ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಕೊರೋನಾ ಪಾಸಿಟಿವ್!

Published : Dec 28, 2021, 10:14 AM ISTUpdated : Dec 28, 2021, 10:28 AM IST
ಬಿಸಿಸಿಐ ಅಧ್ಯಕ್ಷ  ಸೌರವ್ ಗಂಗೂಲಿಗೆ ಕೊರೋನಾ ಪಾಸಿಟಿವ್!

ಸಾರಾಂಶ

*ಬಿಸಿಸಿಐ ಅಧ್ಯಕ್ಷ  ಸೌರವ್ ಗಂಗೂಲಿಗೆಗೆ ಕೋವಿಡ್-19 ಪಾಸಿಟಿವ್ *ಕೋಲ್ಕತ್ತಾದ ವುಡ್‌ಲ್ಯಾಂಡ್ಸ್ ಆಸ್ಪತ್ರೆಯಲ್ಲಿ ದಾಖಲು *ಗಂಗೂಲಿ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳ ಮಾಹಿತಿ

ನವದೆಹಲಿ(ಡಿ. 28): ಭಾರತ ಕ್ರಿಕೆಟ್‌ ತಂಡದ (Team India) ಮಾಜಿ ನಾಯಕ ಮತ್ತು ಬಿಸಿಸಿಐನ ಪ್ರಸ್ತುತ ಅಧ್ಯಕ್ಷ ಸೌರವ್ ಗಂಗೂಲಿಗೆ (Sourav Ganguly)  ಕೋವಿಡ್ -19 ದೃಡಪಟ್ಟಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ. ಕೋವಿಡ್ ವೈರಸ್‌ನ ಲಕ್ಷಣಗಳು ಕಾಣಿಸಿಕೊಂಡಿದ್ದ ಬೆನ್ನಲ್ಲೇ ಸೌರವ್ ಗಂಗೂಲಿ ಕೋವಿಡ್‌ 19 ಪರೀಕ್ಷೆಗೆ ಒಳಪಟ್ಟಿದ್ದರು. ಭಾರತ ತಂಡದ ಮಾಜಿ ನಾಯಕ ಸೌಮ್ಯ ರೋಗಲಕ್ಷಣಗಳೊಂದಿಗೆ ಕೋಲ್ಕತ್ತಾದ ವುಡ್‌ಲ್ಯಾಂಡ್ಸ್ ಆಸ್ಪತ್ರೆಯಲ್ಲಿ (Woodlands hospital) ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

"ಬಿಸಿಸಿಐ ಅಧ್ಯಕ್ಷ ಮತ್ತು ಮಾಜಿ ನಾಯಕ ಸೌರವ್ ಗಂಗೂಲಿ ಅವರು ಕೋವಿಡ್ -19 ಗೆ  ಪರೀಕ್ಷೆ ನಡೆಸಿದ ನಂತರ ಆಸ್ಪತ್ರೆಗೆ ದಾಖಲಾಗಿದ್ದಾರೆ" ಎಂದು ಬಿಸಿಸಿಐ ಮೂಲಗಳನ್ನು ಉಲ್ಲೇಖಿಸಿ ಪಿಟಿಐ (PTI) ವರದಿ ಮಾಡಿದೆ. ಈ ವರ್ಷ ಜನವರಿಯ ನಂತರ ಗಂಗೂಲಿ ಅವರು ಎದೆಯ ಅಸ್ವಸ್ಥತೆಯಿಂದ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದು ಇದು ಮೂರನೇ ಬಾರಿಯಾಗಿದೆ. ಗಂಗೂಲಿ ಅವರು ತಮ್ಮ ಕೋಲ್ಕತ್ತಾದ ಮನೆಯಲ್ಲಿ ವ್ಯಾಯಾಮ ಮಾಡುವಾಗ ಹೃದಯಾಘಾತಕ್ಕೆ (Heart Attack) ಒಳಗಾಗಿದ್ದರು ಮತ್ತು ಆಂಜಿಯೋಪ್ಲ್ಯಾಸ್ಟಿಗೆ ಒಳಗಾಗಿದ್ದರು.

