ಮೇ 29ಕ್ಕೆ ಐಪಿಎಲ್‌, ವಿಶ್ವಕಪ್‌ ಭವಿಷ್ಯ ನಿರ್ಧಾರ?

Kannadaprabha News   | Asianet News
Published : May 20, 2021, 09:01 AM IST
ಮೇ 29ಕ್ಕೆ ಐಪಿಎಲ್‌, ವಿಶ್ವಕಪ್‌ ಭವಿಷ್ಯ ನಿರ್ಧಾರ?

ಸಾರಾಂಶ

* ಉಳಿದಿರುವ ಐಪಿಎಲ್ ಪಂದ್ಯಗಳನ್ನು ಇಂಗ್ಲೆಂಡ್‌ನಲ್ಲಿ ಆಯೋಜಿಸಲು ಬಿಸಿಸಿಐ ಚಿಂತನೆ * ಮೇ 29ಕ್ಕೆ ಸಾಮಾನ್ಯ ಸಭೆ ಕರೆದಿರುವ ಬಿಸಿಸಿಐ * ಈ ಸಭೆಯಲ್ಲಿ ಟಿ20 ವಿಶ್ವಕಪ್, ಐಪಿಎಲ್ ಆಯೋಜನೆಯ ಕುರಿತಂತೆ ಚರ್ಚೆ

ನವದೆಹಲಿ(ಮೇ.20): ಕೊರೋನಾದಿಂದಾಗಿ ಅರ್ಧಕ್ಕೆ ಸ್ಥಗಿತಗೊಂಡಿರುವ 14ನೇ ಆವೃತ್ತಿಯ ಐಪಿಎಲ್‌ ಟೂರ್ನಿ ಹಾಗೂ ಇದೇ ವರ್ಷ ಅಕ್ಟೋಬರ್‌-ನವೆಂಬರ್‌ನಲ್ಲಿ ಭಾರತದಲ್ಲೇ ನಡೆಯಬೇಕಿರುವ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಗಳ ಭವಿಷ್ಯ ನಿರ್ಧರಿಸಲು ಬಿಸಿಸಿಐ, ಮೇ 29ಕ್ಕೆ ವಿಶೇಷ ಸಾಮಾನ್ಯ ಸಭೆ ಕರೆದಿದೆ. 

ಮೂಲಗಳ ಪ್ರಕಾರ, ಐಪಿಎಲ್‌ ಭಾಗ-2 ಅನ್ನು ಇಂಗ್ಲೆಂಡ್‌ನಲ್ಲಿ ನಡೆಸಲು ಬಿಸಿಸಿಐ ಚಿಂತನೆ ನಡೆಸುತ್ತಿದೆ. ಈಗಾಗಲೇ ಇಂಗ್ಲೆಂಡ್‌ನ 4 ಕೌಂಟಿಗಳು, ಇಂಗ್ಲೆಂಡ್‌ ಕ್ರಿಕೆಟ್‌ ಮಂಡಳಿ (ಇಸಿಬಿ)ಯ ಮೂಲಕ ಐಪಿಎಲ್‌ ಆತಿಥ್ಯಕ್ಕೆ ಆಸಕ್ತಿ ವ್ಯಕ್ತಪಡಿಸಿವೆ. ಇಸಿಬಿ ಸಹ ಐಪಿಎಲ್‌ ಆಯೋಜಿಸಿದರೆ ಕೌಂಟಿಗಳಿಗೆ ಆರ್ಥಿಕ ನೆರವು ಸಿಗಲಿದೆ ಎನ್ನುವ ಲೆಕ್ಕಾಚಾರದಲ್ಲಿದ್ದು, ಭಾರತ ವಿರುದ್ಧದ 5 ಪಂದ್ಯಗಳ ಟೆಸ್ಟ್‌ ಸರಣಿಯ ವೇಳಾಪಟ್ಟಿಯನ್ನು ಪರಿಷ್ಕೃತಗೊಳಿಸಿ, ಐಪಿಎಲ್‌ ಆಯೋಜನೆಗೆ ಮುಂದಾಗಬಹುದು ಎನ್ನಲಾಗಿದೆ.

ಟೀಂ ಇಂಡಿಯಾ ಕ್ರಿಕೆಟ್ ಆಟಗಾರ್ತಿ ಪ್ರಿಯಾ ಪೂನಿಯಾ ತಾಯಿ ಕೊರೋನಾಗೆ ಬಲಿ

ಮತ್ತೊಂದೆಡೆ ಟಿ20 ವಿಶ್ವಕಪ್‌ ಆತಿಥ್ಯ ಉಳಿಸಿಕೊಳ್ಳಲು ಬಿಸಿಸಿಐ ಯೋಜನೆ ರೂಪಿಸುತ್ತಿದೆ. ಕೇವಲ 2 ನಗರಗಳಲ್ಲಿ ಪಂದ್ಯಗಳನ್ನು ನಡೆಸುವ ಬಗ್ಗೆಯೂ ಬಿಸಿಸಿಐ ಚಿಂತನೆ ನಡೆಸಿದೆ ಎನ್ನಲಾಗಿದೆ. ಒಂದು ವೇಳೆ ಭಾರತದಲ್ಲಿ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆಯೋಜಿಸಲು ಸಾಧ್ಯವಾಗದಿದ್ದರೆ, ಯುಎಇನಲ್ಲಿ ಚುಟುಕು ಕ್ರಿಕೆಟ್ ವಿಶ್ವಕಪ್‌ ಆಯೋಜನೆಯಾಗುವ ಸಾಧ್ಯತೆ ಬಹುತೇಕ ದಟ್ಟವಾಗಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಕಷ್ಟ ನಿವಾರಣೆಗೆ ಸಿಂಹಾಚಲಂ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ವಿರಾಟ್ ಕೊಹ್ಲಿ
ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷ, ಚುನಾವಣಾ ಫಲಿತಾಂಶ ಪ್ರಕಟ