ನ್ಯೂಜಿಲೆಂಡ್ 'ಎ' ವಿರುದ್ದದ ಸರಣಿಗೆ ಭಾರತ 'ಎ' ತಂಡ ಪ್ರಕಟ; ಶುಭ್‌ಮನ್‌ ಗಿಲ್‌ಗೆ ನಾಯಕ ಪಟ್ಟ

Published : Aug 21, 2022, 12:40 PM IST
ನ್ಯೂಜಿಲೆಂಡ್ 'ಎ' ವಿರುದ್ದದ ಸರಣಿಗೆ ಭಾರತ 'ಎ' ತಂಡ ಪ್ರಕಟ; ಶುಭ್‌ಮನ್‌ ಗಿಲ್‌ಗೆ ನಾಯಕ ಪಟ್ಟ

ಸಾರಾಂಶ

ನ್ಯೂಜಿಲೆಂಡ್ 'ಎ' ವಿರುದ್ದದ ಸರಣಿಗೆ ಭಾರತ 'ಎ' ತಂಡ ಪ್ರಕಟ 4 ದಿನಗಳ 3 ಪಂದ್ಯಗಳ ಸರಣಿಗೆ 16 ಆಟಗಾರರ ತಂಡ ಪ್ರಕಟ ಸೆಪ್ಟೆಂಬರ್ 01ರಿಂದ ಭಾರತ 'ಎ' ಹಾಗೂ ನ್ಯೂಜಿಲೆಂಡ್ 'ಎ' ತಂಡಗಳ ಸೆಣಸಾಟ

ಮುಂಬೈ(ಆ.21): ಮುಂಬರುವ ನ್ಯೂಜಿಲೆಂಡ್ 'ಎ' ತಂಡದ ವಿರುದ್ದ ನಡೆಯಲಿರುವ 4 ದಿನಗಳ 3 ಪಂದ್ಯಗಳ ಸರಣಿಗೆ, ಬಿಸಿಸಿಐ ಆಯ್ಕೆ ಸಮಿತಿಯು ಭಾರತ 'ಎ' ತಂಡವನ್ನು ಪ್ರಕಟಿಸಿದ್ದು, ಪ್ರತಿಭಾನ್ವಿತ ಬ್ಯಾಟರ್‌ ಶುಭ್‌ಮನ್‌ ಗಿಲ್ ಅವರನ್ನು ನಾಯಕರನ್ನಾಗಿ ನೇಮಕ ಮಾಡಲಾಗಿದೆ. ಭಾರತ ಟೆಸ್ಟ್‌ ತಂಡವನ್ನು ಪ್ರತಿನಿಧಿಸುವ ಕೆಲ ಆಟಗಾರರು ಹಾಗೂ ರಣಜಿ ಟ್ರೋಫಿ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ತೋರಿದ ಆಟಗಾರರಿಗೆ ಭಾರತ 'ಎ' ತಂಡದಲ್ಲಿ ಮಣೆ ಹಾಕಲಾಗಿದೆ.

ಟೀಂ ಇಂಡಿಯಾ ಕ್ರಿಕೆಟಿಗರಾದ ಹನುಮ ವಿಹಾರಿ, ವಾಷಿಂಗ್ಟನ್ ಸುಂದರ್, ಕೆ ಎಸ್ ಭರತ್, ಶಾರ್ದೂಲ್ ಠಾಕೂರ್ ಹಾಗೂ ಮೊಹಮ್ಮದ್ ಸಿರಾಜ್‌ಗೆ ನ್ಯೂಜಿಲೆಂಡ್ 'ಎ' ವಿರುದ್ದದ ಸರಣಿಗೆ ಮಣೆ ಹಾಕಲಾಗಿದೆ. ಇನ್ನು 2021-22ರ ಸೀಸನ್‌ ರಣಜಿ ಟ್ರೋಫಿಯಲ್ಲಿ ಮುಂಬೈ ತಂಡದ ಪರ ಗಮನಾರ್ಹ ಪ್ರದರ್ಶನ ತೋರಿದ್ದ ಯಶಸ್ವಿ ಜೈಸ್ವಾಲ್, ಶಮ್ಸ್‌ ಮುಲಾನಿ, ಮಧ್ಯ ಪ್ರದೇಶ ತಂಡದ ಪರ ಮಿಂಚಿದ್ದ ಯಶ್ ದುಬೆ, ರಜತ್ ಪಾಟೀದಾರ್ ಹಾಗೂ ಶುಭಂ ಶರ್ಮಾ ಕೂಡಾ ಭಾರತ 'ಎ' ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 

