
ಬೆಂಗಳೂರು(ಅ.31): ಬಿಸಿಸಿಐ ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸಿದ ಸೌರವ್ ಗಂಗೂಲಿ, ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥ ರಾಹುಲ್ ದ್ರಾವಿಡ್ ಜೊತೆ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಬುದವಾರ(ಅ.30) ಬೆಂಗಳೂರಿಗೆ ಆಗಮಿಸಿದ ಸೌರವ್ ಗಂಗೂಲಿ ನೇರವಾಗಿ NCA ತೆರಳಿ ಸತತ 4 ಗಂಟೆ ಕಾಲ ಚರ್ಚೆ ನಡೆಸಿದರು. ದ್ರಾವಿಡ್ ಜೊತೆಗಿನ ಚರ್ಚೆ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಡಿರುವ ಅಭಿವೃದ್ದಿ ಕಾರ್ಯಗಳನ್ನು ಪರೀಶಿಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಇದನ್ನೂ ಓದಿ: ಬೆಂಗ್ಳೂರಲ್ಲಿ ಗಂಗೂಲಿ-ದ್ರಾವಿಡ್ ಸುದೀರ್ಘ ಚರ್ಚೆ; NCAಗೆ ಹೊಸ ರೂಪ!
ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬುಧವಾರ ಭೇಟಿ ನೀಡಿದ್ದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಇಲ್ಲಿನ ಸಬ್-ಏರ್ ವ್ಯವಸ್ಥೆ ಸೇರಿದಂತೆ ಹಲವು ಆಧುನಿಕ ತಂತ್ರಜ್ಞಾನಗಳ ವೀಕ್ಷಣೆ ಮಾಡಿದರು. ಸಬ್-ಏರ್ ವ್ಯವಸ್ಥೆ ಬಗ್ಗೆ ಗಂಗೂಲಿ ಮೆಚ್ಚುಗೆಯ ಮಾತುಗಳನ್ನಾಡಿದರು ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ವಕ್ತಾಯ ವಿನಯ್ ಮೃತ್ಯುಂಜಯ ತಿಳಿಸಿದರು.
ಇದನ್ನೂ ಓದಿ: ದಾದಾ ಪ್ರಸ್ತಾವನೆಗೆ ಬಾಂಗ್ಲಾ ಸಮ್ಮತಿ; ಭಾರತದಲ್ಲಿ ಮೊಟ್ಟ ಮೊದಲ ಡೇ & ನೈಟ್ ಟೆಸ್ಟ್!
ರಾಜ್ಯ ಕ್ರಿಕೆಟ್ ಸಂಸ್ಥೆಯ ವಿನೂತನ ಆಲೋಚನೆಗಳನ್ನು ಗಂಗೂಲಿ ಶ್ಲಾಘಿಸಿದ್ದಾರೆ. ಇತರ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಅನುಸರಿಸಿದ ಮಾದರಿ ಅಳವಡಿಸುವ ಕುರಿತು ಚಿಂತಿಸಲಾಗುವುದು ಎಂದು ಗಂಗೂಲಿ ಹೇಳಿದರು.
NCA ಭೇಟಿ ಬಳಿಕ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ನೂತನ ಪದಾಧಿಕಾರಿಗಳು ಸೌರವ್ ಗಂಗೂಲಿಯನ್ನು ಸನ್ಮಾನಿಸಿದರು. ಕೆಎಸ್ಸಿಎ ಮಾಜಿ ಕಾರ್ಯದರ್ಶಿ, ಹಾಲಿ ಐಪಿಎಲ್ ಅಧ್ಯಕ್ಷ ಬ್ರಿಜೇಶ್ ಪಟೇಲ್ ಉಪಸ್ಥಿತರಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.