
ಮುಂಬೈ(ಜೂ.13): ಐಪಿಎಲ್ ಟೂರ್ನಿ ಆಯೋಜಿಸಲು ಬಿಸಿಸಿಐ ಇನ್ನಿಲ್ಲದ ಕಸರತ್ತು ನಡೆಸಿದೆ. ಪ್ರತಿ ದಿನ ಸಭೆಗಳನ್ನು ನಡೆಸಿ ಆಯೋಜನೆ ಹಾಗೂ ಸವಾಲುಗಳ ಕುರಿತು ಚರ್ಚೆ ನಡೆಸುತ್ತಿದೆ. ಇದರ ನಡುವೆ ಬಿಸಿಸಿಐ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳು ಮಾಧ್ಯಮಕ್ಕೆ ಮಾಹಿತಿ ಸೋರಿಕೆ ಮಾಡುತ್ತಿದ್ದಾರೆ. ಕೆಲ ಉದ್ಯೋಗಿಗಳು ಮಾಧ್ಯಮದ ಜೊತೆ ಸಂದರ್ಶನ ನೀಡಿರುವುದು ಬಿಸಿಸಿಐ ಗಮನಕ್ಕೆ ಬಂದಿದೆ. ಉದ್ಯೋಗಿಗಳ ವಿರುದ್ಧ ಗರಂ ಆಗಿರುವ ಬಿಸಿಸಿಐ ಅಮಾನತು ಮಾಡುವುದಾಗಿ ಎಚ್ಚರಿಸಿದೆ.
ಈ ವರ್ಷ ಖಾಲಿ ಮೈದಾನದಲ್ಲಾದರೂ ಐಪಿಎಲ್ ನಡೆಸಿಯೇ ಸಿದ್ಧ: ಗಂಗೂಲಿ...
ಮುಂಬೈನಲ್ಲಿರುವ ಬಿಸಿಸಿಐ ಮುಖ್ಯ ಕಚೇರಿ, ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಸೇರಿದಂತೆ ಬಿಸಿಸಿಐ ಕಚೇರಿಗಳಲ್ಲಿ 100ಕ್ಕೂ ಹೆಚ್ಚು ಉದ್ಯೋಗಿಗಳು ಕೆಲಸ ಮಾಡುತ್ತಿದ್ದಾರೆ. ಇವರಲ್ಲಿ ಹಲವರು ಮಾಧ್ಯಮಕ್ಕೆ ಹೇಳಿಕೆ ನೀಡುತ್ತಿದ್ದಾರೆ. ಐಪಿಎಲ್ ಆಯೋಜನೆ, ಬಿಸಿಸಿಐ ನಿರ್ಧಾರ, ಬಿಸಿಸಿಐ ಸಭೆ ಕುರಿತು ಮಾಹಿತಿ ನೀಡುತ್ತಿದ್ದಾರೆ. ಹಲವರು ಸುದೀರ್ಘ ಸಂದರ್ಶನ ನೀಡುತ್ತಿದ್ದಾರೆ. ಇದು ಉದ್ಯೋಗಿ ಒಪ್ಪಂದಕ್ಕೆ ವಿರುದ್ಧವಾಗಿದೆ ಎಂದು ಬಿಸಿಸಿಐ ಹೇಳಿದೆ.
ಟಿ20 ವಿಶ್ವಕಪ್ ನಡೆಸುವ ಬಗ್ಗೆ ಆಸೀಸ್ಗಿನ್ನೂ ವಿಶ್ವಾಸ
ಹೀಗೆ ಮಾಧ್ಯಮಕ್ಕೆ ಹೇಳಿಕೆ, ಸಂದರ್ಶನ ಹಾಗೂ ಮಾಹಿತಿ ಸೋರಿಕೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಬಿಸಿಸಿಐ ಕಾರ್ಯದರ್ಶಿ ಜೈ ಶಾ ಎಚ್ಚರಿಸಿದ್ದಾರೆ. ಮಾಧ್ಯದ ಜೊತೆ ಮಾತನಾಡಲು ಬಿಸಿಸಿಐ ಅನುಮತಿ ಪಡೆಯಬೇಕು. ಯಾವ ನಿಯಮ ಉಲ್ಲಂಘನೆಯಾದರೂ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.