6 ವಿಕೆಟ್ ಪತನ, 321ರನ್ ಹಿನ್ನಡೆ, ಚೆನ್ನೈ ಟೆಸ್ಟ್‌ನ 3ನೇ ದಿನವೂ ಭಾರತಕ್ಕೆ ಸಂಕಷ್ಟ!

Published : Feb 07, 2021, 05:34 PM ISTUpdated : Feb 07, 2021, 05:49 PM IST
6 ವಿಕೆಟ್ ಪತನ, 321ರನ್  ಹಿನ್ನಡೆ, ಚೆನ್ನೈ ಟೆಸ್ಟ್‌ನ 3ನೇ ದಿನವೂ ಭಾರತಕ್ಕೆ ಸಂಕಷ್ಟ!

ಸಾರಾಂಶ

ಚೆನ್ನೈ ಟೆಸ್ಟ್ ಪಂದ್ಯದ 3ನೇ ದಿನವೂ ಟೀಂ ಇಂಡಿಯಾಗೆ ಹಿನ್ನಡೆಯಾಗಿದೆ. 6 ವಿಕೆಟ್ ಕಳೆದುಕೊಂಡಿರುವ ಟೀಂ ಇಂಡಿಯಾ 321 ರನ್ ಹಿನ್ನಡೆಯಲ್ಲಿದೆ. ತೃತೀಯ ದಿನದಾಟದ ಹೈಲೈಟ್ಸ್ ಇಲ್ಲಿದೆ.

ಚೆನ್ನೈ(ಫೆ.07): ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ 3 ದಿನವೂ ಹಿನ್ನಡೆ ಅನುಭವಿಸಿದೆ. 3ನೇ ದಿನದಲ್ಲಿ ಇಂಗ್ಲೆಂಡ್ ತಂಡ 578 ರನ್ ಸಿಡಿಸಿ ಆಲೌಟ್ ಆಗಿತ್ತು.  ಬೃಹತ್ ಮೊತ್ತಕ್ಕೆ ಉತ್ತರವಾಗಿ ಮೊದಲ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ ಮಕಾಡೆ ಮಲಗಿತು.

91 ರನ್ ಸಿಡಿಸಿ ರಿಷಬ್ ಪಂತ್ ಔಟ್, ಸಂಕಷ್ಟಕ್ಕೆ ಸಿಲುಕಿದ ಭಾರತ!.

ರೋಹಿತ್ ಶರ್ಮಾ ಕೇವಲ 6 ರನ್ ಸಿಡಿಸಿ ಔಟಾಗೋ ಮೂಲಕ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾದರು. ಶುಭಮನ್ ಗಿಲ್ 29 ರನ್ ಸಿಡಿಸಿದರು. ಚೇತೇಶ್ವರ್ ಪೂಜಾರ ತಂಡಕ್ಕೆ ಆಸರೆಯಾದರೆ, ನಾಯಕ ವಿರಾಟ್ ಕೊಹ್ಲಿ ಕೇವಲ 11 ರನ್ ಸಿಡಿಸಿ ಔಟಾದರು. ಇತ್ತ ಉಪನಾಯಕ ಅಜಿಂಕ್ಯ ರಹಾನೆ 1 ರನ್ ಸಿಡಿಸಿ ನಿರ್ಗಮಿಸಿದರು.

73 ರನ‌್‌ಗಳಿಗೆ 4 ವಿಕೆಟ್ ಕಳೆದುಕೊಂಡ ಟೀಂ ಇಂಡಿಯಾಗೆ ಪೂಜಾರ ಹಾಗೂ ರಿಷಪ್ ಪಂತ್ ನೆರವಾದರು. ಇವರಿಬ್ಬರ ಜೊತೆಯಾಟದಿಂದ ಟೀಂ ಇಂಡಿಯಾ ಚೇತರಿಸಿಕೊಂಡಿತು. ಆದರೆ ಪೂಜಾರ 73 ರನ್ ಸಿಡಿಸಿ ಔಟಾದರೆ, ಪಂತ್ 91 ರನ್ ಸಿಡಿಸಿದರು. 

ವಾಶಿಂಗ್ಟನ್ ಸುಂದರ್ ಅಜೇಯ 33 ಹಾಗೂ ಆರ್ ಅಶ್ವಿನ್ ಅಜೇಯ  8 ರನ್ ಸಿಡಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ. 4ನೇ ದಿನದಾಟ ಇದೀಗ ಕುತೂಹಲ ಕೆರಳಿಸಿದೆ. ಟೀಂ ಇಂಡಿಯಾವನ್ನು ಆಲೌಟ್ ಮಾಡುಲ ಲೆಕ್ಕಾಚಾರದಲ್ಲಿರುವ ಇಂಗ್ಲೆಂಡ್ ತಂಡಕ್ಕೆ ಭಾರತ ತಿರುಗೇಟು ನೀಡುತ್ತಾ ಅನ್ನೋ ಕುತೂಹಲ ಮನೆ ಮಾಡಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?