ಬಾಕ್ಸಿಂಗ್ ಡೇ ಟೆಸ್ಟ್‌ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಪಾಳಯದಲ್ಲಿ ಆತಂಕ!

Published : Dec 23, 2024, 01:52 PM IST
ಬಾಕ್ಸಿಂಗ್ ಡೇ ಟೆಸ್ಟ್‌ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಪಾಳಯದಲ್ಲಿ ಆತಂಕ!

ಸಾರಾಂಶ

ಮೆಲ್ಬರ್ನ್ ಟೆಸ್ಟ್‌ಗೆ ಸಜ್ಜಾಗುತ್ತಿರುವ ಭಾರತ ತಂಡಕ್ಕೆ ಗಾಯದ ಆತಂಕ ಎದುರಾಗಿದೆ. ರಾಹುಲ್, ರೋಹಿತ್ ಮತ್ತು ಆಕಾಶ್‌ದೀಪ್‌ಗೆ ನೆಟ್‌ ಅಭ್ಯಾಸದ ವೇಳೆ ಚೆಂಡು ಬಡಿದಿದೆ. ಚಿಕಿತ್ಸೆ ಪಡೆದಿರುವ ಆಟಗಾರರು ಗಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಅಭ್ಯಾಸ ಪಿಚ್‌ನ ಕಳಪೆ ಗುಣಮಟ್ಟದ ಬಗ್ಗೆಯೂ ಭಾರತ ಅತೃಪ್ತಿ ವ್ಯಕ್ತಪಡಿಸಿದೆ.

ಮೆಲ್ಬರ್ನ್‌: ಡಿ.26ರಿಂದ ಆರಂಭಗೊಳ್ಳಲಿರುವ ಆಸ್ಟ್ರೇಲಿಯಾ ವಿರುದ್ಧ 4ನೇ ಟೆಸ್ಟ್‌ಗೆ ಸಜ್ಜಾಗುತ್ತಿರುವ ಭಾರತ ತಂಡ ಗಾಯದ ಸುಳಿಯಲ್ಲಿ ಸಿಲುಕಿದೆ. ನೆಟ್‌ ಪ್ರಾಕ್ಟೀಸ್‌ ವೇಳೆ ಕೆಲ ಪ್ರಮುಖ ಆಟಗಾರರಿಗೆ ಚೆಂಡು ಬಡಿದಿದ್ದು, ಸಂಭಾವ್ಯ ಗಾಯದಿಂದ ಪಾರಾಗಿದ್ದಾರೆ. ಆದರೂ ಮಹತ್ವದ ಟೆಸ್ಟ್‌ಗೂ ಮುನ್ನ ಆಟಗಾರರ ಫಿಟ್ನೆಸ್‌ ಬಗ್ಗೆ ತಂಡದಲ್ಲಿ ಆತಂಕ ಎದುರಾಗಿದೆ.

ಸರಣಿಯಲ್ಲಿ ಭಾರತದ ಗರಿಷ್ಠ ರನ್‌ ಸರದಾರ ಎನಿಸಿಕೊಂಡಿರುವ ಕೆ.ಎಲ್‌.ರಾಹುಲ್‌ ಶನಿವಾರ ಅಭ್ಯಾಸ ನಿರತರಾಗಿದ್ದಾಗ ಕೈಗೆ ಚೆಂಡು ಬಡಿದಿತ್ತು. ದೊಡ್ಡ ಅಪಾಯವಿಲ್ಲದಿದ್ದರೂ ಅವರ ಮೇಲೆ ವೈದ್ಯಕೀಯ ಸಿಬ್ಬಂದಿ ನಿಗಾ ಇಟ್ಟಿದೆ. ಈ ನಡುವೆ ಭಾನುವಾರ ನೆಟ್‌ ಪ್ರಾಕ್ಟೀಸ್‌ ವೇಳೆ ನಾಯಕ ರೋಹಿತ್‌ ಶರ್ಮಾ ಮೊಣಕಾಲಿಗೆ ಚೆಂಡು ಬಡಿದಿದೆ. ಅವರು ಅಭ್ಯಾಸ ಮುಂದುವರಿಸಿದರೂ, ಬಳಿಕ ಫಿಸಿಯೋಗಳು ರೋಹಿತ್‌ರ ಮೊಣಕಾಲಿಗೆ ಐಸ್ ಪ್ಯಾಕ್‌ ಇಟ್ಟು ಉಪಚರಿಸಿದ್ದಾರೆ. ಕಾಲಿನಲ್ಲಿ ನೋವಿದ್ದರೂ ಶೀಘ್ರವಾಗಿ ಸಂಪೂರ್ಣ ಗುಣಮುಖರಾಗುವ ನಿರೀಕ್ಷೆಯಲ್ಲಿದ್ದಾರೆ.

'ಕ್ರೀಡಾ ರಾಯಭಾರಿಯಾಗಿ ನೀವು ಇಡೀ ದೇಶಕ್ಕೆ ಹೆಮ್ಮೆ ತಂದಿದ್ದೀರಿ': ಅಶ್ವಿನ್ ಕೊಂಡಾಡಿದ ಪ್ರಧಾನಿ ಮೋದಿ

ಮತ್ತೊಂದೆಡೆ ವೇಗದ ಬೌಲರ್‌ ಆಕಾಶ್‌ದೀಪ್‌ ಕೈಗೂ ಭಾನುವಾರ ಚೆಂಡು ಬಡಿದಿದೆ. ಬ್ಯಾಟಿಂಗ್‌ ಅಭ್ಯಾಸ ಮಾಡುತ್ತಿದ್ದಾಗ ಚೆಂಡು ಆಕಾಶ್‌ರ ಕೈಗೆ ತಾಗಿದೆ. ಇದರಿಂದ ನೋವಿನಿಂದ ಚೀರಾಡಿದ್ದು, ಕೂಡಲೇ ವೈದ್ಯಕೀಯ ಸಿಬ್ಬಂದಿ ಚಿಕಿತ್ಸೆ ನೀಡಿದ್ದಾರೆ.