 

 

20 ದಿನಗಳ ನಂತರ, ಗಂಗೂಲಿಗೆ ಇದೇ ರೀತಿಯ ಎದೆನೋವು ಕಾಣಿಸಿಕೊಂಡಿತ್ತು, ಇದು ಜನವರಿ 28 ರಂದು ಎರಡನೇ ಸುತ್ತಿನ ಆಂಜಿಯೋಪ್ಲ್ಯಾಸ್ಟಿಗೆ ಕಾರಣವಾಗಿತ್ತು. ಈ ವೇಳೆ ಎರಡು ಸ್ಟೆಂಟ್‌ಗಳನ್ನು ಎರಡು ಅಪಧಮನಿಗಳಲ್ಲಿ ಇರಿಸಲಾಗಿತ್ತು. ಗಂಗೂಲಿ ಅವರು ಮಾರ್ಚ್‌ನಲ್ಲಿ ಕೆಲಸವನ್ನು ಪುನರಾರಂಭಿಸಿದ್ದರು ಹಾಗೂ ಕೋವಿಡ್ -19 ವಿರುದ್ಧ ಸೌರವ್ ಸಂಪೂರ್ಣವಾಗಿ ಲಸಿಕೆಯನ್ನು ಪಡೆದಿದ್ದಾರೆ.‌

ಸೋಮವಾರ ದಾಖಲೆಯ 156 ಹೊಸ ಕೇಸ್‌!

ಭಾರತದಲ್ಲೂ ದಿನೇ ದಿನೇ ಒಮಿಕ್ರೋನ್‌ ಸೋಂಕಿತರ (Omicron Cases)ಸಂಖ್ಯೆಯಲ್ಲಿ ಭಾರೀ ಏರಿಕೆ ಕಾಣುತ್ತಿದ್ದು, ಸೋಮವಾರ ಒಂದೇ ದಿನ 156 ಜನರಲ್ಲಿ ಹೊಸ ರೂಪಾಂತರಿ ವೈರಸ್‌ (Covid 19 Variant) ಪತ್ತೆಯಾಗಿದೆ. ಇದು, ಇದುವರೆಗೆ ಒಂದೇ ದಿನದಲ್ಲಿ ದಾಖಲಾದ ಗರಿಷ್ಠ ಸೋಂಕಿನ ಪ್ರಮಾಣವಾಗಿದೆ.ಇದರೊಂದಿಗೆ ದೇಶದಲ್ಲಿ ಒಟ್ಟು ಒಮಿಕ್ರೋನ್‌ ಸೋಂಕಿತರ ಸಂಖ್ಯೆ 578ಕ್ಕೆ ತಲುಪಿದೆ. ಡಿ.24ರಂದು 122 ಕೇಸ್‌ ಪತ್ತೆಯಾಗಿದ್ದು ಈವರೆಗಿನ ದಾಖಲೆಯಾಗಿತ್ತು.

ಹೊಸ ಕೊರೋನಾ ಕೇಸು:

ಈ ನಡುವೆ ಸೋಮವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 6,531 ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು, 315 ಸೋಂಕಿತರು ಸಾವಿಗೀಡಾಗಿದ್ದಾರೆ. ತನ್ಮೂಲಕ ಒಟ್ಟು ಪ್ರಕರಣ 3.47 ಕೋಟಿಗೆ ಹಾಗೂ ಒಟ್ಟು ಸಾವು 4.79 ಲಕ್ಷಕ್ಕೆ ಏರಿಕೆಯಾಗಿದೆ. ಸಕ್ರಿಯ ಕೇಸು 75,841ಕ್ಕೆ ಇಳಿಕೆ ಕಂಡಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?