ಕ್ರಿಕೆಟ್‌ ಸಲಹಾ ಸಮಿತಿಗೆ ಗಂಭೀರ್‌, ಮದನ್‌ ಲಾಲ್‌!

Suvarna News   | Asianet News
Published : Jan 13, 2020, 12:59 PM IST
ಕ್ರಿಕೆಟ್‌ ಸಲಹಾ ಸಮಿತಿಗೆ ಗಂಭೀರ್‌, ಮದನ್‌ ಲಾಲ್‌!

ಸಾರಾಂಶ

ಕ್ರಿಕೆಟ್ ಸಲಹಾ ಸಮಿತಿಗೆ ಭಾರತಕ್ಕೆ ವಿಶ್ವಕಪ್ ಗೆದ್ದುಕೊಟ್ಟ ಹೀರೋಗಳಾದ ಮದನ್ ಲಾಲ್, ಗೌತಮ್ ಗಂಭೀರ್ ಆಯ್ಕೆಯಾಗುವ ಸಾಧ್ಯತೆಯಿದೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ...

ನವದೆಹಲಿ(ಜ.13): ಕ್ರಿಕೆಟ್‌ ಸಲಹಾ ಸಮಿತಿಗೆ (ಸಿಎಸಿ) ಮಾಜಿ ಕ್ರಿಕೆಟಿಗರಾದ ಗೌತಮ್‌ ಗಂಭೀರ್‌ ಹಾಗೂ ಮದನ್‌ ಲಾಲ್‌ರನ್ನು ನೇಮಕ ಮಾಡಲು ಬಿಸಿಸಿಐ ನಿರ್ಧರಿಸಿದೆ. 

BCCI ನೊಟೀಸ್ ಬೆನ್ನಲ್ಲೇ CACಗೆ ಕಪಿಲ್ ದೇವ್ ರಾಜಿನಾಮೆ!

ಸಮಿತಿಯ 3ನೇ ಸದಸ್ಯರಾಗಿ ಮುಂಬೈನ ಮಹಿಳಾ ಕ್ರಿಕೆಟರ್‌ ಸುಲಕ್ಷಣಾ ನಾಯ್ಕ್ ಅವರನ್ನು ನೇಮಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಸಿಎಸಿ 2020ರಿಂದ ಮುಂದಿನ 4 ವರ್ಷಗಳಿಗೆ ರಾಷ್ಟ್ರೀಯ ತಂಡಗಳ ಆಯ್ಕೆ ಸಮಿತಿಯನ್ನು ಆಯ್ಕೆ ಮಾಡಲಿದೆ. ಈ ಸಮಿತಿ ಶೀಘ್ರದಲ್ಲೇ ಸಭೆ ಸೇರಲಿದ್ದು, ಭಾರತ ಪುರುಷರ ತಂಡದ ಆಯ್ಕೆ ಸಮಿತಿಯ ಮುಖ್ಯಸ್ಥರನ್ನಾಗಿ ಯಾರನ್ನು ಆಯ್ಕೆ ಮಾಡಬೇಕು ಎಂದು ಚರ್ಚಿಸಲಿದೆ.

ರಣಜಿ ಟ್ರೋಫಿ: ಪೂಜಾರ ದ್ವಿಶತಕ ಸಂಭ್ರಮ

1983ರ ಏಕದಿನ ವಿಶ್ವಕಪ್ ಹೀರೋ ಮದನ್ ಲಾಲ್  ಕ್ರಿಕೆಟ್‌ ಸಲಹಾ ಸಮಿತಿ ಮುಖ್ಯಸ್ಥರಾಗಿರಲಿದ್ದು, 2011ರ ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಪಂದ್ಯದ ಹೀರೋ ಗೌತಮ್ ಗಂಭೀರ್ ಸಹಾಯಕ ಸದಸ್ಯರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಎಂ.ಎಸ್‌.ಕೆ.ಪ್ರಸಾದ್‌ ಅವರ ಕಾರ್ಯಾವಧಿ ಮುಕ್ತಾಯಗೊಂಡಿದ್ದು, ಅವರ ಬದಲಿಗೆ ಹೊಸಬರನ್ನು ಆರಿಸಬೇಕಿದೆ. ಆಯ್ಕೆ ಸಮಿತಿ ಸದಸ್ಯ ಗಗನ್‌ ಖೋಡಾ ಜಾಗಕ್ಕೂ ಹೊಸ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕಿದೆ. ಕಿರಿಯರ ತಂಡಗಳ ಆಯ್ಕೆ ಸಮಿತಿಯಲ್ಲೂ ಬದಲಾವಣೆ ಆಗಬೇಕಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?
ಸಂಜು ಸ್ಯಾಮ್ಸನ್ ಔಟ್, ಶುಭ್‌ಮನ್ ಗಿಲ್ ಇನ್: ಅಸಲಿ ಸತ್ಯ ಬಿಚ್ಚಿಟ್ಟ ರವಿಚಂದ್ರನ್ ಅಶ್ವಿನ್!