
ನಾಗ್ಪುರ(ನ.10): ಬಾಂಗ್ಲಾದೇಶ ವಿರುದ್ಧದ 3ನೇ ಹಾಗೂ ಅಂತಿಮ ಟಿ20 ಪಂದ್ಯ ಸರಣಿ ಗೆಲುವಿಗೆ ನಿರ್ಣಾಯಕ ಪಂದ್ಯ. 1-1 ಅಂತರದಲ್ಲಿ ಸರಣಿ ಸಮಬಲಗೊಂಡಿರುವ ಕಾರಣ, ಈ ಪಂದ್ಯ ಗೆದ್ದ ತಂಡ ಸರಣಿ ಕೈವಶ ಮಾಡಲಿದೆ. ಮಹತ್ವದ ಪಂದ್ಯದಲ್ಲಿ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಅರ್ಧಶತಕ ನೆರವಿನಿಂದ ಭಾರತ 5 ವಿಕೆಟ್ ನಷ್ಟಕ್ಕೆ 174 ರನ್ ಸಿಡಿಸಿದೆ. ಈ ಮೂಲಕ ಬಾಂಗ್ಲಾಗೆ 175 ರನ್ ಟಾರ್ಗೆಟ್ ನೀಡಿದೆ.
ಇದನ್ನೂ ಓದಿ: ನಿರ್ಣಾಯಕ ಟಿ20: ತಂಡದ ಆಯ್ಕೆ ವಿರುದ್ದ ಫ್ಯಾನ್ಸ್ ಗರಂ!
ಟಾಸ್ ಸೋತು ಬ್ಯಾಟಿಂಗ್ ಇಳಿದ ಟೀಂ ಇಂಡಿಯಾ ಆರಂಭದಲ್ಲೇ ನಾಯಕ ರೋಹಿತ್ ಶರ್ಮಾ ವಿಕೆಟ್ ಕಳೆದುಕೊಂಡಿತು. ರೋಹಿತ್ ಶರ್ಮಾ ಕೇವಲ 2 ರನ್ ಸಿಡಿಸಿ ಔಟಾದರು. ಶಿಖರ್ ಧವನ್ 19 ರನ್ ಕಾಣಿಕೆ ನೀಡಿ ಪೆವಿಲಿಯನ್ ಸೇರಿಕೊಂಡರು. 35 ರನ್ಗೆ ಭಾರತದ 2 ವಿಕೆಟ್ ಪತನಗೊಂಡಿತ್ತು. ಆದರೆ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಜೊತೆಯಾಟದಿಂದ ಟೀಂ ಇಂಡಿಯಾ ದಿಟ್ಟ ಹೋರಾಟ ನೀಡಿತು.
ರಾಹುಲ್ ಅರ್ಧಶತಕ ಸಿಡಿಸಿ ಮಿಂಚಿದರು. ರಾಹುಲ್ 35 ಎಸೆತದಲ್ಲಿ 7 ಬೌಂಡರಿ ನೆರವಿನಿಂದ 52 ರನ್ ಸಿಡಿಸಿ ಔಟಾದರು. ಇತ್ತ ಶ್ರೇಯಸ್ ಅಯ್ಯರ್ ಹಾಫ್ ಸೆಂಚುರಿ ದಾಖಲಿಸಿದರು. ಅಯ್ಯರ್ ಹೋರಾಟ ಮುಂದುವರಿಸಿದರೆ, ಕಳಪೆ ಫಾರ್ಮ್ ನಡುವೆಯೂ ಅವಕಾಶ ಪಡೆಯುತ್ತಿರುವ ರಿಷಬ್ ಪಂತ್ ಮತ್ತೆ ನಿರಾಸೆ ಮೂಡಿಸಿದರು. ಪಂತ್ ಕೇವಲ 6 ರನ್ ಸಿಡಿಸಿ ಔಟಾದರು.
ಶ್ರೇಯಸ್ ಅಯ್ಯರ್ 62 ರನ್ ಸಿಡಿಸಿ ಔಟಾದರು. ಮನೀಶ್ ಪಾಂಡೆ ಅಜೇಯ 22ರನ್ ಹಾಗೂ ಶಿವಂ ದುಬೆ ಅಜೇಯ 9 ರನ್ ಮೂಲಕ ಭಾರತ 5 ವಿಕೆಟ್ ನಷ್ಟಕ್ಕೆ 174 ರನ್ ಸಿಡಿಸಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.