ಇಬ್ಬರ ಬಗ್ಗೆಯೂ ಆಕಾಶ್‌ದೀಪ್‌ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿದ್ದು, ಅಭ್ಯಾಸದ ವೇಳೆ ಇದೆಲ್ಲಾ ಸಹಜ ಎಂದಿದ್ದಾರೆ. ಪ್ರಾಕ್ಟೀಸ್‌ ವೇಳೆ ಇಂತಹದ್ದೆಲ್ಲಾ ನಡೆಯುತ್ತಿರುತ್ತದೆ. ಸದ್ಯ ತಂಡದಲ್ಲಿ ಯಾರೂ ಕೂಡಾ ಗಾಯಗೊಂಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಸದ್ಯ 5 ಪಂದ್ಯಗಳ ಸರಣಿ 1-1ರಿಂದ ಸಮಬಲಗೊಂಡಿದೆ. ಪರ್ತ್‌ ಟೆಸ್ಟ್‌ನಲ್ಲಿ ಭಾರತ ಗೆದ್ದಿದ್ದರೆ, ಅಡಿಲೇಡ್‌ನ ಪಿಂಕ್‌ ಬಾಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆಲುವು ತನ್ನದಾಗಿಸಿಕೊಂಡಿತ್ತು. ಮಳೆ ಪೀಡಿತ ಬ್ರಿಸ್ಬೇನ್‌ ಟೆಸ್ಟ್ ಡ್ರಾಗೊಂಡಿತ್ತು.

ದಿಢೀರ್ ನಿವೃತ್ತಿಯ ಬೆನ್ನಲ್ಲೇ ತಮ್ಮ ತಂದೆಯನ್ನು ಅವರ ಪಾಡಿಗೆ ಬಿಟ್ಟುಬಿಡಿ ಎಂದಿದ್ದೇಕೆ ಅಶ್ವಿನ್?

ಪ್ರಾಕ್ಟೀಸ್‌ ಪಿಚ್‌ ಬಗ್ಗೆ ಟೀಂ ಇಂಡಿಯಾ ಅತೃಪ್ತಿ

ಅಭ್ಯಾಸಕ್ಕೆ ಒದಗಿಸಿದ ಪಿಚ್‌ ಬಗ್ಗೆ ಭಾರತ ತಂಡ ಅತೃಪ್ತಿ ಹೊಂದಿದೆ ಎಂದು ವರದಿಯಾಗಿದೆ. ಸಾಮಾನ್ಯವಾಗಿ ಮೆಲ್ಬರ್ನ್‌ ಕ್ರೀಡಾಂಗಣದ ಪಿಚ್‌ನಲ್ಲಿ ಹೆಚ್ಚಿನ ಬೌನ್ಸ್‌ ಇರಲಿದೆ. ಆದರೆ ಅಭ್ಯಾಸದ ಪಿಚ್‌ನಲ್ಲಿ ಬೌನ್ಸ್‌ ಕಂಡುಬರುತ್ತಿಲ್ಲ. ಚೆಂಡು ಸಾಧಾರಣ ಎತ್ತರಕ್ಕೆ ಬೌನ್ಸ್‌ ಆಗುತ್ತಿದೆ. ಇದು ಭಾರತೀಯರನ್ನು ತೊಂದರೆಗೆ ಸಿಲುಕಿಸುವ ತಂತ್ರ ಎಂದು ವಿಶ್ಲೇಷಿಸಲಾಗುತ್ತಿದೆ.

ಮೆಲ್ಬರ್ನ್‌ನ ಕಳೆದೆರಡೂ ಟೆಸ್ಟ್‌ನಲ್ಲಿ ಗೆದ್ದಿದೆ ಭಾರತ

ಭಾರತ ತಂಡ ಕಳೆದೆರಡು ಬಾರಿ ಆಸ್ಟ್ರೇಲಿಯಾ ಪ್ರವಾಸದಲ್ಲೂ ಮೆಲ್ಬರ್ನ್‌ ಟೆಸ್ಟ್‌ನಲ್ಲಿ ಗೆದ್ದಿದೆ. 2018-19ರಲ್ಲಿ 137 ರನ್‌ಗಳಿಂದ ಜಯಗಳಿಸಿದ್ದರೆ, 2020-21ರಲ್ಲಿ ಭಾರತ 8 ವಿಕೆಟ್‌ ಜಯಭೇರಿ ಬಾರಿಸಿತ್ತು. ಒಟ್ಟಾರೆ ಈ ಕ್ರೀಡಾಂಗಣದಲ್ಲಿ ಭಾರತ ಆಡಿರುವ 14 ಪಂದ್ಯಗಳ ಪೈಕಿ 4ರಲ್ಲಿ ಗೆದ್ದಿದೆ. 8 ಪಂದ್ಯಗಳಲ್ಲಿ ಸೋತಿದ್ದರೆ, 2 ಪಂದ್ಯ ಡ್ರಾಗೊಂಡಿವೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?