ಜೂನ್‌, ಜುಲೈನಲ್ಲಿ ದೇಸಿ ಕ್ರಿಕೆಟಿಗರಿಗೆ ಬಿಸಿಸಿಐ ನೆರವು: ಗಂಗೂಲಿ

Suvarna News   | Asianet News
Published : May 11, 2021, 11:41 AM IST
ಜೂನ್‌, ಜುಲೈನಲ್ಲಿ ದೇಸಿ ಕ್ರಿಕೆಟಿಗರಿಗೆ ಬಿಸಿಸಿಐ ನೆರವು: ಗಂಗೂಲಿ

ಸಾರಾಂಶ

* ಕೋವಿಡ್‌ ಎರಡನೇ ಅಲೆಯಿಂದಾಗಿ ಭಾರತದಲ್ಲಿ ನಡೆಯಬೇಕಿದ್ದ ಎಲ್ಲಾ ಕ್ರಿಕೆಟ್‌ ಚಟುವಟಿಕೆ ತಾತ್ಕಾಲಿಕವಾಗಿ ರದ್ದಾಗಿವೆ * ದೇಶಿ ಆಟಗಾರರಿಗೆ ಹಾಗೂ ಅಂಪೈರ್‌ಗಳಿಗೆ ನೆರವು ನೀಡಲು ಸಿದ್ದತೆ ನಡೆಸುತ್ತಿದೆ ಬಿಸಿಸಿಐ * ಜೂನ್‌ ಜುಲೈ ವೇಳೆಗೆ ಬಿಸಿಸಿಐ ಆರ್ಥಿಕ ನೆರವು ನೀಡಲು ಚಿಂತನೆ.

ನವದೆಹಲಿ(ಮೇ.11): ಕೊರೋನಾ 2ನೇ ಅಲೆಯಿಂದಾಗಿ ಭಾರತದಲ್ಲಿ ಎಲ್ಲಾ ಕ್ರೀಡಾ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಇದಕ್ಕೆ ಐಪಿಎಲ್‌ ಕೂಡ ಸೇರ್ಪಡೆಗೊಂಡಿದೆ. 

ಈಗಾಗಲೇ ಎಲ್ಲಾ ವಯೋ ವರ್ಗದ ಕ್ರಿಕೆಟ್‌ ಟೂರ್ನಿಗಳು ಮುಂದೂಡಿಕೆಗೊಂಡಿವೆ. ಇದರಿಂದ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿರುವ ಕ್ರಿಕೆಟಿಗರು, ಅಂಪೈರ್‌ಗಳು, ಸ್ಕೋರರ್‌ಗಳಿಗೆ ಜೂನ್‌-ಜುಲೈನಲ್ಲಿ ಪರಿಹಾರ ನೀಡುವುದಾಗಿ ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ತಿಳಿಸಿದ್ದಾರೆ. 

‘ಅಕ್ಟೋಬರ್‌ ವೇಳೆಗೆ ದೇಶದಲ್ಲಿ ಪರಿಸ್ಥಿತಿ ಸುಧಾರಿಸುವ ವಿಶ್ವಾಸವಿದೆ. ಕೊರೋನಾದಿಂದ ಕ್ರೀಡಾಪಟುಗಳಿಗೆ ಬಹಳ ತೊಂದರೆಯಾಗಿದೆ. ಜೂನ್‌-ಜುಲೈನಲ್ಲಿ ಕಿರಿಯ ಕ್ರಿಕೆಟಿಗರು, ಅಂಪೈರ್‌ ಹಾಗೂ ಸ್ಕೋರರ್‌ಗಳಿಗೆ ವೇತನ ಸಿಗಲಿದೆ’ ಎಂದು ಗಂಗೂಲಿ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಜೂನಿಯರ್ ಕ್ರಿಕೆಟ್ ಟೂರ್ನಿಯನ್ನು ಆಯೋಜಿಸುವುದು ತುಂಬಾ ಅಪಾಯಕಾರಿಯಾದದ್ದು ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ರೀತಿಯ ಕೋವಿಡ್‌ ಭೀತಿ ಇರುವ ವಾತಾವರಣದಲ್ಲಿ ಯುವ ಕ್ರಿಕೆಟಿಗರನ್ನು ಕಣಕ್ಕಿಳಿಸುವುದಾದರೂ ಹೇಗೆ ಎಂದು ಪ್ರಶ್ನಿಸಿದ್ದಾರೆ.

ಐಪಿಎಲ್ ಭಾಗ 2 ಭಾರತದಲ್ಲಿ ಡೌಟ್‌: ಸೌರವ್‌ ಗಂಗೂಲಿ

ಇದೇವೇಳೆ ಭಾರತದಲ್ಲಿ ಕೋವಿಡ್ ಪರಿಸ್ಥಿತಿ ಹತೋಟಿಗೆ ಬಂದರೆ ವರ್ಷಾಂತ್ಯದಲ್ಲಿ ಭಾರತದಲ್ಲೇ ಐಸಿಸಿ ಟಿ20 ವಿಶ್ವಕಪ್‌ ಆಯೋಜಿಸುವ ಆಲೋಚನೆ ಇದೆ ಎಂದು ಬಿಸಿಸಿಐ ಅಧ್ಯಕ್ಷ ಗಂಗೂಲಿ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Good News for RCB Fans: ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ? KSCA-BCCI ಮಾತುಕತೆ
Mock Auction: 30.5 ಕೋಟಿ ರೂಪಾಯಿ ದಾಖಲೆ ಮೊತ್ತಕ್ಕೆ ಕೆಕೆಆರ್‌ಗೆ ಕ್ಯಾಮರೂನ್‌ ಗ್ರೀನ್‌!