ಬಿಸಿಸಿಐ ವಾರ್ಷಿಕ ಸಾಮಾನ್ಯ ಸಭೆ: ಇಂದು ಮಹತ್ವದ ತೀರ್ಮಾನ

Published : Dec 24, 2020, 07:38 AM IST
ಬಿಸಿಸಿಐ ವಾರ್ಷಿಕ ಸಾಮಾನ್ಯ ಸಭೆ: ಇಂದು ಮಹತ್ವದ ತೀರ್ಮಾನ

ಸಾರಾಂಶ

2021ರಲ್ಲಿ ನಡೆಯಲಿರುವ ಮಹತ್ವದ ಟೂರ್ನಿಗಳು ಸೇರಿದಂತೆ ಇತರೆ ವಿಷಯಗಳ ಬಗ್ಗೆ ಚರ್ಚೆ ನಡೆಸಲು ಬಿಸಿಸಿಐ ಸಾಮಾನ್ಯ ಸಭೆ ಜರುಗಲಿದೆ. ಈ ಸಭೆಯಲ್ಲಿ 14ನೇ ಆವೃತ್ತಿಯ ಐಪಿಎಲ್‌ ಭವಿಷ್ಯ ಸೇರಿದಂತೆ ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಅಹಮದಾಬಾದ್(ಡಿ.24)‌: ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಬಿಸಿಸಿಐ ಗುರುವಾರ (ಡಿ.24) ಇಲ್ಲಿ ವಾರ್ಷಿಕ ಸಾಮಾನ್ಯ ಸಭೆ ನಡೆಸಲಿದೆ. ಸಭೆಯಲ್ಲಿ ಮುಂಬರುವ ಕ್ರಿಕೆಟ್‌ ಟೂರ್ನಿ, 2021ರಲ್ಲಿ ನಡೆಯಲಿರುವ ಮಹತ್ವದ ಟೂರ್ನಿಗಳು ಸೇರಿದಂತೆ ಇತರೆ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ. 14ನೇ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ 10 ತಂಡಗಳು ಆಡುವ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆಯಿದೆ.

ತೀವ್ರ ಕುತೂಹಲ ಮೂಡಿಸಿರುವ ಟಿ20 ವಿಶ್ವಕಪ್‌ನ ದಿನಾಂಕ ಹಾಗೂ ಸ್ಥಳದ ವಿವರವನ್ನು ಬಿಸಿಸಿಐ ಸಭೆಯಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಿದೆ ಎನ್ನಲಾಗಿದೆ. ಸಭೆಯಲ್ಲಿ ಭಾರತ ಆತಿಥ್ಯ ವಹಿಸಿರುವ 2021ರ ಟಿ20 ವಿಶ್ವಕಪ್‌ ತೆರಿಗೆ ವಿನಾಯಿತಿ, ಐಪಿಎಲ್‌ ತಂಡಗಳ ಸೇರ್ಪಡೆಗೆ ಇರುವ ಸ್ಥಿತಿಗತಿ ಹಾಗೂ ದೇಶೀಯ ಕ್ರಿಕೆಟ್‌ ಟೂರ್ನಿಗಳ ಆಯೋಜನೆ ಸೇರಿದಂತೆ ಇತರೆ ಮಹತ್ವದ ವಿಷಯಗಳ ಚರ್ಚೆ ನಡೆಸುವ ಸಾಧ್ಯತೆಯಿದೆ.

