ಸೌರವ್ ಗಂಗೂಲಿಗೆ ಮತ್ತೆ ಕಾಣಿಸಿಕೊಂಡ ಎದೆನೋವು; ಆಸ್ಪತ್ರೆ ದಾಖಲು!

Published : Jan 27, 2021, 03:06 PM ISTUpdated : Jan 27, 2021, 03:46 PM IST
ಸೌರವ್ ಗಂಗೂಲಿಗೆ ಮತ್ತೆ ಕಾಣಿಸಿಕೊಂಡ ಎದೆನೋವು; ಆಸ್ಪತ್ರೆ ದಾಖಲು!

ಸಾರಾಂಶ

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆ ದಾಖಲಾಗಿದ್ದಾರೆ. ಇತ್ತಚೀಗಷ್ಟೇ ಲಘು ಹೃದಯಾಘಾತದಿಂದ ಚೇತರಿಸಿಕೊಂಡಿದ್ದ ಗಂಗೂಲಿ ಇದೀಗ ಮತ್ತೆ ಆಸ್ಪತ್ರೆ ದಾಖಲಾಗಿದ್ದಾರೆ.

ಕೋಲ್ಕತಾ(ಜ.27):  ಟೀಂ ಇಂಡಿಯಾ ಮಾಜಿ ನಾಯಕ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆ ದಾಖಲಾಗಿದ್ದಾರೆ. ಇಂದು(ಜ.27) ಬೆಳಗ್ಗೆ ಎರಡನೇ ಬಾರಿಗೆ ಎದೆ ನೋವು ಕಾಣಸಿಕೊಂಡಿದೆ. ತಕ್ಷಣವೇ ಗಂಗೂಲಿಯನ್ನು ಕೋಲ್ಕತಾದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

"

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು! 

ಎದೆನೋವು ಕಾಣಿಸಿಕೊಂಡ ಬೆನ್ನಲ್ಲೇ ಆಸ್ಪತ್ರೆ ವಾಹನದಲ್ಲಿ ಗಂಗೂಲಿಯನ್ನು ಆಸ್ಪತ್ರೆಗ ಕರೆದುಕೊಂಡು ಬರಲಾಗಿದೆ. ಗಂಗೂಲಿ ಜೊತೆಗೆ ಪತ್ನಿ ಡೋನಾ ಗಂಗೂಲಿ ಹಾಗೂ ಪುತ್ರಿ ಸನಾ ಗಂಗೂಲಿ ಆಸ್ಪತ್ರೆಗೆ ಆಗಮಿಸಿದ್ದಾರೆ. ತುರ್ತು ನಿಘಾ ಘಟಕದಲ್ಲಿ (ICU) ಗಂಗೂಲಿಗೆ ಚಿಕಿತ್ಸೆ ನೀಡಲಾಗುತ್ತಿದೆ.  ಇತ್ತೀಚೆಗೆ ಸೌರವ್ ಗಂಗೂಲಿಗೆ ಲಘು ಹೃದಯಾಘಾತವಾಗಿತ್ತು. ಹೀಗಾಗಿ ಗಂಗೂಲಿಗೆ ಆ್ಯಂಜಿಯೋಪ್ಲಾಸ್ಟಿ ಸರ್ಜರಿ ಮಾಡಲಾಗಿತ್ತು. ತುರ್ತು ನಿಘಾತ ಘಟಕದಲ್ಲಿ ಚಿಕಿತ್ಸೆ ಪಡೆದಿದ್ದ ಗಂಗೂಲಿ, ಚೇತರಿಸಿಕೊಂಡಿದ್ದರು. ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಗಂಗೂಲಿ ವಿಶ್ರಾಂತಿಗೆ ಜಾರಿದ್ದರು. 

 

ಜನವರಿ 2 ರಂದು ಜಿಮ್ ವರ್ಕೌಟ್ ಮಾಡುವ ವೇಳೆ ಗಂಗೂಲಿಗೆ ಲಘು ಹೃದಯಾಘಾತವಾಗಿತ್ತು.  ಇದೀಗ ಎರಡನೇ ಬಾರಿಗೆ ಎದೆ ನೋವು ಕಾಣಿಸಿಕೊಂಡಿರುವುದು ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?