BCCI ಉನ್ನತ ಮಟ್ಟದ ಸಭೆ : 5 ಮುಖ್ಯ ಅಜೆಂಡಾ ಚರ್ಚೆ, ನಾಳೆಯೇ ರೋಹಿತ್ ಶರ್ಮಾ ಭವಿಷ್ಯ ನಿರ್ಧಾರ

Published : Sep 02, 2026, 06:01 PM IST
Shubman Gill clears the air regarding ROHIT SHARMA RETIREMENT RUMOURS

ಸಾರಾಂಶ

ನಾಳೆ ಬಿಸಿಸಿಐ ಉನ್ನತ ಮಟ್ಟದ ಸಭೆ ನಡೆಸಲಿದೆ. ಈ ಸಭೆ ಬಳಿಕ ರೋಹಿತ್ ಶರ್ಮಾ ಅಭಿಮಾನಿಗಳಿಗೆ ಬೇಸರದ ಸುದ್ದಿ ಹೊರ ಬೀಳುವ ಸಾಧ್ಯತೆ ಇದೆ. ಜೊತೆಗೆ ನಾಳಿನ ಸಭೆಯಲ್ಲಿ ಒಟ್ಟು ಐದು ಪ್ರಮುಖ ವಿಚಾರಗಳು ಚರ್ಚೆಗೆ ಬರಲಿವೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮುಂಬೈ ಕಚೇರಿಯಲ್ಲಿ ಉನ್ನತ ಮಟ್ಟದ ಸಭೆಯನ್ನು ಆಯೋಜಿಸಿದೆ. ಈ ಸಭೆಯಲ್ಲಿ ಟೀಮ್ ಇಂಡಿಯಾದ ಪ್ರದರ್ಶನ, ಪ್ರಮುಖ ಆಟಗಾರರ ಭವಿಷ್ಯ ಮತ್ತು ಮುಂಬರುವ ದೊಡ್ಡ ಟೂರ್ನಿಗಳ ಬಗ್ಗೆ ಗಂಭೀರ ಚರ್ಚೆ ನಡೆಯಲಿದೆ. ಮುಖ್ಯವಾಗಿ ರೋಹಿತ್ ಶರ್ಮಾ ಅವರ ಮುಂದಿನ ಹಾದಿಯ ಬಗ್ಗೆ ಈ ಸಭೆಯಲ್ಲಿ ಸ್ಪಷ್ಟನೆ ಸಿಗುವ ಸಾಧ್ಯತೆಯಿದೆ.

ಯಾರೆಲ್ಲಾ ಭಾಗಿ?

ಮುಂಬೈನಲ್ಲಿ ನಡೆಯಲಿರುವ ಈ ಹೈ-ಲೆವೆಲ್ ಸಭೆಯಲ್ಲಿ ಬಿಸಿಸಿಐನ ಉನ್ನತ ಅಧಿಕಾರಿಗಳ ಜೊತೆಗೆ ಟೀಮ್ ಇಂಡಿಯಾ ಹೆಡ್ ಕೋಚ್ ಗೌತಮ್ ಗಂಭೀರ್, ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಮತ್ತು ಸೆಂಟರ್ ಆಫ್ ಎಕ್ಸಲೆನ್ಸ್ (CoE) ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಕೂಡ ಭಾಗವಹಿಸಲಿದ್ದಾರೆ.

ಸಭೆಯ ಅಜೆಂಡಾಗಳು

ರೋಹಿತ್ ಶರ್ಮಾ ಭವಿಷ್ಯ: 2027ರ ಏಕದಿನ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಆಡಲಿದ್ದಾರೆಯೇ ಅಥವಾ ಇಲ್ಲವೇ ಎಂಬುದರ ಕುರಿತು ಈ ಸಭೆಯಲ್ಲಿ ಚರ್ಚೆಯಾಗಲಿದೆ. ಹಲವು ವರದಿಗಳ ಪ್ರಕಾರ ರೋಹಿತ್ 2027ರ ವಿಶ್ವಕಪ್ ಪ್ಲಾನ್‌ನಲ್ಲಿ ಇಲ್ಲ ಎನ್ನಲಾಗುತ್ತಿದ್ದು, ಈ ಬಗ್ಗೆ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆಯಿದೆ.