ಕೋಟ್ಲಾದಲ್ಲಿ ಜೇಟ್ಲಿ ಪ್ರತಿಮೆ; DDCA ವಿರುದ್ಧ ಕಿಡಿಕಾರಿದ ಬಿಷನ್ ಸಿಂಗ್ ಬೇಡಿ

2020ರ ಸೆಪ್ಟೆಂಬರ್‌-ಅಕ್ಟೋಬರ್‌ ವೇಳೆಗೆ ಆಸ್ಪ್ರೇಲಿಯಾದಲ್ಲಿ ಈ ಟಿ20 ವಿಶ್ವಕಪ್‌ ನಡೆಯಬೇಕಿತ್ತು. ಆದರೆ ಕೊರೋನಾ ಕಾರಣದಿಂದ 1 ವರ್ಷ ಮುಂದೂಡಿಕೆಯಾದ ಕಾರಣ, ಐಸಿಸಿ ಈ ಟೂರ್ನಿಯನ್ನು ಭಾರತದಲ್ಲಿ ನಡೆಸಲು ನಿರ್ಧರಿಸಿದೆ.

ಸಭೆಯಲ್ಲಿ ಹೈದ್ರಾಬಾದ್‌ ಕ್ರಿಕೆಟ್‌ ಸಂಸ್ಥೆ ಅಧ್ಯಕ್ಷ, ಮಾಜಿ ನಾಯಕ ಮೊಹಮದ್‌ ಅಜರುದ್ದೀನ್‌, ಮಾಜಿ ಆಟಗಾರ ಬ್ರಿಜೇಶ್‌ ಪಟೇಲ್‌, ಮಾಜಿ ಸೌರಾಷ್ಟ್ರ ತಂಡದ ನಾಯಕ ಜಯ್‌ದೇವ್‌ ಶಾ ಸೇರಿದಂತೆ ಇತರೆ ರಾಜ್ಯ ಕ್ರಿಕೆಟ್‌ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಗಂಗೂಲಿ, ಶಾ ಮಧ್ಯೆ ಸ್ನೇಹ ಸೌಹಾರ್ದ ಪಂದ್ಯ:

ಇಲ್ಲಿನ ಮೊಟೆರಾದ ಸರ್ದಾರ್‌ ಪಟೇಲ್‌ ಸ್ಟೇಡಿಯಂನಲ್ಲಿ ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಹಾಗೂ ಕಾರ‍್ಯದರ್ಶಿ ಜಯ್‌ ಶಾ ಇಲೆವೆನ್‌ ತಂಡಗಳ ನಡುವೆ ಬುಧವಾರ ಸ್ನೇಹ ಸೌಹಾರ್ದಯುತ ಕ್ರಿಕೆಟ್‌ ಪಂದ್ಯವನ್ನು ನಡೆಸಲಾಯಿತು. ಪಂದ್ಯದಲ್ಲಿ ಬಿಸಿಸಿಐನ ಪದಾಧಿಕಾರಿಗಳು, ಮಾಜಿ ಕ್ರಿಕೆಟಿಗರು ಪಾಲ್ಗೊಂಡಿದ್ದರು. 1 ಲಕ್ಷದ 10 ಸಾವಿರ ಆಸನದ ಸಾಮರ್ಥ್ಯ ಹೊಂದಿರುವ ಕ್ರೀಡಾಂಗಣದಲ್ಲಿ ಪಂದ್ಯವನ್ನು ನಡೆಸಿದ್ದು ವಿಶೇಷವಾಗಿತ್ತು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

IND vs SL 1st Test Day 2 Highlights : ಮಳೆಯ ನಡುವೆಯೂ ಟೀಂ ಇಂಡಿಯಾ ಭರ್ಜರಿ ಪ್ರದರ್ಶನ.. ಪಡಿಕ್ಕಲ್ ಇತಿಹಾಸ
Cricket: ಮ್ಯಾಚ್‌ ನಡೆಯುತ್ತಿರುವಾಗಲೇ ದಿಗ್ಗಜ ಆಟಗಾರನ ಅಸಮಾಧಾನ ಸ್ಫೋಟ! ಟೀಮ್‌ಗೆ ನನ್ನ ಮೇಲೆ ನಂಬಿಕೆಯಿಲ್ಲ, ಒಳೊಳಗೆ ತಾರತಮ್ಯ ನಡಿತಿದೆ ಎಂದ ಸ್ಟಾರ್‌ ಪ್ಲೇಯರ್!