
ನವದೆಹಲಿ(ನ.27): 2020ರ ಮಾಚ್ರ್ನಲ್ಲಿ ಬಾಂಗ್ಲಾದೇಶದಲ್ಲಿ ನಡೆಯಲಿರುವ ಏಷ್ಯಾ ಇಲೆವೆನ್ ಹಾಗೂ ವಿಶ್ವ ಇಲೆವನ್ ನಡುವಿನ ಅಂತಾರಾಷ್ಟ್ರೀಯ ಟಿ20 ಸರಣಿಯಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್ ಧೋನಿ ಆಡುವ ಸಾಧ್ಯತೆಯಿದೆ. ಧೋನಿ ಸಹಿತ 7 ಭಾರತೀಯ ಆಟಗಾರರನ್ನು ಟೂರ್ನಿಯಲ್ಲಿ ಆಡಲು ಅನುಮತಿ ನೀಡಬೇಕು ಎಂದು ಬಾಂಗ್ಲಾ ಕ್ರಿಕೆಟ್ ಮಂಡಳಿ (ಬಿಸಿಬಿ), ಬಿಸಿಸಿಐಗೆ ಮನವಿ ಮಾಡಿದೆ ಎಂದು ಆಂಗ್ಲ ಮಾಧ್ಯಮವೊಂದು ವರದಿ ಮಾಡಿದೆ.
ಇದನ್ನೂ ಓದಿ: ಮದ್ವೆವರೆಗೆ ಪುರುಷರೆಲ್ಲರೂ ಸಿಂಹ: ಧೋನಿ ಮಾತಿನ ಮೋಡಿಗೆ ಸಲಾಂ!
ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ, ಧೋನಿ, ರೋಹಿತ್ ಶರ್ಮಾ, ಜಸ್ಪ್ರೀತ್ ಬೂಮ್ರಾ, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್ ಹಾಗೂ ರವೀಂದ್ರ ಜಡೇಜಾರನ್ನು ಕಳಹಿಸಬೇಕೆಂದು ಬಿಸಿಬಿ ಮನವಿ ಮಾಡಿದೆ. ಮಾ.18ರಿಂದ 21ರ ವರೆಗೆ 3 ದಿನಗಳ ಕಾಲ ಟೂರ್ನಿ ನಡೆಯಲಿದ್ದು, ಏಷ್ಯಾ ಹಾಗೂ ವಿಶ್ವ ಇಲೆವನ್ 2 ಟಿ20 ಪಂದ್ಯಗಳಲ್ಲಿ ಎದುರಾಗಲಿವೆ. 2007ರಲ್ಲಿ ಏಷ್ಯಾ ಇಲೆವೆನ್ ಹಾಗೂ ಆಫ್ರಿಕಾ ಇಲೆವೆನ್ ನಡುವಣ ನಡೆದಿದ್ದ ಟೂರ್ನಿಯಲ್ಲಿ ಧೋನಿ ಆಡಿದ್ದರು. ಅಂದು ಏಷ್ಯಾ ಇಲೆನೆನ್ 3-0 ಅಂತರದಲ್ಲಿ ಜಯಭೇರಿ ಬಾರಿಸಿತ್ತು.
ಇದನ್ನೂ ಓದಿ: ಹೊಸ ಇನಿಂಗ್ಸ್ ಶುರು ಮಾಡಿದ ಧೋನಿ; ರಾಂಚಿಯಲ್ಲಿ ಯುವಕರಿಗೆ ಕೋಚಿಂಗ್!
2019ನೇ ಸಾಲಿನ ಐಸಿಸಿ ಏಕದಿನ ವಿಶ್ವಕಪ್ ಸೆಮಿಫೈನಲ್ ಸೋಲಿನ ಬಳಿಕ ಭಾರತ ತಂಡದಿಂದ ಧೋನಿ ತಾವಾಗಿಯೇ ಹೊರಗುಳಿದಿದ್ದಾರೆ. ಬಳಿಕ ವಿಂಡೀಸ್ ಪ್ರವಾಸದಿಂದಲೂ ಹೊರಗುಳಿದ ಧೋನಿ, ಸೇನಾ ತರಬೇತಿಯಲ್ಲಿ ಭಾಗವಹಿಸಿದ್ದರು. ನಂತರ ರಜೆ ವಿಸ್ತರಿಸಿದ ಧೋನಿ ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ ಸರಣಿಯಿಂದಲೂ ಹೊರಗುಳಿದರು. ಧೋನಿ ನವೆಂಬರ್ ತನಕ ರಜೆ ವಿಸ್ತರಿಸಿದ್ದು, ಕ್ರಿಕೆಟ್ ಹೊರತುಪಡಿಸಿ ಇತರೆ ಆಟಗಳನ್ನು ಆಡುವ ಮೂಲಕ ರಜೆಯ ಮಜಾದಲ್ಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.