
ಬೆಂಗಳೂರು(ಮಾ.12): ಕ್ರಿಕೆಟ್ ಅಭಿಮಾನಗಳು ಕಾತುರದಿಂದ ಕಾಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಗಳ ಮೇಲೂ ನೀರಿನ ಅಭಾವದ ಕರಿಛಾಯೆ ಬಿದ್ದಿದೆ. ಮಾ.25ರಿಂದ ಏ.2ರ ವರೆಗೆ ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ತಂಡದ 3 ಪಂದ್ಯಗಳು ನಿಗದಿಯಾಗಿದ್ದು, ಈ ಪಂದ್ಯಗಳನ್ನು ಸ್ಥಳಾಂತರ ಮಾಡಬೇಕು ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಈ ಕುರಿತು ಸಮಿತಿ ಸದಸ್ಯರೊಂದಿಗೆ ಸಭೆ ನಡೆಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಕೆಎಸ್ ಸಿಎ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಒಂದು ಪಂದ್ಯ ನಡೆಸಲು ಸುಮಾರು 60 ಸಾವಿರದಿಂದ 70 ಸಾವಿರ ಲೀಟರ್ ನೀರು ಬೇಕಾಗುತ್ತದೆ. ಪ್ರತಿ ನಿತ್ಯ ನಿರ್ವಹಣೆಗೂ ಸಾವಿರಾರು ಲೀಟರ್ ನೀರು ಬೇಕೇ ಬೇಕು. ಮತ್ತೊಂದೆಡೆ ನಗರದಲ್ಲಿ ನೀರಿನ ಅಭಾವವಾಗಿ ಸರಬರಾಜು ವ್ಯತ್ಯಯವಾಗುತ್ತಿದೆ. ಜನರು ನೀರಿಲ್ಲದೇ ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ಹೆಚ್ಚು ನೀರು ಬಳಸುವ ಐಪಿಎಲ್ ಪಂದ್ಯಗಳನ್ನು ನಡೆಸುವುದು ಸೂಕ್ತವಲ್ಲ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಿಂದ ಕೇಳಿ ಬಂದಿದೆ. ಆದರೆ, ಕ್ರೀಡಾಂಗಣವೂ ಜಲಮಂಡಳಿ ನೀರಿನ ಮೇಲೆ ಹೆಚ್ಚು ಅವಲಂಬಿತವಾಗಿಲ್ಲ. ಕೊಳಚೆ ನೀರು ಶುದ್ದೀಕರಣ ಪ್ಲಾಂಟ್ ಅನ್ನು ಅಳವಡಿಸಿಕೊಳ್ಳಲಾಗಿದೆ. ಕ್ರೀಡಾಂಗಣದ ಹುಲ್ಲು ಹಾಸು ಬೆಳೆಸುವುದು ಸೇರಿದಂತೆ ಒಟ್ಟಾರೆ ಕ್ರೀಡಾಂಗಣದ ನಿರ್ವಹಣೆಗೆ ಶುದ್ದೀಕರಿಸಿದ ನೀರು ಬಳಕೆ ಮಾಡಲಾಗುತ್ತದೆ. ಹೀಗಾಗಿ, ಪಂದ್ಯಗಳ ಆಯೋಜನೆಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಎನ್ನುವ ವಾದವು ಕೆಎಸ್ಸಿಎ ವಲಯದಿಂದ ಕೇಳಿ ಬಂದಿದೆ.
ನಿಯತ್ತು ಎಲ್ಲಕ್ಕಿಂತ ಮಿಗಿಲು: RCB ಪರ ಕೊಹ್ಲಿ ಪಾದಾರ್ಪಣೆಗೆ 16ರ ಹರೆಯ..! KGF ಟಚ್ ಕೊಟ್ಟ ಬೆಂಗಳೂರು ಫ್ರಾಂಚೈಸಿ
ಸಭೆ ನಡೆಸಿ ತೀರ್ಮಾನ
ನೀರಿನ ಸಮಸ್ಯೆಯ ಕುರಿತು ಅರಿವಿದೆ. ಆದರೆ, ಪಂದ್ಯಗಳನ್ನು ನಿಗದಿಯಂತೆ ನಡೆಸಬೇಕೋ ಅಥವಾ ಸ್ಥಳಾಂತರಿ ಸಬೇಕೋ ಎಂಬ ಬಗ್ಗೆ ಈವರೆಗೆ ತೀರ್ಮಾನ ತೆಗೆದುಕೊಂಡಿಲ್ಲ. ಸಮಿತಿಯ ಸದಸ್ಯರೊಂದಿಗೆ ಶೀಘ್ರದಲ್ಲೇ ಸಭೆ ನಡೆಸಿ ಸೂಕ್ತ ತೀರ್ಮಾನವನ್ನು ತೆಗೆದುಕೊಳ್ಳುತ್ತೇವೆ ಎಂದು ಕೆಎಸ್ಸಿಎ ಸಿಇಒ ಶುಭೇಂದು ಘೋಷ್ 'ಕನ್ನಡಪ್ರಭ'ಕ್ಕೆ ತಿಳಿಸಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.