ಆರು ಬಾರಿಯ ವಿಶ್ವಕಪ್ ಚಾಂಪಿಯನ್ ಆಸ್ಟ್ರೇಲಿಯಾಗೆ ಮುಖಭಂಗ; ಬಾಂಗ್ಲಾದೇಶ ಎದುರು ಸರಣಿ ಸೋತ ಕಾಂಗರೂ ಪಡೆ

Published : Jun 12, 2026, 02:01 PM IST
Bangladesh

ಸಾರಾಂಶ

ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಬಾಂಗ್ಲಾದೇಶ ತಂಡವು 2-0 ಅಂತರದಲ್ಲಿ ಗೆದ್ದುಕೊಂಡಿದೆ. ಈ ಮೂಲಕ ಆಸ್ಟ್ರೇಲಿಯಾ ವಿರುದ್ಧ ಇದೇ ಮೊದಲ ಬಾರಿಗೆ ಏಕದಿನ ಸರಣಿ ಗೆದ್ದು ಐತಿಹಾಸಿಕ ಸಾಧನೆ ಮಾಡಿದೆ. ಎರಡನೇ ಪಂದ್ಯದಲ್ಲಿ ಡೆಕ್ವರ್ಥ್ ಲೂಯಿಸ್ ನಿಯಮದನ್ವಯ 5 ವಿಕೆಟ್‌ಗಳ ಜಯ ಸಾಧಿಸಿ ಸರಣಿ ಕೈವಶ ಮಾಡಿಕೊಂಡಿತು.

ಢಾಕಾ: ಆರು ಬಾರಿಯ ಏಕದಿನ ವಿಶ್ವಕಪ್ ಚಾಂಪಿಯನ್ ಆಸ್ಟ್ರೇಲಿಯಾ ತಂಡಕ್ಕೆ ಬಾಂಗ್ಲಾದೇಶ ಎದುರು ಭಾರೀ ಮುಖಭಂಗ ಎದುರಾಗಿದೆ. ಬಾಂಗ್ಲಾದೇಶ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಸತತ ಎರಡು ಪಂದ್ಯಗಳಲ್ಲಿ ಬಾಂಗ್ಲಾದೇಶ ತಂಡವು ಗೆಲ್ಲುವ ಮೂಲಕ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ 2-0 ಅಂತರದಲ್ಲಿ ಸರಣಿ ಕೈವಶ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾ ಎದುರು ಏಕದಿನ ಸರಣಿ ಜಯಿಸುವಲ್ಲಿ ಬಾಂಗ್ಲಾದೇಶ ಯಶಸ್ವಿಯಾಗಿದೆ.

ಅಲ್ಪ ಮೊತ್ತಕ್ಕೆ ಕುಸಿದ ಬಾಂಗ್ಲಾದೇಶ

ಮಳೆ ಬಾಧಿತ ಪಂದ್ಯದಲ್ಲಿ ಮುಸ್ತಾಫಿಜುರ್ ರೆಹಮಾನ್, ಟಸ್ಕಿನ್ ಅಹಮದ್ ಮಾರಕ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯಾ ತಂಡವು 42 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 187 ರನ್‌ಗಳನ್ನು ಕಲೆಹಾಕಿತ್ತು. ಇನ್ನು ಡೆಕ್ವರ್ಥ್ ಲೂಯಿಸ್ ನಿಯಮದನ್ವಯ ಬಾಂಗ್ಲಾದೇಶ ತಂಡಕ್ಕೆ ಗೆಲ್ಲಲು 41 ಓವರ್‌ಗಳಲ್ಲಿ 192 ರನ್‌ಗಳ ಟಾರ್ಗೆಟ್ ನೀಡಲಾಯಿತು. ಬಾಂಗ್ಲಾದೇಶ ಪರ ಮುಸ್ತಾಫಿಜುರ್ ರೆಹಮಾನ್, ಟಸ್ಕಿನ್ ಅಹಮದ್ ತಲಾ 3 ವಿಕೆಟ್ ಪಡೆದರೆ, ತನ್ವೀರ್ ಇಸ್ಲಾಂ ಎರಡು ವಿಕೆಟ್ ಪಡೆದರು.

