ಧೋನಿಗೆ ಭಾರತ ರತ್ನ ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ ಕಾಂಗ್ರೆಸ್ ನಾಯಕ!

Published : Aug 17, 2020, 07:59 PM ISTUpdated : Aug 17, 2020, 08:02 PM IST
ಧೋನಿಗೆ ಭಾರತ ರತ್ನ ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ ಕಾಂಗ್ರೆಸ್ ನಾಯಕ!

ಸಾರಾಂಶ

ಟೀಂ ಇಂಡಿಯಾ ಕಂಡ ಶ್ರೇಷ್ಠ ಕ್ರಿಕೆಟಿಗ, ಭಾರತಕ್ಕೆ ಟಿ20 ವಿಶ್ವಕಪ್, ಏಕದಿನ ವಿಶ್ವಕಪ್ ಹಾಗೂ ಚಾಂಪಿಯನ್ಸ್ ಟ್ರೋಫಿ ಗೆಲ್ಲಿಸಿಕೊಟ್ಟ ಶ್ರೇಷ್ಠ ನಾಯಕ. ಇದೀಗ ದಿಢೀರ್ ವಿದಾಯ ನೀಡಿ ಧೋನಿ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ಧೋನಿ ವಿದಾಯದ ಬೆನ್ನಲ್ಲೇ ಕಾಂಗ್ರೆಸ್ ನಾಯಕ, ಧೋನಿಗೆ ಭಾರತ ರತ್ನ ನೀಡಲು ಆಗ್ರಹಿಸಿದ್ದಾರೆ.

ನವದೆಹಲಿ(ಆ.17):  ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ ದಿಢೀರ್ ವಿದಾಯ ಹೇಳಿ ಶಾಕ್ ನೀಡಿದ್ದಾರೆ. ಧೋನಿ ಕಮ್‌ಬ್ಯಾಕ್ ಮಾಡಲಿದ್ದಾರೆ ಅನ್ನೋ ಅಭಿಮಾನಿಗಳ ಕೊನಯ ಆಸೆ ಈಡೇರಿಲ್ಲ. ಐಪಿಎಲ್ ಟೂರ್ನಿಗೆ ತಯಾರಿ ನಡೆಸುತ್ತಿರುವ ನಡುವೆ ಯಾರಿಗೂ ಸುಳಿವು ನೀಡಿದಂತೆ ಧೋನಿ ತಮ್ಮ ವಿದಾಯ ಘೋಷಿಸಿದ್ದಾರೆ. ಧೋನಿ ವಿದಾಯದ ಬೆನ್ನಲ್ಲೇ ಕಾಂಗ್ರೆಸ್ ನಾಯಕ ಕೆಪಿ ಶರ್ಮಾ , ಧೋನಿಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿದ್ದಾರೆ.

2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಧೋನಿಗೆ ಸುಬ್ರಮಣಿಯನ್ ಸ್ವಾಮಿ ಸಲಹೆ!

ಎಂ.ಎಸ್.ಧೋನಿ ಜಗತ್ತನ್ನೇ ಗೆದ್ದ ನಾಯಕ. ಭಾರತ ತಂಡದ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ ಕ್ರಿಕೆಟಿಗ. ಈ ಶ್ರೇಷ್ಠ ಕ್ರಿಕೆಟಿಗನಿಗೆ ಕೇಂದ್ರ ಸರ್ಕಾರ ಭಾರತ ರತ್ನ ನೀಡಬೇಕು ಎಂದು ಕೆಪಿ ಶರ್ಮಾ ಟ್ವಿಟರ್ ಮೂಲಕ ಆಗ್ರಹಿಸಿದ್ದಾರೆ.

 

ವಿಶ್ವಕಪ್, ನಂ.1 ಪಟ್ಟ ಭಾರತಕ್ಕೆ ಎಲ್ಲವನ್ನೂ ಗೆದ್ದು ಕೊಟ್ಟ ಸಾಧಕ ನಮ್ಮ ಮಹಿ..!...

ಎಂ.ಎಸ್.ಧೋನಿ ಕ್ರೀಡಾ ವಿಭಾಗದ ಅತ್ಯುನ್ನತ ಗೌರವ ಖೇಲ್ ರತ್ನ ಪ್ರಶಸ್ತಿಗೆ ಭಾದೃಜನರಾಗಿದ್ದಾರೆ. ಇದರ ಜೊತೆಗೆ ಪದ್ನಭೂಷಣ ಹಾಗೂ ಪದ್ನಶ್ರಿ ಪ್ರಶಸ್ತಿಗೂ ಭಾಜನರಾಗಿದ್ದಾರೆ. ಇದೀಗ ಭಾರತ ರತ್ನ ನೀಡುವಂತೆ ಕೆಪಿ ಶರ್ಮಾ ಆಗ್ರಹಕ್ಕೆ ಅಭಿಮಾನಿಗಳಿ ಧನಿಗೂಡಿಸಿದ್ದಾರೆ.

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ವಿದಾಯದ ಬಳಿಕ 2014ರಲ್ಲಿ ಭಾರತದ ಅತ್ಯುನ್ನತ ಪ್ರಶಸ್ತಿ ಭಾರತ ರತ್ನ ನೀಡಿ ಗೌರವಿಸಲಾಗಿದೆ. ಈ ಮೂಲಕ ಸಚಿನ್ ತೆಂಡುಲ್ಕರ್ ಭಾರತ ರತ್ನ ಪ್ರಶಸ್ತಿ ಪಡೆದ ಮೊದಲ ಕ್ರೀಡಾಪಟು ಅನ್ನೋ ಹೆಗ್ಗಳಿಕಗೆ ಪಾತ್ರರಾಗಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಾವ ಭಾರತೀಯನೂ ಮಾಡದ ಅಪರೂಪದ ದಾಖಲೆ ಬರೆದ ಜಸ್ಪ್ರೀತ್ ಬುಮ್ರಾ!
ಸೈಲೆಂಟ್ ಆದ ಸೌತ್ ಆಫ್ರಿಕಾ , 74 ರನ್‌ಗೆ ಆಲೌಟ್ ಮಾಡಿ 101 ರನ್ ಗೆಲುವು ದಾಖಲಿಸಿದ ಭಾರತ