ಟಿ20 ವಿಶ್ವಕಪ್‌ ಮುಂದೂಡಿ: ಐಸಿಸಿಗೆ ಆಸ್ಪ್ರೇಲಿಯಾ ಮನವಿ

Suvarna News   | Asianet News
Published : May 30, 2020, 06:57 PM IST
ಟಿ20 ವಿಶ್ವಕಪ್‌ ಮುಂದೂಡಿ: ಐಸಿಸಿಗೆ ಆಸ್ಪ್ರೇಲಿಯಾ ಮನವಿ

ಸಾರಾಂಶ

ಐಸಿಸಿ ಟಿ20 ವಿಶ್ವಕಪ್ ಆಯೋಜನೆಯ ಬಗ್ಗೆ ಅನಿಶ್ಚಿತತೆ ಮುಂದುವರೆದಿದೆ. ಇದರ ಬೆನ್ನಲ್ಲೇ ಕ್ರಿಕೆಟ್‌ ಆಸ್ಪ್ರೇಲಿಯಾ ಟೂರ್ನಿಯನ್ನು ಒಂದು ವರ್ಷ ಮುಂದೂಡುವುದು ಒಳಿತು ಎಂದಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

ಮೆಲ್ಬರ್ನ್(ಮೇ.30)‌: ಅಕ್ಟೋಬರ್‌-ನವೆಂಬರ್‌ನಲ್ಲಿ ಆಯೋಜಿಸಲಾಗಿರುವ ಟಿ20 ವಿಶ್ವಕಪ್‌ ಟೂರ್ನಿಯನ್ನು ಮುಂದಿನ ವರ್ಷ ನಡೆಸಲು ಅವಕಾಶ ನೀಡಬೇಕು ಎಂದು ಕ್ರಿಕೆಟ್‌ ಆಸ್ಪ್ರೇಲಿಯಾ (ಸಿಎ) ಐಸಿಸಿಗೆ ಮನವಿ ಮಾಡಿದೆ. 

ಸಿಎ ಮುಖ್ಯಸ್ಥ ಎರ್ಲ್ ಎಡ್ಡಿಂಗ್ಸ್‌, ಐಸಿಸಿಯ ಹಣಕಾಸು ಸಮಿತಿಗೆ ಟಿ20 ವಿಶ್ವಕಪ್‌ ಅನ್ನು ಮುಂದೂಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಕೊರೋನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕ್ರಿಕೆಟ್‌ ಆಸ್ಪ್ರೇಲಿಯಾ ಭಾರೀ ನಷ್ಟ ಅನುಭವಿಸಿದೆ. ಈ ವರ್ಷಾಂತ್ಯದಲ್ಲಿ ಟಿ20 ವಿಶ್ವಕಪ್‌ ಆತಿಥ್ಯ ಅಸಾಧ್ಯ ಎಂದು ಸಿಇಒ ಕೆವಿನ್‌ ರಾಬರ್ಟ್ಸ್ ಶುಕ್ರವಾರ ಹೇಳಿರುವುದು ಟೂರ್ನಿ ಮುಂದೂಡಿಕೆ ವರದಿಗೆ ಪುಷ್ಟಿ ನೀಡಿದಂತಾಗಿದೆ.

ಬಹುನಿರೀಕ್ಷಿತ 2020ರ ಟಿ20 ವಿಶ್ವ​ಕಪ್‌ ಮುಂದ​ಕ್ಕೆ?

ಎಲ್ಲವೂ ಈ ಮೊದಲಿನಂತೆ ಅಂದುಕೊಂಡಂತೆ ಆದರೆ ಟಿ20 ವಿಶ್ವಕಪ್ ಅಕ್ಟೋಬರ್ 18ರಿಂದ ನವೆಂಬರ್ 15ರವರೆಗೆ ನಡೆಯಲಿದೆ. ಆದರೆ ಕೊರೋನಾ ಆರ್ಭಟದಿಂದಾಗಿ ಎಲ್ಲಾ ಕ್ರೀಡಾಚಟುವಟಿಕೆಗಳು ಸ್ತಬ್ಧವಾಗಿವೆ. 

55 ಕ್ರಿಕೆಟ್‌ ಆಟಗಾರರ ಅಭ್ಯಾಸಕ್ಕೆ ಇಸಿಬಿ ವೇದಿಕೆ

ಲಂಡನ್‌: ಜುಲೈನಿಂದ ಕ್ರಿಕೆಟ್‌ ಚಟುವಟಿಕೆಗಳನ್ನು ಆರಂಭಿಸುವ ಯೋಚನೆಯಲ್ಲಿರುವ ಇಂಗ್ಲೆಂಡ್‌ ಮತ್ತು ವೇಲ್ಸ್‌ ಕ್ರಿಕೆಟ್‌ ಮಂಡಳಿ (ಇಸಿಬಿ) ಶುಕ್ರವಾರ 55 ಆಟಗಾರರ ಹೊರಾಂಗಣ ಅಭ್ಯಾಸಕ್ಕೆ ವೇದಿಕೆ ಸಜ್ಜುಗೊಳಿಸಿದೆ. 

ಮುಂಬರುವ ಟೆಸ್ಟ್‌ ಸರಣಿಗಳನ್ನು ಗಮನದಲ್ಲಿರಿಸಿಕೊಂಡು ಕಳೆದ ವಾರವೇ 18 ಬೌಲರ್‌ಗಳ ಅಭ್ಯಾಸಕ್ಕೆ ಅವಕಾಶ ನೀಡಲಾಗಿತ್ತು. 18 ಬೌಲರ್‌ಗಳು ಸೇರಿದಂತೆ ಇದೀಗ 55 ಆಟಗಾರರ ಹೆಸರನ್ನು ಇಸಿಬಿ ಪ್ರಕಟಿಸಿದೆ. ಈ ಪಟ್ಟಿಯಿಂದ ಅಲೆಕ್ಸ್‌ ಹೇಲ್ಸ್‌, ಲಿಯಾಮ್‌ ಪ್ಲಂಕೆಟ್‌ ಅವರ ಹೆಸರನ್ನು ಕೈ ಬಿಡಲಾಗಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?