
ಬ್ರಿಸ್ಬೇನ್(ಜ.16): ಭಾರತ-ಆಸ್ಟ್ರೇಲಿಯಾ ನಡುವಿನ ಬ್ರಿಸ್ಬೇನ್ ಟೆಸ್ಟ್ ಪಂದ್ಯಕ್ಕೆ ವರುಣರಾಯ ಅಡ್ಡಿಪಡಿಸಿದ್ದು, ಚಹ ವಿರಾಮದ ಬಳಿಕ ದೀಢಿರ್ ಎನ್ನುವಂತೆ ಸುರಿದ ಮಳೆಯಿಂದಾಗಿ ಪಂದ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಚಹಾ ವಿರಾಮದ ವೇಳೆಗೆ ಭಾರತ ತಂಡ 2 ವಿಕೆಟ್ ಕಳೆದುಕೊಂಡು 62 ರನ್ ಬಾರಿಸಿದ್ದು, ಇನ್ನೂ ಮೊದಲ ಇನಿಂಗ್ಸ್ನಲ್ಲಿ 307 ರನ್ಗಳ ಹಿನ್ನಡೆಯಲ್ಲಿದೆ. ಚಹಾ ವಿರಾಮದ ಬಳಿಕ ಏಕಾಏಕಿ ಸುರಿದ ಮಳೆಗೆ ಪಂದ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಟೀಂ ಇಂಡಿಯಾ ನಾಯಕ ಅಜಿಂಕ್ಯ ರಹಾನೆ(02) ಹಾಗೂ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ 8 ರನ್ ಬಾರಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ.
ಬ್ರಿಸ್ಬೇನ್ ಟೆಸ್ಟ್: ಭಾರತಕ್ಕೆ ಆರಂಭಿಕ ಆಘಾತ
ಅಂಪೈರ್ಗಳು ಎರಡೆರಡು ಬಾರಿ ಮೈದಾನ ಪ್ರವೇಶಿಸಿ ವಾತಾವರಣ ಪರೀಕ್ಷಿಸಿದ್ದಾರೆ. ಔಟ್ ಫೀಲ್ಡ್ ಒದ್ದೆಯಾಗಿರುವುದರಿಂದ ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ ಆತಿಥೇಯ ಆಸ್ಟ್ರೇಲಿಯಾ ತಂಡ ಮಾರ್ನಸ್ ಲಬುಶೇನ್ ಆಕರ್ಷಕ ಶತಕ ಹಾಗೂ ನಾಯಕ ಟಿಮ್ ಪೈನ್ ಸಮಯೋಚಿತ ಅರ್ಧಶತಕದ ನೆರವಿನಿಂದ 369 ರನ್ ಬಾರಿಸಿ ಆಲೌಟ್ ಆಗಿದೆ. ಭಾರತ ಪರ ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್ ಮತ್ತು ಟಿ. ನಟರಾಜನ್ ತಲಾ 3 ವಿಕೆಟ್ ಪಡೆದರೆ, ಮೊಹಮ್ಮದ್ ಸಿರಾಜ್ ಒಂದು ವಿಕೆಟ್ ಪಡೆದಿದ್ದಾರೆ.
ಸಂಕ್ಷಿಪ್ತ ಸ್ಕೋರ್"
ಆಸ್ಟ್ರೇಲಿಯಾ: 369/10
ಮಾರ್ನಸ್ ಲಬುಶೇನ್: 108
ಟಿ. ನಟರಾಜನ್: 78/3
ಭಾರತ: 62/2
ರೋಹಿತ್ ಶರ್ಮಾ: 44
ನೇಥನ್ ಲಯನ್: 10/1
(* ಎರಡನೇ ದಿನದಾಟದ ಚಹಾ ವಿರಾಮದ ಅಂತ್ಯದ ವೇಳೆಗೆ)
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.