ಪ್ರದರ್ಶನದ ವಿಮರ್ಶೆ: ಇಂಗ್ಲೆಂಡ್ ಮತ್ತು ಐರ್ಲೆಂಡ್ ಪ್ರವಾಸಗಳಲ್ಲಿ ಭಾರತ ಅನುಭವಿಸಿದ ಸೋಲಿನ ಬಗ್ಗೆ ಪರಾಮರ್ಶೆ ನಡೆಸಲಾಗುವುದು. ಜಿಂಬಾಬ್ವೆ ಮತ್ತು ಶ್ರೀಲಂಕಾ ವಿರುದ್ಧದ ಸರಣಿ ಗೆಲುವಿನ ಬಗ್ಗೆಯೂ ಚರ್ಚೆಯಾಗಲಿದೆ.

ಇಂಜುರಿ ಸಮಸ್ಯೆ: ಹಾರ್ದಿಕ್ ಪಾಂಡ್ಯ ಸೇರಿದಂತೆ ಹಲವು ಪ್ರಮುಖ ಆಟಗಾರರ ಫಿಟ್ನೆಸ್ ಮತ್ತು ಪದೇ ಪದೇ ಆಗುತ್ತಿರುವ ಗಾಯಗಳ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಲಿದೆ.

ಮುಂದಿನ ಸರಣಿಗಳು: ನ್ಯೂಜಿಲೆಂಡ್ ಪ್ರವಾಸ, ಬಾರ್ಡರ್-ಗವಾಸ್ಕರ್ ಟ್ರೋಫಿ ಮತ್ತು 2027ರ ವಿಶ್ವಕಪ್‌ಗೆ ರೋಡ್ ಮ್ಯಾಪ್ ಸಿದ್ಧಪಡಿಸುವುದು ಸಭೆಯ ಮುಖ್ಯ ಉದ್ದೇಶವಾಗಿದೆ.

ಅಗರ್ಕರ್ ಭವಿಷ್ಯದ ಬಗ್ಗೆಯೂ ಚರ್ಚೆ?

ಕೇವಲ ಆಟಗಾರರಲ್ಲದೆ, ಚೀಫ್ ಸೆಲೆಕ್ಟರ್ ಅಜಿತ್ ಅಗರ್ಕರ್ ಅವರ ಕಾರ್ಯವೈಖರಿ ಮತ್ತು ಅವರ ಭವಿಷ್ಯದ ಬಗ್ಗೆಯೂ ಈ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಸದ್ಯಕ್ಕೆ ಬಿಸಿಸಿಐ ಅಧಿಕೃತವಾಗಿ ಯಾವುದೇ ಅಜೆಂಡಾವನ್ನು ಬಹಿರಂಗಪಡಿಸಿಲ್ಲವಾದರೂ, ಈ ಸಭೆಯು ಭಾರತೀಯ ಕ್ರಿಕೆಟ್‌ನಲ್ಲಿ ಹೊಸ ದಿಕ್ಸೂಚಿಯಾಗಲಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Cricket: ವರ್ಲ್ಡ್‌ಕಪ್‌ಗಾಗಿ ಬಲವಂತದ ಅಬಾರ್ಷನ್, ಇನ್‌ಫ್ಲುಯೆನ್ಸರ್ ಜೊತೆ 2ನೇ ಮದುವೆ? ಬೀದಿಗೆ ಬಂದ ಸ್ಟಾರ್‌ ಸ್ಟಾರ್ ಕ್ರಿಕೆಟರ್ ಖಾಸಗಿ ಬದುಕು!
ದುಲೀಪ್ ಟ್ರೋಫಿ ಮೂಲಕ ಬಿಸಿಸಿಐ ಸೆಲೆಕ್ಟರ್ಸ್‌ಗೆ ಮತ್ತೊಂದು ಖಡಕ್ ವಾರ್ನಿಂಗ್ ಕೊಟ್ಟ ಮೊಹಮ್ಮದ್ ಶಮಿ!