
ಮುಂಬೈ(ಏ.05): 14ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಗುಜರಾತ್ ಮಾಜಿ ಡಿಜಿಪಿ ಶಬೀರ್ ಹುಸೇನ್ ಶೇಕ್ದಾಮ್ ಖಂಡ್ವಾಲಾ ಅವರನ್ನು ಬಿಸಿಸಿಐ ಭ್ರಷ್ಟಾಚಾರ ನಿಗ್ರಹ ಘಟಕದ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ಖಂಡ್ವಾಲಾ ಇದೀಗ ಏಪ್ರಿಲ್ 2018ರಿಂದ ಮಾರ್ಚ್ 2021ರವರೆಗೆ ಭ್ರಷ್ಟಾಚಾರ ನಿಗ್ರಹ ಘಟಕದ ಮುಖ್ಯಸ್ಥರನ್ನಾಗಿ ಕಾರ್ಯನಿರ್ವಹಿಸಿದ್ದ ಅಜಿತ್ ಸಿಂಗ್ ಸ್ಥಾನವನ್ನು ತುಂಬಲಿದ್ದಾರೆ.
ಅಜಿತ್ ಸಿಂಗ್ ಇನ್ನೂ ಕೆಲವು ಕಾಲ ತಾವು ಭ್ರಷ್ಟಾಚಾರ ನಿಗ್ರಹ ಘಟಕದ ಅಧ್ಯಕ್ಷರಾಗಿ ಮುಂದುವರೆಯುತ್ತೇನೆಂದು ತಿಳಿಸಿದ್ದಾರೆಂದು ಹೇಳಲಾಗಿತ್ತು. ಆದರೆ ಇದೀಗ ಖಂಡ್ವಾಲಾ ತಮ್ಮ ನೇಮಕವನ್ನು ಖಚಿತಪಡಿಸಿದ್ದು, ಬಿಸಿಸಿಐ ಜತೆ ಕಾರ್ಯನಿರ್ವಹಿಸುವುದು ತಮಗೆ ಸಿಕ್ಕ ಗೌರವ. ಬಿಸಿಸಿಐ ಜಗತ್ತಿನ ಶ್ರೇಷ್ಠ ಕ್ರಿಕೆಟ್ ಮಂಡಳಿ ಎಂದು ಬಣ್ಣಿಸಿದ್ದಾರೆ.
IPL 2021: ಆರ್ಸಿಬಿಯ ಈ ತಂಡ ಐಪಿಎಲ್ ಚಾಂಪಿಯನ್ ಪಟ್ಟ ಅಲಂಕರಿಸಬಹುದು..!
ಜಗತ್ತಿನ ಶ್ರೇಷ್ಠ ಕ್ರಿಕೆಟ್ ಸಂಸ್ಥೆ ಎನಿಸಿರುವ ಬಿಸಿಸಿಐ ಜತೆ ಕೆಲಸ ಮಾಡುವುದು ನನಗೆ ಸಿಕ್ಕ ಅತಿದೊಡ್ಡ ಗೌರವ. ರಕ್ಷಣೆಯ ವಿಚಾರದಲ್ಲಿ ನಾನು ಎಷ್ಟೇ ಪರಿಣಿತನಾಗಿದ್ದರೂ ನನ್ನ ನೆಚ್ಚಿನ ಕ್ರೀಡೆಗೆ ನೆರವಾಗುವುದು ನನಗೆ ಖುಷಿ ನೀಡಲಿದೆ ಎಂದು ಇಂಡಿಯನ್ ಎಕ್ಸ್ಪ್ರೆಸ್ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.
14ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಏಪ್ರಿಲ್ 09ರಿಂದ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.