ಕ್ರಿಕೆಟಿಗರಿಗೆ ಕೊರೋನಾ ಲಸಿಕೆ; ಕೇಂದ್ರ ಆರೋಗ್ಯ ಇಲಾಖೆ ಜೊತೆ ಬಿಸಿಸಿಐ ಮಾತುಕತೆ!

Published : Apr 04, 2021, 09:05 PM IST
ಕ್ರಿಕೆಟಿಗರಿಗೆ ಕೊರೋನಾ ಲಸಿಕೆ; ಕೇಂದ್ರ ಆರೋಗ್ಯ ಇಲಾಖೆ ಜೊತೆ ಬಿಸಿಸಿಐ ಮಾತುಕತೆ!

ಸಾರಾಂಶ

IPL ಟೂರ್ನಿ ಆರಂಭಕ್ಕೆ ಕೆಲ ದಿನಗಳಿರುವಾಗಲೇ ಕೊರೋನಾ ಅಟ್ಟಹಾಸ ಮಿತಿ ಮೀರಿದೆ. ಹೀಗಾಗಿ ಟೂರ್ನಿ ಆಯೋಜನೆ ಇದೀಗ ಸವಾಲಾಗಿದೆ. ಅದರಲ್ಲೂ ಕೆಲ ಆಟಗಾರರು ಕೊರೋನಾ ಸೋಂಕಿಗೆ ತುತ್ತಾಗಿದ್ದು, ಬಿಸಿಸಿಐ ತಲೆನೋವು ಹೆಚ್ಚಿಸಿದೆ. ಹೀಗಾಗಿ ಇದೀಗ ಆಟಗಾರರಿಗೆ ಲಸಿಕೆ ನೀಡಿಲು ಬಿಸಿಸಿಐ ಯೋಜನೆ ಹಾಕಿಕೊಂಡಿದೆ.

ಮುಂಬೈ(ಎ.04): ಐಪಿಎಲ್ ಟೂರ್ನಿ ಆರಂಭಕ್ಕೆ ಕೆಲ ದಿನಗಳು ಮಾತ್ರ ಬಾಕಿ ಇವೆ. ಟೂರ್ನಿಗೆ ಭರ್ಜರಿ ತಯಾರಿ ನಡೆಯುತ್ತಿರುವಾಗಲೇ ಕೆಲ ಕ್ರಿಕೆಟಿಗರಿಗೆ ಕೊರೋನಾ ಅಂಟಿಕೊಂಡಿದೆ. ಇದು ಫ್ರಾಂಚೈಸಿ ಮಾತ್ರವಲ್ಲ ಬಿಸಿಸಿಐ ಚಿಂತೆ ಹೆಚ್ಚಿಸಿದೆ. ಇತ್ತ ದೇಶದಲ್ಲಿ ಕೊರೋನಾ ಪ್ರಕರಗಳು ಅತಿಯಾಗುತ್ತಿರುವ ಕಾರಣ ನಿಗದಿತ ಕ್ರೀಡಾಂಣದಲ್ಲಿ ಟೂರ್ನಿ ಆಯೋಜನೆ ಕೂಡ ಕಷ್ಟವಾಗುತ್ತಿದೆ.

ಐಪಿಎಲ್ ಟೂರ್ನಿಯಿಂದ ಹೊರಬಿದ್ದರೂ ಅಯ್ಯರ್‌ಗೆ ಸಿಗಲಿದೆ ಫುಲ್ ಸ್ಯಾಲರಿ!

ಐಪಿಎಲ್ ಟೂರ್ನಿ ಸುಸೂತ್ರವಾಗಿ ನಡೆಯಲು ಇದೀಗ ಬಿಸಿಸಿಐ ಎಲ್ಲಾ ಕ್ರಿಕೆಟಿಗರಿಗೆ ಕೊರೋನಾ ಲಸಿಕೆ ನೀಡಲು ಬಿಸಿಸಿಐ ಮುಂದಾಗಿದೆ. ಐಪಿಎಲ್ ಟೂರ್ನಿ ಆರಂಭಕ್ಕೂ ಮುನ್ನ ಕ್ರಿಕೆಟಿಗರಿಗೆ ಲಸಿಕೆ ನೀಡೋ ಮೂಲಕ ಆಟಗಾರರನ್ನು ಸುರಕ್ಷಿತವಾಗಿಡಲು ಬಿಸಿಸಿಐ ನಿರ್ಧರಿಸಿದೆ.

ಲಸಿಕೆಗಾಗಿ ಬಿಸಿಸಿಐ ಕೇಂದ್ರ ಆರೋಗ್ಯ ಇಲಾಖೆ ಜೊತೆ ನಿರಂತರ ಸಂಪರ್ಕದಲ್ಲಿದೆ. ಈ ಕುರಿತು ಶೀಘ್ರದಲ್ಲೇ ಅಂತಿಮ ನಿರ್ಧಾರ ಹೊರಬೀಳಲಿದೆ ಎಂದು ಐಪಿಎಲ್ ಉಪಾಧ್ಯಕ್ಷ ರಾಜೀವ್ ಶುಕ್ಲಾ ಹೇಳಿದ್ದಾರೆ. 

ಕೊರೋನಾ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮುಂಬೈನಲ್ಲಿನ ಪಂದ್ಯಗಳನ್ನು ಹೈದರಾಬಾದ್‌ಗೆ ಸ್ಥಳಾಂತರಿಸುವ ಕುರಿತು ಬಿಸಿಸಿಐ ಚಿಂತನೆ ನಡೆಸಿದೆ. ಸದ್ಯ ಯಾವುದೇ ಬದಲಾವಣೆ ಇಲ್ಲ ಎಂದಿದೆ. ಎಪ್ರಿಲ್ 9 ರಿಂದ  ಐಪಿಎಲ್ ಟೂರ್ನಿ ಆರಂಭಗೊಳ್ಳಲಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

One8 ಸ್ಪೋರ್ಟ್ಸ್ ಬ್ರ್ಯಾಂಡ್ ಮಾರಾಟಕ್ಕೆ ಮುಂದಾದ ಕೊಹ್ಲಿ, 40 ಕೋಟಿ ಹೂಡಿಕೆ ಪ್ಲಾನ್
ಸ್ಮೃತಿ ಮಂಧನಾ ಮದುವೆ ಮುರಿದ ಬಳಿಕ ಟೀಮ್‌ ಇಂಡಿಯಾ ಆಟಗಾರ್ತಿಯರ ಮಹಾ ನಿರ್ಧಾರ!