
ಕೋಲ್ಕತಾ(ಮಾ.24): ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ಸೋಂಕಿನಿಂದಾಗಿ ಎಲ್ಲೆಡೆ ಭೀತಿ ಹೆಚ್ಚುತ್ತಿದ್ದು ಬಂಗಾಳ ಕ್ರಿಕೆಟ್ ಸಂಸ್ಥೆ (ಸಿಎಬಿ) ತನ್ನ ಆಟಗಾರರು, ಸಿಬ್ಬಂದಿಗೆ ವಿಮೆ ಮಾಡಿಸಿದೆ. ಈ ಕ್ರಮ ಕೈಗೊಂಡ ಭಾರತದ ಮೊದಲ ಕ್ರಿಕೆಟ್ ಸಂಸ್ಥೆ ಎನ್ನುವ ಹಿರಿಮೆಗೆ ಪಾತ್ರವಾಗಿದೆ.
ಕೊರೋನಾ ವಿರುದ್ಧ ಸೆಣಸಲು ಪುದುಚೇರಿ ಕ್ರಿಕೆಟ್ ಸಂಸ್ಥೆಯಿಂದ 'ಅಳಿಲು ಸೇವೆ'
ಮಹಿಳಾ ಕ್ರಿಕೆಟಿಗರು, ರಾಜ್ಯ ಸಂಸ್ಥೆಯಿಂದ ಮಾನ್ಯತೆ ಪಡೆದ ಅಂಪೈರ್, ರೆಫ್ರಿಗಳು, ಸ್ಕೋರರ್ಗಳು, ಮಾಜಿ ಕ್ರಿಕೆಟಿಗರು ಸೇರಿ ಒಟ್ಟು 3,200 ಮಂದಿಗೆ ಅನುಕೂಲವಾಗಲಿದೆ ಎಂದು ಸಿಎಬಿ ಅಧ್ಯಕ್ಷ ಅಭಿಷೇಕ್ ದಾಲ್ಮಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ‘ಬಂಗಾಳ ಕ್ರಿಕೆಟ್ ಸಂಸ್ಥೆಗೆ ಸೇರಿದ ಯಾರೊಬ್ಬರೂ ಆತಂಕಪಡುವುದು ಬೇಕಿಲ್ಲ. ಆದರೆ ಎಲ್ಲರೂ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು’ ಎಂದು ಅಭಿಷೇಕ್ದ ಹೇಳಿದ್ದಾರೆ.
ಕೊರೋನಾ ವಿರುದ್ಧ ಭಾರತದ ಹೋರಾಟಕ್ಕೆ WHO ಮೆಚ್ಚುಗೆ
ದೇಶದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಬೆಳಕಿಗೆ ಬರುತ್ತಿದ್ದಂತೆಯೇ ಮುನ್ನೆಚ್ಚರಿಕಾ ಕ್ರಮವಾಗಿ ಬಂಗಾಳ ಕ್ರಿಕೆಟ್ ಸಂಸ್ಥೆ ಶನಿವಾರದವರೆಗೂ ಬಾಗಿಲನ್ನು ಮುಚ್ಚಿತ್ತು. ಇದೀಗ ರಾಜ್ಯ ಸರ್ಕಾರದ ಸುತ್ತೋಲೆಯಂತೆ ಮಾರ್ಚ್ 27ರವರೆಗೂ ಸಂಸ್ಥೆಯ ಬಾಗಿಲು ಮುಚ್ಚಲು ತೀರ್ಮಾನಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.