
ನವದೆಹಲಿ(ಮಾ.19): ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಈಗ ಐಷಾರಾಮಿ ವಿಮಾನ ಪ್ರಯಾಣಕ್ಕೂ ಕತ್ತರಿ ಹಾಕಿದ್ದು, ಟೀಂ ಇಂಡಿಯಾ ಆಯ್ಕೆ ಸಮಿತಿಯ ಮುಖ್ಯಸ್ಥರು ಮಾತ್ರ ಬ್ಯುಸನೆಸ್ ಕ್ಲಾಸ್ನಲ್ಲಿ ಪ್ರಯಾಣ ಬೆಳೆಸಲು ಅವಕಾಶ ಮಾಡಿಕೊಡಲಾಗಿದೆ.
ಇದನ್ನೂ ಓದಿ: ಈ ಬಾರಿ ಐಪಿಎಲ್ ಟೂರ್ನಿ ನಡೆಯೋದು ಡೌಟ್..!
ಉಳಿದಂತೆ ಸಮಿತಿಯ ಎಲ್ಲಾ ಸದಸ್ಯರು ಎಕಾನಮಿ ಕ್ಲಾಸ್ನಲ್ಲೇ ಪ್ರಯಾಣ ಬೆಳೆಸಬೇಕಿದೆ. ಈ ನಿಯಮ ಕಿರಿಯರ ಆಯ್ಕೆ ಸಮಿತಿಯ ಸದಸ್ಯರಿಗೂ ಅನ್ವಯವಾಗಲಿದೆ. ಬಿಸಿಸಿಐ ಈ ನಿರ್ಧಾರದಿಂದ ಮೊನ್ನೆ ಮೊನ್ನೆಯಷ್ಟೇ ಆಯ್ಕೆ ಸಮಿತಿ ಮುಖ್ಯಸ್ಥರಾಗಿ ನೇಮಕಗೊಂಡಿರುವ ಕನ್ನಡಿಗ ಸುನಿಲ್ ಜೋಶಿ ಅವರು ಈ ಅವಕಾಶ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಈ ಐವರು ಟೀಂ ಇಂಡಿಯಾ ಪ್ರತಿನಿಧಿಸಿದ್ದರು ಎನ್ನೋದು ನೆನಪಿದೆಯಾ..?
ಪ್ರಯಾಣದ ಅವಧಿ 7 ಗಂಟೆಗಿಂತ ಹೆಚ್ಚಿದ್ದರೆ ಮಾತ್ರ ಆಯ್ಕೆ ಸಮಿತಿಯ ಇತರೆ ಸದಸ್ಯರಿಗೂ ಬ್ಯುಸಿನೆಸ್ ಕ್ಲಾಸ್ ಸೌಕರ್ಯ ಸಿಗಲಿದೆ. ಹೊಸ ನಿಯಮದಿಂದ ಬಿಸಿಸಿಐಗೆ ವಾರ್ಷಿಕ ಲಕ್ಷಾಂತರ ರುಪಾಯಿ ಉಳಿತಾಯವಾಗಲಿದೆ ಎನ್ನಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.