
ಮುಂಬೈ(ಮಾ.14): ದೇಶಾದ್ಯಂತ ಕರೋನಾ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯು ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ಮಾದರಿಯ ದೇಸಿ ಟೂರ್ನಿಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದೆ.
ಕೊರೋನಾ ವಿರುದ್ಧ ಹೋರಾಡಲು ಕರೆ ಕೊಟ್ಟ ವಿರಾಟ್ ಕೊಹ್ಲಿ..!
ಕರೋನಾ ವೈರಸ್ ಪ್ರಕರಣಗಳು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಇರಾನಿ ಕಪ್, ಸೀನಿಯರ್ ಇನ್ ಡೇ ನಾಕ್ಔಟ್, ಮಹಿಳಾ ಅಂಡರ್ 19 ಟಿ20 ಲೀಗ್, ಸೂಪರ್ ಲೀಗ್ ಮತ್ತು ನಾಕೌಟ್, ಮಹಿಳಾ ಅಂಡರ್ 19 ಟಿ20 ಚಾಲೆಂಜರ್ಸ್ ಟ್ರೋಫಿ, ಮಹಿಳಾ ಅಂಡರ್ 23 ನಾಕೌಟ್ ಹಾಗೂ ಮಹಿಳಾ ಅಂಡರ್ 23 ಒನ್ ಡೇ ಚಾಲೆಂಜರ್ಸ್ ಟೂರ್ನಿಗಳನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ.
ಮಾರಣಾಂತಿಕ ಕೊರೋನಾ ವೈರಸ್ ಕ್ರೀಡಾ ಕ್ಷೇತ್ರದ ಮೇಲೆ ಕರಿ ನೆರಳು ಬೀಳುವಂತೆ ಮಾಡಿದೆ. ಇಂಡೋ-ಆಫ್ರಿಕಾ ಏಕದಿನ ಸರಣಿ, ಆಸೀಸ್-ಕಿವೀಸ್ ಸರಣಿಗಳು ಮುಂದೂಡಲ್ಪಟ್ಟಿವೆ. ಇನ್ನು 2020ರ ಐಪಿಎಲ್ ಟೂರ್ನಿಯು ಏಪ್ರಿಲ್ 15ಕ್ಕೆ ಮುಂದೂಡಲ್ಪಟ್ಟಿದೆ. ಒಂದು ವೇಳೆ ಐಪಿಎಲ್ ಟೂರ್ನಿ ನಡೆದರು, ಖಾಲಿ ಸ್ಟೇಡಿಯಂನಲ್ಲಿ ನಡೆಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಬಂಗಾಳ-ಸೌರಾಷ್ಟ್ರ ನಡುವಿನ ರಣಜಿ ಟ್ರೋಫಿ ಫೈನಲ್ ಪಂದ್ಯದ ಅಂತಿಮ ದಿನ ಪಂದ್ಯ ವೀಕ್ಷಿಸಲು ಪ್ರೇಕ್ಷಕರಿಗೆ ಅವಕಾಶ ನೀಡಿರಲಿಲ್ಲ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.