ಇನ್ನು ಇತ್ತೀಚೆಗಷ್ಟೇ ಜಿಂಬಾಬ್ವೆ ಎದುರಿನ ಸರಣಿಗೆ ಭಾರತ ತಂಡ ಕೂಡಿಕೊಂಡಿರುವ ಆಲ್ರೌಂಡರ್ ಶಾಬಾಜ್ ಅಹಮ್ಮದ್ ಕೂಡಾ ಭಾರತ 'ಎ' ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನು ದೇಶಿ ಕ್ರಿಕೆಟ್‌ನಲ್ಲಿ ಸಾಕಷ್ಟು ವರ್ಷಗಳಿಂದ ಸ್ಥಿರ ಪ್ರದರ್ಶನ ತೋರುತ್ತಾ ಬಂದಿರುವ ಜಲಜಾ ಸಕ್ಸೆನಾ ಕೂಡಾ ಭಾರತ 'ಎ' ತಂಡದಲ್ಲಿ ಪಡೆದುಕೊಂಡಿದ್ದಾರೆ. 

ದ್ವಿತೀಯ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ 5 ವಿಕೆಟ್ ಗೆಲುವು, ಸರಣಿ ಗೆದ್ದ ಭಾರತ!

ಭಾರತ 'ಎ' ಹಾಗೂ ನ್ಯೂಜಿಲೆಂಡ್ 'ಎ' ತಂಡಗಳ ನಡುವಿನ ಪಂದ್ಯಾವಳಿಗಳು ಸೆಪ್ಟೆಂಬರ್ 01ರಿಂದ ಆರಂಭವಾಗಲಿದೆ. ಇನ್ನು ಕೊನೆಯ ಪಂದ್ಯ ಸೆಪ್ಟೆಂವರ್ 15ರಿಂದ ಆರಂಭವಾಗಲಿದೆ. ಎಲ್ಲಾ ಮೂರು ಪಂದ್ಯಗಳು ತಲಾ 3 ದಿನಗಳ ಅಂತರದಲ್ಲಿ ನಡೆಯಲಿವೆ. ಈ ಎಲ್ಲಾ ಪಂದ್ಯಗಳು ಬೆಂಗಳೂರಿನಲ್ಲಿ ಜರುಗಲಿವೆ. ಇದಾದ ಬಳಿಕ ಸೆಪ್ಟೆಂಬರ್ 22 ರಿಂದ ಸೆಪ್ಟೆಂಬರ್ 27ರ ವರೆಗೆ ಮೂರು ಲಿಸ್ಟ್‌ 'ಎ' ಪಂದ್ಯಗಳು ನಡೆಯಲಿವೆ.

ನ್ಯೂಜಿಲೆಂಡ್ 'ಎ' ವಿರುದ್ದದ ಸರಣಿಗೆ ಭಾರತ 'ಎ' ತಂಡ ಹೀಗಿದೆ ನೋಡಿ: 

ಶುಭ್‌ಮನ್ ಗಿಲ್‌(ನಾಯಕ), ಯಶ್ ದುಬೆ, ಹನುಮ ವಿಹಾರಿ, ರಜತ್ ಪಾಟೀದಾರ್, ಸರ್ಫರಾಜ್ ಖಾನ್, ವಾಷಿಂಗ್ಟನ್ ಸುಂದರ್, ಕೆ ಎಸ್ ಭರತ್(ವಿಕೆಟ್ ಕೀಪರ್), ಶಮ್ಸ್ ಮುಲಾನಿ, ಜಲಜಾ ಸಕ್ಸೆನಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಯಶಸ್ವಿ ಜೈಸ್ವಾಲ್, ಶುಭಂ ಶರ್ಮಾ, ಅಕ್ಷಯ್ ವಾಡ್ಕರ್, ಶಹಬಾಜ್ ಅಹಮದ್, ಮಣಿಶಂಕರ್ ಮುರಾಸಿಂಗ್.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?
ಸಂಜು ಸ್ಯಾಮ್ಸನ್ ಔಟ್, ಶುಭ್‌ಮನ್ ಗಿಲ್ ಇನ್: ಅಸಲಿ ಸತ್ಯ ಬಿಚ್ಚಿಟ್ಟ ರವಿಚಂದ್ರನ್ ಅಶ್ವಿನ್!