಿರಾಟ್ ಕೊಹ್ಲಿ: ಒಂದು ಕಡೆ ನಿರಂತರ ವಿಕೆಟ್‌ ಬೀಳುತ್ತಿದ್ದರೂ ಕೆಚ್ಚೆದೆಯ ಬ್ಯಾಟಿಂಗ್ ನಡೆಸಿದ ವಿರಾಟ್ ಕೊಹ್ಲಿ ತಂಡವನ್ನು ಗೆಲುವಿನ ದಡ ಸೇರಿಸಲು ಏಕಾಂಗಿ ಹೋರಾಟ ನಡೆಸಿದರು. 59 ಎಸೆತಗಳನ್ನು ಎದುರಿಸಿ ಕೊಹ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್‌ಗಳ ನೆರವಿನಿಂದ 84 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.  ಕೊನೆಯಲ್ಲಿ ಹಾರ್ದಿಕ್ ಪಾಂಡ್ಯ(20) ಹಾಗೂ ಶಾರ್ದೂಲ್ ಠಾಕೂರ್(17) ರನ್ ಬಾರಿಸಿದರಾದರೂ ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವಾಗಲಿಲ್ಲ.

ಇದಕ್ಕೂ ಮೊದಲು ಮ್ಯಾಥ್ಯೂ ವೇಡ್ ಹಾಗೂ ಗ್ಲೆನ್‌ ಮ್ಯಾಕ್ಸ್‌ವೆಲ್ ಆಕರ್ಷಕ ಅರ್ಧಶತಕದ ನೆರವಿನಿಂದ 5 ವಿಕೆಟ್ ಕಳೆದುಕೊಂಡು 186 ರನ್ ಬಾರಿಸಿತ್ತು.


 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಾತ್ಮನಿಗೆ ಐಸಿಸಿ ವಿಶೇಷ ಗೌರವ.. 2027ರ ಏಕದಿನ ವಿಶ್ವಕಪ್‌ಗೆ ದಿನಾಂಕ ನಿಗದಿ..!
IND vs SL 1st Test Day 2 Highlights : ಮಳೆಯ ನಡುವೆಯೂ ಟೀಂ ಇಂಡಿಯಾ ಭರ್ಜರಿ ಪ್ರದರ್ಶನ.. ಪಡಿಕ್ಕಲ್ ಇತಿಹಾಸ