ಬಾಂಗ್ಲಾ ಏಕದಿನ ತಂಡಕ್ಕೆ ಹೊಸ ನಾಯಕ ನೇಮಕ

Suvarna News   | Asianet News
Published : Mar 09, 2020, 12:37 PM IST
ಬಾಂಗ್ಲಾ ಏಕದಿನ ತಂಡಕ್ಕೆ ಹೊಸ ನಾಯಕ ನೇಮಕ

ಸಾರಾಂಶ

ಬಾಂಗ್ಲಾದೇಶ ಏಕದಿನ ತಂಡಕ್ಕೆ ನೂತನ ಸಾರಥಿ ಆಯ್ಕೆಯಾಗಿದ್ದಾರೆ. ಮಶ್ರಾಫೆ ಮೊರ್ತಜಾ ಅವರಿಂದ ತೆರವಾದ ಸ್ಥಾನಕ್ಕೆ ಆರಂಭಿಕ ಬ್ಯಾಟ್ಸ್‌ಮನ್ ನಾಯಕರಾಗಿ ನೇಮಕವಾಗಿದ್ದಾರೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ.

ಢಾಕಾ(ಮಾ.09): ಆರಂಭಿಕ ಬ್ಯಾಟ್ಸ್‌ಮನ್‌ ತಮೀಮ್‌ ಇಕ್ಬಾಲ್‌ರನ್ನು ಬಾಂಗ್ಲಾದೇಶ ಏಕದಿನ ತಂಡದ ನೂತನ ನಾಯಕನಾಗಿ ನೇಮಕಗೊಂಡಿದ್ದಾರೆ. 

ಇತ್ತೀಚೆಗಷ್ಟೇ ಮಶ್ರಾಫೆ ಮೊರ್ತಜಾ ನಾಯಕತ್ವದಿಂದ ಕೆಳಗಿಳಿದಿದ್ದರು. ಏ.1ರಿಂದ ಪಾಕಿಸ್ತಾನ ವಿರುದ್ಧ ಆರಂಭವಾಗಲಿರುವ ಏಕದಿನ ಸರಣಿಯಲ್ಲಿ ಬಾಂಗ್ಲಾ ತಂಡವನ್ನು ತಮೀಮ್‌ ಇಕ್ಬಾಲ್‌ ಮುನ್ನಡೆಸಲಿದ್ದಾರೆ ಎಂದು ಬಿಸಿಬಿ ಅಧ್ಯಕ್ಷ ನಜ್ಮುಲ್‌ ಹಸನ್‌ ಭಾನುವಾರ ತಿಳಿಸಿದರು.

ಸೌತ್ ಆಫ್ರಿಕಾ ವಿರುದ್ಧ ಸರಣಿಗೆ ಭಾರತ ತಂಡ ಪ್ರಕಟ; ಹಾರ್ದಿಕ್ ಕಮ್‌ಬ್ಯಾಕ್!

ಮಶ್ರಾಫೆ ಮೊರ್ತಜಾ ಜಿಂಬಾಬ್ವೆ ವಿರುದ್ಧ ಕಡೆಯ ಬಾರಿಗೆ ನಾಯಕನಾಗಿ ಕಾರ್ಯ ನಿರ್ವಹಿಸಿದ್ದರು. ಬಾಂಗ್ಲಾದೇಶ 3 ಪಂದ್ಯಗಳ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡಿತ್ತು. ಇದರೊಂದಿಗೆ ಮೊರ್ತಾಜಾ ಬಾಂಗ್ಲಾದೇಶ ಪರ ನಾಯಕನಾಗಿ 50 ಏಕದಿನ ಗೆಲುವುಗಳನ್ನು ತಂದಿಟ್ಟಿದ್ದರು.

ಕಳೆದ ವಾರವಷ್ಟೇ ತಮೀಮ್ ಜಿಂಬಾಬ್ವೆ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 7,000 ರನ್ ಪೂರೈಸಿದ್ದರು. ಈ ಮೂಲಕ ಸಾಧನೆ ಮಾಡಿದ ಮೊದಲ ಬಾಂಗ್ಲಾ ಕ್ರಿಕೆಟಿಗ ಎನ್ನುವ ಗೌರವಕ್ಕೆ ಭಾಜನರಾಗಿದ್ದರು. ಕಳೆದ 5 ವರ್ಷಗಳಿಂದಲೂ ಬಾಂಗ್ಲಾದೇಶ ತಂಡದ ಅವಿಭಾಜ್ಯ ಅಂಗವಾಗಿ ತಮೀಮ್ ಇಕ್ಬಾಲ್ ಗುರುತಿಸಿಕೊಂಡಿದ್ದಾರೆ. ಇದುವರೆಗೂ 207 ಏಕದಿನ ಪಂದ್ಯಗಳನ್ನಾಡಿರುವ ಎಡಗೈ ಬ್ಯಾಟ್ಸ್‌ಮನ್ ಮೂರು ಬಾರಿಯಷ್ಟೇ ಹಂಗಾಮಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೆಲವೇ ದಿನದಲ್ಲಿ ಸ್ಮೃತಿ ಮಂಧನಾ ಮದುವೆ ಆಘಾತದಿಂದ ಹೊರಬಂದಿದ್ದೇಗೆ? 3 ವರ್ಷ ಹಿಂದೆ ಹೇಳಿದ್ದ ಟಿಪ್ಸ್
ದಕ್ಷಿಣ ಆಫ್ರಿಕಾ ಎದುರಿನ ಮೊದಲ ಟಿ20 ಪಂದ್ಯಕ್ಕೂ ಮೊದಲು ಗೊಂದಲಕ್ಕೆ ಸಿಲುಕಿದ ಗೌತಮ್ ಗಂಭೀರ್!