
ಮುಂಬೈ(ಜೂ.12): ಕೊರೋನಾ ವೈರಸ್ ಕಾರಣ ಕ್ರಿಕೆಟ್ ನಿಂತು ಹೋಗಿದೆ. ಭಾರತದಲ್ಲಿ ಲಾಕ್ಡೌನ್ ಸಡಿಲಿಕೆ ಮಾಡಿದ ಬೆನ್ನಲ್ಲೇ ಕ್ರಿಕೆಟ್ ಪುನರ್ ಆರಂಭವಾಗುವ ನಿರೀಕ್ಷೆ ಇತ್ತು. ಆದರೆ ಇದು ಹುಸಿಯಾಗಿದೆ. ಆಗಸ್ಟ್ ತಿಂಗಳಲ್ಲಿ ಆಯೋಜಿಸಿದ್ದ ಭಾರತ ಹಾಗೂ ಜಿಂಬಾಬ್ವೆ ನಡುವಿನ ನಿಗದಿತ ಓವರ್ ಸರಣಿ ರದ್ದು ಮಾಡಲಾಗಿದೆ. ಈ ಮೂಲಕ ಬಿಸಿಸಿ ಮಹತ್ವದ ನಿರ್ಧಾರ ಪ್ರಕಟಿಸಿದೆ.
ಈ ವರ್ಷ ಖಾಲಿ ಮೈದಾನದಲ್ಲಾದರೂ ಐಪಿಎಲ್ ನಡೆಸಿಯೇ ಸಿದ್ಧ: ಗಂಗೂಲಿ
ಜೂನ್-ಜುಲೈ ತಿಂಗಳಲ್ಲಿ ಆಯೋಜಿಸಿದ್ದ ಭಾರತ-ಶ್ರೀಲಂಕಾ ಸರಣಿಯನ್ನು ಮುಂದೂಡಲಾಗಿದ ಎಂದು ಲಂಕಾ ಕ್ರಿಕೆಟ್ ಮಂಡಳಿ ಪ್ರಕಟಿಸಿತ್ತು. ಇದೀಗ ಬಿಸಿಸಿಐ ಜಿಂಬಾಬ್ವೆ ಪ್ರವಾಸವನ್ನೇ ಮುಂದೂಡಿದೆ. ಐಪಿಎಲ್ ಟೂರ್ನಿ ಸೇರಿದಂತೆ ಪ್ರಮುಖ ಸರಣಿಗಳತ್ತ ಗಮನ ಹರಿಸಿರುವ ಬಿಸಿಸಿಐ ಜಿಂಬಾಬ್ವೆ ಸರಣಿಯನ್ನು ಮುಂದೂಡುವ ಬದಲು ರದ್ದು ಮಾಡಿದೆ.
ಜಿಂಬಾಬ್ವೆ ವಿರುದ್ಧ 3 ಏಕದಿನ ಹಾಗೂ 3 ಟಿ20 ಸರಣಿ ಆಯೋಜಿಸಲಾಗಿತ್ತು. ವೇಳಾಪಟ್ಟಿ ಪ್ರಕಾರ ಜೂನ್ 24 ರಂದು ಟೀಂ ಇಂಡಿಯಾ, ಜಿಂಬಾಬ್ವೆಗೆ ಪ್ರಯಾಣ ಬೆಳೆಸಬೇಕಿತ್ತು. ಆದರೆ ಕೊರೋನಾ ವೈರಸ್ ಕಾರಣ ಟೂರ್ನಿ ರದ್ದು ಮಾಡುವುದಾಗಿ ಬಿಸಿಸಿಐ ಕಾರ್ಯದರ್ಶಿ ಜೈ ಶಾ ಹೇಳಿದ್ದಾರೆ.
ಭಾರತದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಬಿಸಿಸಿಐ, ಆಟಗಾರರ ತರಬೇತಿ ಶಿಬಿರನ್ನು ರದ್ದುಗೊಳಿಸಿದೆ. ಕೊರೋನಾ ನಿಯಂತ್ರಣಕ್ಕೆ ಬಂದ ಬಳಿಕವೇ ಕ್ರಿಕೆಟ್ ಪುನರ್ ಆರಂಭದ ಕುರಿತು ಚಿಂತಿಸಲಾಗುವುದು ಎಂದು ಜೈ ಶಾ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.