
ನವದೆಹಲಿ(ಡಿ.15): ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ಸಿಎ) ಟ್ರೈನರ್ಗಳಿಂದ ಮತ್ತೆ ಎಡವಟ್ಟು ಆಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಸುಮಾರು 3 ತಿಂಗಳುಗಳ ಕಾಲ ಬೆಂಗಳೂರಲ್ಲಿರುವ ಎನ್ಸಿಎನಲ್ಲಿ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಂಡಿದ್ದ ಭುವನೇಶ್ವರ್ ಕುಮಾರ್, ವಿಂಡೀಸ್ ವಿರುದ್ಧ ಟಿ20 ಸರಣಿಗೆ ತಂಡಕ್ಕೆ ವಾಪಸಾಗಿದ್ದರು. ಆದರೆ ಒಂದೇ ವಾರದಲ್ಲಿ ಮತ್ತೆ ಗಾಯಗೊಂಡಿದ್ದಾರೆ.
ಇದನ್ನೂ ಓದಿ: ಬೆಂಗ್ಳೂರಲ್ಲಿ ಗಂಗೂಲಿ-ದ್ರಾವಿಡ್ ಸುದೀರ್ಘ ಚರ್ಚೆ; NCAಗೆ ಹೊಸ ರೂಪ!
ವೇಗಿ ಭವನೇಶ್ವರ್ ಕುಮಾರ್ ವಿಂಡೀಸ್ ವಿರುದ್ಧದ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ. ಭುವನೇಶ್ವರ್ ಗಾಯದ ಸಮಸ್ಯೆಯನ್ನು ಸರಿಯಾಗಿ ಪತ್ತೆ ಮಾಡುವಲ್ಲಿ ಎನ್ಸಿಎ ಟ್ರೈನರ್ಗಳು ವಿಫಲರಾಗಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ. ಇದೇ ಕಾರಣಕ್ಕೆ ಜಸ್ಪ್ರೀತ್ ಬೂಮ್ರಾ ಹಾಗೂ ಹಾರ್ದಿಕ್ ಪಾಂಡ್ಯ, ಪುನಶ್ಚೇತನ ಶಿಬಿರಕ್ಕೆ ಎನ್ಸಿಎಗೆ ಆಗಮಿಸಲು ನಿರಾಕರಿಸಿದ್ದರು ಎನ್ನುವ ವಿಷಯ ಬಹಿರಂಗಗೊಂಡಿದೆ.
ಇದನ್ನೂ ಓದಿ: ರಣಜಿ ಟ್ರೋಫಿ: 2ನೇ ಪಂದ್ಯಕ್ಕೂ ಮುನ್ನ ಕರ್ನಾಟಕ ತಂಡಕ್ಕೆ ಭಾರೀ ಹಿನ್ನಡೆ!.
ಬಿಸಿಸಿಐ ಗುತ್ತಿಗೆ ಹೊಂದಿರುವ ಆಟಗಾರರು ಗಾಯಗೊಂಡಾಗ ಎನ್ಸಿಎಗೆ ಆಗಮಿಸಬೇಕು. ಆದರೆ ಬೂಮ್ರಾ ಹಾಗೂ ಹಾರ್ದಿಕ್, ಖಾಸಗಿ ಫಿಸಿಯೋ ಹಾಗೂ ಟ್ರೈನರ್ಗಳ ಸಹಾಯದಿಂದ ಫಿಟ್ನೆಸ್ ಕಂಡುಕೊಳ್ಳಲು ಇಚ್ಛಿಸಿದರು. ಈ ಇಬ್ಬರು ಆಟಗಾರರ ಬೇಡಿಕೆಯನ್ನು ಬಿಸಿಸಿಐ ಒಪ್ಪಿಕೊಂಡಿತು ಎನ್ನಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.