ಬಿಸಿಸಿಐ ವಾರ್ಷಿಕ ಪ್ರಶಸ್ತಿ ಪ್ರದಾನ; ಬುಮ್ರಾ, ಶ್ರೀಕಾಂತ್‌ಗೆ ಪ್ರತಿಷ್ಠಿತ ಪ್ರಶಸ್ತಿ!

Suvarna News   | Asianet News
Published : Jan 12, 2020, 09:11 PM IST
ಬಿಸಿಸಿಐ ವಾರ್ಷಿಕ ಪ್ರಶಸ್ತಿ ಪ್ರದಾನ; ಬುಮ್ರಾ, ಶ್ರೀಕಾಂತ್‌ಗೆ ಪ್ರತಿಷ್ಠಿತ ಪ್ರಶಸ್ತಿ!

ಸಾರಾಂಶ

2018-19ರ ಸಾಲಿನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಕ್ರಿಕೆಟಿಗರು ಹಾಗೂ ಜೀವನಮಾನ ಶ್ರೇಷ್ಠ ಸಾಧನೆ ಮಾಡಿದ ಮಾಜಿ ಕ್ರಿಕೆಟಿಗರಿಗೆ ಬಿಸಿಸಿಐ ವಾರ್ಷಿಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ವೇಗಿ ಜಸ್ಪ್ರೀತ್ ಬುಮ್ರಾ, ಮಾಜಿ ಕ್ರಿಕೆಟಿಗ ಕೃಷ್ಣಮಾಚಾರಿ ಶ್ರೀಕಾಂತ್ ಪ್ರತಿಷ್ಠಿತ ಪ್ರಶಸ್ತಿ ಸ್ವೀಕರಿಸಿದ್ದಾರೆ. 

ಮುಂಬೈ(ಜ.12): ಬಿಸಿಸಿಐ ವಾರ್ಷಿಕ ಪ್ರಶಸ್ತಿ ಸಮಾರಂಭ ಯಶಸ್ವಿಯಾಗಿ ನಡೆದಿದೆ. 2018-19ರ ಸಾಲಿನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಐತಿಹಾಸಿಕ ಗೆಲುವಿಗೆ ಕಾರಣರಾದ ವೇಗಿ ಜಸ್ಪ್ರೀತ್ ಬುಮ್ರಾ ಹಾಗೂ ಮಹಿಳಾ ತಂಡದ ಪೂನಮ್ ಯಾದವ್ ಪ್ರತಿಷ್ಠಿತ ಪಾಲಿ ಉಮ್ರಿಗರ್ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಇದನ್ನೂ ಓದಿ: ಆಸೀಸ್ ಸರಣಿಗೂ ಮುನ್ನ ಶುರುವಾಯ್ತು ವಿರಾಟ್‌ಗೆ ಟೆನ್ಷನ್..!.

ಮುಂಬೈನಲ್ಲಿ ನಡೆದ ನಮಾನ್ ಪ್ರಶಸ್ತಿ ಸಮಾರಂಭದಲ್ಲಿ ಬುಮ್ರಾ ಹಾಗೂ ಪೂನಮ್ ಯಾದವ್ ಪ್ರಶಸ್ತಿ ಸ್ವೀಕರಿಸಿದರು. 2018-19 ಸಾಲಿನಲ್ಲಿ ಟೆಸ್ಟ್ ಕ್ರಿಕೆಟ್‌ನ ಗರಿಷ್ಠ ವಿಕೆಟ್ ಟೇಕರ್ ಪ್ರಶಸ್ತಿಗೆ ಬುಮ್ರಾ ಪಾತ್ರರಾದರೆ, ಚೇತೇಶ್ವರ್ ಪೂಜಾರ ಗರಿಷ್ಠ ರನ್ ಸಿಡಿಸಿ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಬೆಸ್ಟ್ ಡೆಬ್ಯೂ ಆಟಗಾರ ಪ್ರಶಸ್ತಿ ಕನ್ನಡಿಗ ಮಯಾಂಕ್ ಅಗರ್ವಾಲ್ ಪಾಲಾಗಿದೆ. ಮಾಜಿ ಕ್ರಿಕೆಟಿಗ ಕೃಷ್ಣಮಾಚಾರಿ ಶ್ರೀಕಾಂತ್ ಹಾಗೂ ಮಹಿಳಾ ಆಟಗಾರ್ತಿ ಅಂಜುಮ್ ಚೋಪ್ರಾಗೆ ಸಿಕೆ ನಾಯ್ದು ಜೀವಮಾನ ಶ್ರೇಷ್ಠ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 

ಇದನ್ನೂ ಓದಿ: ಟಿ20 ಮಹಿಳಾ ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ; ಕರ್ನಾಟಕದ ಇಬ್ಬರಿಗೆ ಸ್ಥಾನ!

2018-19ರ ಸಾಲಿನ ರಣಜಿ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಶಿವಂ ದುಬೆ, ಅತ್ಯುತ್ತಮ ದೇಸಿ ಅಲ್ರೌಂಡರ್ ಪ್ರಶಸ್ತಿ ಪಡೆದರು. ನಿಗದಿತ ಓವರ್ ದೇಸಿ ಟೂರ್ನಿಗಳಲ್ಲಿ ನಿತೀಶ್ ರಾಣ ಅತ್ಯುತ್ತಮ ಆಲ್ರೌಂಡರ್ ಪ್ರಶಸ್ತಿ ಸ್ವೀಕರಿಸಿದರು.

ಕಳೆದ ಸಾಲಿನ ರಣಜಿ ಟೂರ್ನಿಯಲ್ಲಿ ಗರಿಷ್ಠ ರನ್ ಸಿಡಿಸಿದ ಪ್ರಶಸ್ತಿಗೆ ಮಿಲಿಂದ್ ಕುಮಾರ್ ಪಾತ್ರರಾಗಿದ್ದಾರೆ. ಗರಿಷ್ಠ ವಿಕೆಟ್ ಟೇಕರ್ ಪ್ರಶಸ್ತಿ ಅಶುತೋಶ್ ಅಮನ್ ಪಾಲಾಗಿದೆ. 

ಇದನ್ನೂ ಓದಿ: ಕ್ರಿಕೆಟಿಂದ ಧೋನಿ ದೂರ ಇರುವುದೇಕೆ: ಗವಾಸ್ಕರ್‌ ಪ್ರಶ್ನೆ

ಇದೇ ವೇಳೆ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ 7ನೇ ಮನ್ಸೂರ್ ಆಲಿ ಖಾನ್ ಪಟೌಡ್ ಉಪನ್ಯಾಸ ನೀಡಿದರು. ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಆಯ್ಕೆಯಾಗಿರುವ ಟೀಂ ಇಂಡಿಯಾ ಕ್ರಿಕೆಟಿಗರು, ರಣಜಿ ಕ್ರಿಕಿಟಗರು ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಜಯ್‌ ಹಜಾರೆ ಟ್ರೋಫಿ: ಒಂದೂವರೆ ದಶಕದ ಬಳಿಕ ಡೆಲ್ಲಿ ಪರ ವಿರಾಟ್ ಕೊಹ್ಲಿ ಮೈದಾನಕ್ಕೆ! ಬೆಂಗಳೂರಲ್ಲಿ ನಡೆಯುತ್ತೆ ಮ್ಯಾಚ್‌
ಬೆಂಗಳೂರಲ್ಲಿ ಐಪಿಎಲ್‌ ನಡೆಸಲು ಸಂಪುಟ ಅಸ್ತು