 

ಬಾಂಗ್ಲಾದೇಶ ತಂಡವು ಖಾತೆ ತೆರೆಯುವ ಮುನ್ನವೇ ತಂಜೀದ್ ಹಸನ್ ತಮಿಮ್ ಖಾತೆ ತೆರೆಯುವ ಮುನ್ನವೇ ಬಾರ್ಟ್ಲೆಟ್ ಅವರಿಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು. ಆದರೆ ಎರಡನೇ ವಿಕೆಟ್‌ಗೆ ಸೌಮ್ಯ ಸರ್ಕಾರ್ ಹಾಗೂ ನಜ್ಮುಲ್ ಹೊಸೈನ್ ಶಾಂತೋ ಅತ್ಯಂತ ಜವಾಬ್ದಾರಿಯುತ ಆಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಎರಡನೇ ವಿಕೆಟ್‌ಗೆ ಈ ಜೋಡಿ 86 ರನ್‌ಗಳ ಜತೆಯಾಟವಾಡಿತು. ಸೌಮ್ಯ ಸರ್ಕಾರ್ 42 ಹಾಗೂ ನಜ್ಮುಲ್ ಹೊಸೈನ್ ಶಾಂತೊ 41 ರನ್ ಬಾರಿಸಿದರು.

ಇನ್ನು ಮಧ್ಯಮ ಕ್ರಮಾಂಕದಲ್ಲಿ ಲಿಟನ್ ದಾಸ್ 21 ರನ್ ಬಾರಿಸಿದರೆ, ತೌಹಿದ್ ಹೃದಯ್ ಅಜೇಯ 40 ಸಿಡಿಸಿದರು. ಇನ್ನು ಮೊಸದ್ದೆಕ್ ಹೊಸೈನ್ 15 ಹಾಗೂ ನಾಯಕ ಮೆಹದಿ ಹಸನ್ ಮಿರಜ್ ಅಜೇಯ 22 ರನ್ ಸಿಡಿಸಿದರು. ಈ ಮೂಲಕ ಇನ್ನೂ ಆರು ಓವರ್ ಬಾಕಿ ಇರುವಂತೆಯೇ ಅನಾಯಾಸವಾಗಿ ಬಾಂಗ್ಲಾದೇಶ ತಂಡವನ್ನು ಗೆಲುವಿನ ದಡ ಸೇರಿಸಿದರು.

2-0 ಅಂತರದಲ್ಲಿ ಸರಣಿ ಕೈವಶ ಮಾಡಿಕೊಂಡ ಬಾಂಗ್ಲಾದೇಶ

ಬಾಂಗ್ಲಾದೇಶ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವು ಡೆಕ್ವರ್ತ್ ಲೂಯಿಸ್ ನಿಯಮದನ್ವಯ 86 ರನ್‌ಗಳ ಗೆಲುವು ದಾಖಲಿಸುವ ಮೂಲಕ ಶುಭಾರಂಭ ಮಾಡಿತ್ತು. ಇದೀಗ ಎರಡನೇ ಏಕದಿನ ಪಂದ್ಯದಲ್ಲೂ ಡೆಕ್ವರ್ತ್ ಲೂಯಿಸ್ ನಿಯಮದನ್ವಯ 5 ವಿಕೆಟ್‌ಗಳ ಜಯ ಸಾಧಿಸಿದೆ. ಇದೀಗ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯವು ಜೂನ್ 14ರಂದು ಢಾಕಾದಲ್ಲಿ ನಿಗದಿಯಾಗಿದೆ. ಬಾಂಗ್ಲಾದೇಶ ತಂಡವು ಇದೀಗ ಸರಣಿ ಕ್ಲೀನ್ ಸ್ವೀಪ್ ಮೇಲೆ ಕಣ್ಣಿಟ್ಟಿದ್ದರೇ, ಆಸ್ಟ್ರೇಲಿಯಾ ತಂಡವು ವೈಟ್‌ವಾಷ್‌ನಿಂದ ಪಾರಾಗಲು ಹೋರಾಡಲಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ತಂದೆಯ ಹಾದಿಯಲ್ಲಿ ಮಗ! ಭಾರತ ಅಂಡರ್-19 ತಂಡಕ್ಕೆ ವಿಕೆಟ್ ಕೀಪರ್ ಬ್ಯಾಟರ್ ಆಗಿ ಅನ್ವಯ್ ದ್ರಾವಿಡ್ ಎಂಟ್ರಿ!
ಇಂದಿನಿಂದ 10ನೇ ಸೀಸನ್ ಮಹಿಳಾ ಟಿ20 ವಿಶ್ವಕಪ್; ಚಾಂಪಿಯನ್ ತಂಡಕ್ಕೆ ಸಿಗಲಿದೆ ಕೋಟಿ ಕೋಟಿ ಬಹುಮಾನ